ಸಚಿವ ಆರ್. ಅಶೋಕ್ ಮೇಲೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಗರಂ!
ಬೆಂಗಳೂರು, ಡಿ. 07: ಕಂದಾಯ ಸಚಿವ ಆರ್. ಅಶೋಕ್ ಅವರ ಮೇಲೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಗರಂ ಆಗಿದ್ದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಮೊದಲ ದಿನದ ಕಲಾಪದಲ್ಲಿ ಶಾಸಕರ ಸಂಖ್ಯೆಯೂ ವಿರಳವಾಗಿತ್ತು. ಹೆಚ್ಚಿನ ಸಚಿವರೂ ಕಲಾಪಕ್ಕೆ ಗೈರುಹಾಜರಾಗಿದ್ದರು. ಇದೇ ಸಂದರ್ಭದಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಚಿವ ಆರ್. ಅಶೋಕ್ ಅವರು ಶೃಂಗೇರಿ ಶಾಸಕ ರಾಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸದನದಲ್ಲಿ ಉತ್ತರಿಸುತ್ತಿದ್ದರು.
ಪಹಣಿ ದಾಖಲಿಸುವ ಸಾಫ್ಟ್ವೇರ್ ಕಳೆದ ಒಂದು ವರ್ಷದಿಂದ ಹಾಳಾಗಿದೆ. ಅದು ಸರಿ ಆಗೋದು ಯಾವಾಗ? ಎಂದು ಶೃಂಗೇರಿ ಶಾಸಕ ರಾಜೇಗೌಡ ಪ್ರೆಶ್ನೆ ಕೇಳಿದ್ದರು. ಶೀಘ್ರ ಸಮಸ್ಯೆಯನ್ನು ಸರಿಪಡಿಸುವ ಭರವಸೆಯನ್ನು ಕಂದಾಯ ಸಚಿವ ಅಶೋಕ್ ಅವರು ಸದನಕ್ಕೆ ನೀಡಿದರು. ಆಗ ಮಧ್ಯ ಪ್ರವೇಶ ಮಾಡಿದ ಸ್ಪೀಕರ್ ಕಾಗೇರಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ನಿಮ್ಮ ಅಧಿಕಾರಿಗಳು ಹೇಳಿದ್ದನ್ನು ತಂದು ಇಲ್ಲಿ ಓದಿದರೆ ಆಗಲ್ಲ. ನೀವು ಬಹಳಷ್ಟು ಅನುಭವ ಇರುವ ಸಚಿವರು. ಈ ಸಮಸ್ಯೆಯಿಂದಾಗಿ ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಖಾಸಗಿ ಎಜೆನ್ಸಿಯವರು ಸರ್ಕಾರದ ಮರ್ಯಾದೆ ಹಾಳು ಮಾಡಿ ಬಿಡುತ್ತಾರೆ ಎಂದು ಕಂದಾಯ ಸಚಿವ ಅಶೋಕ್ ಅವರ ಕಾರ್ಯವೈಖರಿ ಕುರಿತು ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು. ಸ್ಪೀಕರ್ ಜೊತೆಗೂಡಿ ಮಲೆನಾಡು ಭಾಗದ ಶಾಸಕರೂ ಅಶೋಕ್ ಅವರ ಮೇಲೆ ವಾಗ್ದಾಳಿ ನಡೆಸಿದರು. ಆ ಸಂದರ್ಭದಲ್ಲಿ ಸಚಿವ ಆರ್ ಅಶೋಕ್ ಅವರ ನೆರವಿಗೆ ಉಳಿದವರಾರೂ ಬರಲಿಲ್ಲ ಎಂಬುದು ವಿಶೇಷ.

ಇದನ್ನೇ ತಮ್ಮ ಫೇಸ್ಬುಕ್ ಖಾತೆಯಲ್ಲಿಯೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಂಚಿಕೊಂಡಿದ್ದಾರೆ. ಇಂದಿನಿಂದ ಪ್ರಾರಂಭವಾದ ಅಧಿವೇಶನದಲ್ಲಿ, ಪಹಣಿ ಪತ್ರಿಕೆಯಲ್ಲಿ ಬೆಳೆ ಮಾಹಿತಿ ಹಾಗೂ ಪಹಣಿ ಪತ್ರಿಕೆಯ ಕುರಿತಾಗಿ ಉಂಟಾಗುತ್ತಿರುವ ಇನ್ನಿತರ ಗೊಂದಲಗಳನ್ನು ಮಾನ್ಯ ಕಂದಾಯ ಸಚಿವರಾದ ಆರ್. ಅಶೋಕ ಅವರ ಗಮನಕ್ಕೆ ತಂದು, ರೈತರಿಗೆ ಉಂಟಾಗುತ್ತಿರುವ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದ್ದೇನೆ ಎಂದು ಹಂಚಿಕೊಂಡಿದ್ದಾರೆ.
Recommended Video
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications