ನ್ಯಾ. ವಿಶ್ವನಾಥ್ ಶೆಟ್ಟಿ ಹೊಸ ಲೋಕಾಯುಕ್ತ
ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಯವರನ್ನು ನೇಮಕ ಮಾಡಿ ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಬೆಂಗಳೂರು, ಜನವರಿ 26: ಲೋಕಾಯುಕ್ತ ಸಂಸ್ಥೆಗೆ ಕೊನೆಗೂ ದಂಡ ನಾಯಕರೊಬ್ಬರು ಸಿಕ್ಕಿದ್ದಾರೆ. ನ್ಯಾಯಮೂರ್ತಿ ಭಾಸ್ಕರ್ ರಾವ್ ರಿಂದ ತೆರವಾಗಿದ್ದ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ನೇಮಕವಾಗಿದ್ದಾರೆ. ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ರಾಜ್ಯಪಾಲರು ಇಂದು ಸಹಿ ಹಾಕಿದ್ದು, ಶೆಟ್ಟಿ ಹೊಸ ಲೋಕಾಯುಕ್ತರಾಗಿದ್ದಾರೆ.
ಈ ಹಿಂದೆ ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ಲೋಕಾಯುಕ್ತರು ಸಹಿ ಹಾಕಲು ಹಿಂದೇಟು ಹಾಕಿದ್ದರು. ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆದಿರುವ ವಿಚಾರದಲ್ಲಿ ವಿಶ್ವನಾಥ್ ಶೆಟ್ಟಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು.['ಲೋಕಾಯುಕ್ತ ಸಂಸ್ಥೆ ಮುಚ್ಚಲು ಸರ್ಕಾರದ ಷಡ್ಯಂತ್ರ']

ಆದರೆ ರಾಜ್ಯಪಾಲ ವಜೂಭಾಯಿ ವಾಲಾರನ್ನು ಕೆಲವು ದಿನಗಳ ಹಿಂದೆ ಭೇಟಿಯಾಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ, 'ಬಹುತೇಕ ನ್ಯಾಯಮೂರ್ತಿಗಳು ನ್ಯಾಯಾಂಗ ಬಡಾವಣೆಯಲ್ಲಿ ಸೈಟ್ ಪಡೆದಿದ್ದಾರೆ. ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ಯಾವುದೇ ಗುರುತರ ಆರೋಪಗಳಿಲ್ಲ. ಎಂದು ವಿವರಣೆ ನೀಡಿದ್ದರು.[ಲೋಕಾಯುಕ್ತ ಹುದ್ದೆಗೇರಲಿರುವ ನ್ಯಾ.ವಿಶ್ವನಾಥ್ ಶೆಟ್ಟಿ ವ್ಯಕ್ತಿಚಿತ್ರ]
ಇದೀಗ ರಾಜ್ಯಪಾಲರು ಸರಕಾರದ ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಪ್ರತಿಷ್ಠಿತ ಲೋಕಾಯುಕ್ತ ಸಂಸ್ಥೆಯ ಮುಖ್ಯಸ್ಥರ ಹುದ್ದೆಗೆ ಕೊನೆಗೂ ಒಬ್ಬರ ನೇಮಕವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications