ವಿಶ್ವಕನ್ನಡ ಜಾಗೃತಿ ಸಮಾವೇಶದ ಮುಖ್ಯಾಂಶಗಳು
ಬೆಂಗಳೂರು, ಮಾ. 29 : ಭಾಷಾ ಮಾಧ್ಯಮ, ಮೇಕೆದಾಟು ಸೇರಿದಂತೆ ವಿವಿಧ ವಿಚಾರಗಳಲ್ಲಿ ಕರ್ನಾಟಕದ ಹಿತ ಕಾಪಾಡಲು ನಾವು ಆದ್ಯತೆ ನೀಡುತ್ತೇವೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಕನ್ನಡ ನಾಡಿನ ಹಿತ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ 'ವಿಶ್ವ ಕನ್ನಡ ಜಾಗೃತಿ ಸಮಾವೇಶ'ದಲ್ಲಿ ಮಾತನಾಡಿದ ಅವರು, ಕರ್ನಾಟಕದ ಮತ್ತು ಕನ್ನಡಿಗರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದರು.

ಕನ್ನಡ ಭಾಷಾ ಮಾಧ್ಯಮದ ವಿಚಾರದಲ್ಲಿ ಸಂವಿಧಾನದ ವ್ಯಾಪ್ತಿಯಲ್ಲಿ ತೀರ್ಪುಗಳು ಬಂದಿವೆ. ಈಗಲೂ ಭಾಷಾ ಮಾಧ್ಯಮ ಕಡ್ಡಾಯಕ್ಕೆ ಹಲವಾರು ಅವಕಾಶಗಳಿವೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ತಮ್ಮ ತಮ್ಮ ವೇದಿಕೆಗಳಲ್ಲಿ ಈ ಬಗ್ಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಿವೆ ಎಂದು ಹೇಳಿದರು. [ಕಡ್ಡಾಯ ಕನ್ನಡ ಶಿಕ್ಷಣ ಹೋರಾಟಕ್ಕೆ ಮತ್ತೆ ಹಿನ್ನಡೆ]
ಪ್ರಧಾನಿ ಭರವಸೆ ನೀಡಿದ್ದಾರೆ : ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅಣೆಕಟ್ಟು ನಿರ್ಮಾಣ ಮಾಡಲು ಅವಕಾಶ ನೀಡದಂತೆ ಅಲ್ಲಿನ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಒತ್ತಡ ಹೇರಿದ್ದಾರೆ. [ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಲು ಬಿಡೋಲ್ಲ]

ಕರ್ನಾಟಕದ ಎಲ್ಲಾ ಸಂಸದರು ಪಕ್ಷ ಭೇದ ಮರೆತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತಮಿಳುನಾಡಿನ ಒತ್ತಡಕ್ಕೆ ಮಣಿಯಬಾರದು ಎಂದು ಮನವಿ ಮಾಡಿದ್ದೇವೆ. ಪ್ರಧಾನಿ ಮೋದಿ ಅವರು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕರ್ನಾಟಕದ ಸಂಸದರ ಜೊತೆ ಚರ್ಚೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಸದಾನಂದ ಗೌಡರು ತಿಳಿಸಿದರು. [ಕನ್ನಡ, ಸಂಸ್ಕೃತಿ ರಕ್ಷಣೆಗೆ ಕನ್ನಡ, ಸಂಸ್ಕೃತಿ ರಕ್ಷಣೆಗೆ ಸಿದ್ದರಾಮಯ್ಯ]
ಬಿಬಿಎಂಪಿ ವಿಭಜನೆ ಹಿಂದೆ ದುರುದ್ದೇಶ : ಕರ್ನಾಟಕ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವ ನಿರ್ಧಾರ ಕೈಗೊಂಡಿರುವುದು ದುರುದ್ದೇಶ ಪೂರ್ವಕ ಎಂದು ಸದಾನಂದ ಗೌಡ ಹೇಳಿದ್ದಾರೆ. ಬೆಂಗಳೂರನ್ನು ವಿಭಜನೆ ಮಾಡಿದರೆ ಅಭಿವೃದ್ಧಿ ಕುಂಠಿತವಾಗುತ್ತದೆ. ಸಮಸ್ಯೆಗಳು ಹೆಚ್ಚಾಗಿ ಸಂಘರ್ಷ ಹೆಚ್ಚಾಗುತ್ತದೆ ಎಂದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications