ನ್ಯಾ. ವಿಶ್ವನಾಥ್ ಶೆಟ್ಟಿ ಹೊಸ ಲೋಕಾಯುಕ್ತ
ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಯವರನ್ನು ನೇಮಕ ಮಾಡಿ ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಬೆಂಗಳೂರು, ಜನವರಿ 26: ಲೋಕಾಯುಕ್ತ ಸಂಸ್ಥೆಗೆ ಕೊನೆಗೂ ದಂಡ ನಾಯಕರೊಬ್ಬರು ಸಿಕ್ಕಿದ್ದಾರೆ. ನ್ಯಾಯಮೂರ್ತಿ ಭಾಸ್ಕರ್ ರಾವ್ ರಿಂದ ತೆರವಾಗಿದ್ದ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ನೇಮಕವಾಗಿದ್ದಾರೆ. ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ರಾಜ್ಯಪಾಲರು ಇಂದು ಸಹಿ ಹಾಕಿದ್ದು, ಶೆಟ್ಟಿ ಹೊಸ ಲೋಕಾಯುಕ್ತರಾಗಿದ್ದಾರೆ.
ಈ ಹಿಂದೆ ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ಲೋಕಾಯುಕ್ತರು ಸಹಿ ಹಾಕಲು ಹಿಂದೇಟು ಹಾಕಿದ್ದರು. ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆದಿರುವ ವಿಚಾರದಲ್ಲಿ ವಿಶ್ವನಾಥ್ ಶೆಟ್ಟಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು.['ಲೋಕಾಯುಕ್ತ ಸಂಸ್ಥೆ ಮುಚ್ಚಲು ಸರ್ಕಾರದ ಷಡ್ಯಂತ್ರ']

ಆದರೆ ರಾಜ್ಯಪಾಲ ವಜೂಭಾಯಿ ವಾಲಾರನ್ನು ಕೆಲವು ದಿನಗಳ ಹಿಂದೆ ಭೇಟಿಯಾಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ, 'ಬಹುತೇಕ ನ್ಯಾಯಮೂರ್ತಿಗಳು ನ್ಯಾಯಾಂಗ ಬಡಾವಣೆಯಲ್ಲಿ ಸೈಟ್ ಪಡೆದಿದ್ದಾರೆ. ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ಯಾವುದೇ ಗುರುತರ ಆರೋಪಗಳಿಲ್ಲ. ಎಂದು ವಿವರಣೆ ನೀಡಿದ್ದರು.[ಲೋಕಾಯುಕ್ತ ಹುದ್ದೆಗೇರಲಿರುವ ನ್ಯಾ.ವಿಶ್ವನಾಥ್ ಶೆಟ್ಟಿ ವ್ಯಕ್ತಿಚಿತ್ರ]
ಇದೀಗ ರಾಜ್ಯಪಾಲರು ಸರಕಾರದ ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಪ್ರತಿಷ್ಠಿತ ಲೋಕಾಯುಕ್ತ ಸಂಸ್ಥೆಯ ಮುಖ್ಯಸ್ಥರ ಹುದ್ದೆಗೆ ಕೊನೆಗೂ ಒಬ್ಬರ ನೇಮಕವಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications