ಆಪರೇಶನ್ ಕಮಲ: ಮಾತಿನ ಭರದಲ್ಲಿ ಸತ್ಯ ಒಪ್ಪಿಕೊಂಡ ಬಿಜೆಪಿ ನಾಯಕರು
ಬೆಂಗಳೂರು, ಡಿಸೆಂಬರ್ 17: ಬಿಜೆಪಿ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರು ಅಲೆಮಾರಿಗಳ ರಾಜ ಎಂದು ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಹಿರಿಯ ಸಂಸದ ಶ್ರೀನಿವಾಸ್ ಪ್ರಸಾದ್, ನನ್ನ ವಿರುದ್ಧ ಆರೋಪಿಸುವ ನೈತಿಕತೆ ಎಚ್.ವಿಶ್ವನಾಥ್ ಅವರಿಗೆ ಇಲ್ಲ ಎಂದಿದ್ದಾರೆ.
ಹುಣಸೂರು ಬೈ ಎಲೆಕ್ಷನ್ ಅಲ್ಲಿ ಬಿಜೆಪಿ ನೀಡಿದ್ದ 15 ಕೋಟಿ ರೂಪಾಯಿ ಹಣದಲ್ಲಿ 10 ಕೋಟಿ ರೂಪಾಯಿಯನ್ನು ತಮ್ಮ ಜೇಬಿಗೆ ವಿಶ್ವನಾಥ್ ಇಳಿಸಿಕೊಂಡಿದ್ದರು ಎಂದು ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.

ಮೈಸೂರಿನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವನಾಥ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
'ಕೀಟಲೇ ಮಾಡುವುದು ವಿಶ್ವನಾಥನ ಗುಣವಾಗಿದೆ. ಬಿಜೆಪಿ ಬರುವಂತೆ ನಾನೇನು ವಿಶ್ವನಾಥ್ಗೆ ಕೇಳಿಕೊಂಡಿರಲಿಲ್ಲ. ಆತನ ನನ್ನ ಬಳಿ ಬಂದು ಜೆಡಿಎಸ್ನಲ್ಲಿ ಇರುವುದಕ್ಕೆ ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದ. ಹಾಗಾದರೆ, ಯಡಿಯೂರಪ್ಪನವರ ಜೊತೆ ಮಾತನಾಡಿ ನೋಡು ಎಂಬುದಾಗಿ ಸಲಹೆ ನೀಡಿದ್ದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರನ್ನು ಮುಂಬೈಗೆ ಕರೆದುಕೊಂಡು ಹೋದವನು ಇವನೇ' ಎಂದು ಹರಿಹಾಯ್ದಿದ್ದಾರೆ.
'ಹುಣಸೂರು ಶಾಸಕ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಗೆಲ್ಲುವುದಕ್ಕೆ ಆಗಲಿಲ್ಲ. ಆದರೂ, ಪಕ್ಷವು ಆತನಿಗೆ ಎಂಎಲ್ಸಿ ಸ್ಥಾನ ನೀಡಿ ಗೌರವಿಸಿದೆ. ಪಕ್ಷದ ಬಗ್ಗೆಯೇ ಈಗ ಕೆಟ್ಟದ್ದಾಗಿ ಮಾತನಾಡುತ್ತಿದ್ದಾನೆ' ಎಂದು ತಿಳಿಸಿದ್ದಾರೆ.
ವಿಶ್ವನಾಥ್ ಪ್ರಕಾರ ನಾನು ಅಲೆಮಾರಿಗಳ ರಾಜನಂತೆ. ನಾನು ಸ್ವಾಭಿಮಾನಿಯಾಗಿದ್ದೇನೆ. ವಿಶ್ವನಾಥ್ನಂತೆ ಬೊಗಳುವ ನಾಯಿಯಲ್ಲ. ಈಗ ತನ್ನ ಮಗನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡುವುದಕ್ಕಾಗಿ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ಪಾಠ ಮಾಡಿಕೊಂಡಿರುತ್ತೇನೆ ಎಂದು ಸಿದ್ದರಾಮಯ್ಯನವರಿಂದ ಟಿಕೆಟ್ ಪಡೆದುಕೊಂಡ. ಆದರೆ, ಪಾಠ ಮಾಡದೇ ಕೀಟಲೇ ಮಾಡಿಕೊಂಡಿದ್ದಾರೆ' ಎಂದು ವ್ಯಂಗ್ಯವಾಡಿದ್ದಾರೆ.
ಅಪಥ್ಯವಾಗಿದ್ದರೆ ದೂರ ಇರಲಿ
ಎಂಎಲ್ಸಿ ಎಚ್.ವಿಶ್ವನಾಥ್ ವಿರುದ್ಧ ಮೈಸೂರು ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದ್ದಾರೆ. 'ಪಕ್ಷವು ಹಾಗೂ ಅದರ ಸಿದ್ದಾಂತವು ಅವರಿಗೆ ಅಪಥ್ಯವಾಗಿದ್ದರೆ, ಇಲ್ಲಿರುವುದು ಯೋಗ್ಯವಲ್ಲ' ಎಂದು ತಿಳಿಸಿದ್ದಾರೆ.
ವಿಶ್ವನಾಥ್ ಅವರು ಪಕ್ಷದಲ್ಲೇ ಇದ್ದುಕೊಂಡು, ಸ್ವಪಕ್ಷೀಯರನ್ನೇ ಚುಚ್ಚುವುದು, ತಿವಿಯುವದನ್ನು ಬಿಡಬೇಕು ಎಂದು ಪ್ರತಾಪಸಿಂಹ ತಿಳಿಸಿದ್ದಾರೆ.
ಹುಣಸೂರು ವಿಧಾನಸಭಾ ಚುನಾವಣೆಯಲ್ಲಿ ವಿಶ್ವನಾಥ್ ಅವರಿಗೆ ಜನರು ಬುದ್ದಿ ಕಲಿಸಿದ್ದಾರೆ. ಆದರೂ, ಅವರು ಬುದ್ದಿ ಕಲಿತಿಲ್ಲ ಎಂದು ಟೀಕಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್ ದುಡ್ಡು ತೆಗೆದುಕೊಂಡಿಲ್ಲವೇ?
ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಪಕ್ಷದಿಂದ ತೆಗೆದುಕೊಂಡಿಲ್ಲವೇ ಎಂದು ಎಚ್.ವಿಶ್ವನಾಥ್ ಕೇಳಿದ್ದಾರೆ. ಶ್ರೀನಿವಾಸ ಪ್ರಸಾದರ ಆರೋಪಕ್ಕೆ ವಿಶ್ವನಾಥ್ ಈ ಪ್ರಶ್ನೆ ಕೇಳಿದ್ದಾರೆ. ಈ ಸುದ್ದಿಗೋಷ್ಠಿ ನಡೆಸುವುದಾಗಿಯೂ ಅವರು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications