ನ್ಯಾ. ವಿಶ್ವನಾಥ್ ಶೆಟ್ಟಿ ಹೊಸ ಲೋಕಾಯುಕ್ತ

ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಯವರನ್ನು ನೇಮಕ ಮಾಡಿ ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಬೆಂಗಳೂರು, ಜನವರಿ 26: ಲೋಕಾಯುಕ್ತ ಸಂಸ್ಥೆಗೆ ಕೊನೆಗೂ ದಂಡ ನಾಯಕರೊಬ್ಬರು ಸಿಕ್ಕಿದ್ದಾರೆ. ನ್ಯಾಯಮೂರ್ತಿ ಭಾಸ್ಕರ್ ರಾವ್ ರಿಂದ ತೆರವಾಗಿದ್ದ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ನೇಮಕವಾಗಿದ್ದಾರೆ. ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ರಾಜ್ಯಪಾಲರು ಇಂದು ಸಹಿ ಹಾಕಿದ್ದು, ಶೆಟ್ಟಿ ಹೊಸ ಲೋಕಾಯುಕ್ತರಾಗಿದ್ದಾರೆ.

ಈ ಹಿಂದೆ ಸರಕಾರ ಕಳುಹಿಸಿದ್ದ ಶಿಫಾರಸ್ಸಿಗೆ ಲೋಕಾಯುಕ್ತರು ಸಹಿ ಹಾಕಲು ಹಿಂದೇಟು ಹಾಕಿದ್ದರು. ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆದಿರುವ ವಿಚಾರದಲ್ಲಿ ವಿಶ್ವನಾಥ್ ಶೆಟ್ಟಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು.['ಲೋಕಾಯುಕ್ತ ಸಂಸ್ಥೆ ಮುಚ್ಚಲು ಸರ್ಕಾರದ ಷಡ್ಯಂತ್ರ']

 Vishwanath Shetty will be the new Lokayukta

ಆದರೆ ರಾಜ್ಯಪಾಲ ವಜೂಭಾಯಿ ವಾಲಾರನ್ನು ಕೆಲವು ದಿನಗಳ ಹಿಂದೆ ಭೇಟಿಯಾಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ, 'ಬಹುತೇಕ ನ್ಯಾಯಮೂರ್ತಿಗಳು ನ್ಯಾಯಾಂಗ ಬಡಾವಣೆಯಲ್ಲಿ ಸೈಟ್ ಪಡೆದಿದ್ದಾರೆ. ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ಯಾವುದೇ ಗುರುತರ ಆರೋಪಗಳಿಲ್ಲ. ಎಂದು ವಿವರಣೆ ನೀಡಿದ್ದರು.[ಲೋಕಾಯುಕ್ತ ಹುದ್ದೆಗೇರಲಿರುವ ನ್ಯಾ.ವಿಶ್ವನಾಥ್ ಶೆಟ್ಟಿ ವ್ಯಕ್ತಿಚಿತ್ರ]

ಇದೀಗ ರಾಜ್ಯಪಾಲರು ಸರಕಾರದ ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಪ್ರತಿಷ್ಠಿತ ಲೋಕಾಯುಕ್ತ ಸಂಸ್ಥೆಯ ಮುಖ್ಯಸ್ಥರ ಹುದ್ದೆಗೆ ಕೊನೆಗೂ ಒಬ್ಬರ ನೇಮಕವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+