ಸಚಿವ ಆರ್. ಅಶೋಕ್ ಮೇಲೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಗರಂ!
ಬೆಂಗಳೂರು, ಡಿ. 07: ಕಂದಾಯ ಸಚಿವ ಆರ್. ಅಶೋಕ್ ಅವರ ಮೇಲೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಗರಂ ಆಗಿದ್ದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಮೊದಲ ದಿನದ ಕಲಾಪದಲ್ಲಿ ಶಾಸಕರ ಸಂಖ್ಯೆಯೂ ವಿರಳವಾಗಿತ್ತು. ಹೆಚ್ಚಿನ ಸಚಿವರೂ ಕಲಾಪಕ್ಕೆ ಗೈರುಹಾಜರಾಗಿದ್ದರು. ಇದೇ ಸಂದರ್ಭದಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಚಿವ ಆರ್. ಅಶೋಕ್ ಅವರು ಶೃಂಗೇರಿ ಶಾಸಕ ರಾಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸದನದಲ್ಲಿ ಉತ್ತರಿಸುತ್ತಿದ್ದರು.
ಪಹಣಿ ದಾಖಲಿಸುವ ಸಾಫ್ಟ್ವೇರ್ ಕಳೆದ ಒಂದು ವರ್ಷದಿಂದ ಹಾಳಾಗಿದೆ. ಅದು ಸರಿ ಆಗೋದು ಯಾವಾಗ? ಎಂದು ಶೃಂಗೇರಿ ಶಾಸಕ ರಾಜೇಗೌಡ ಪ್ರೆಶ್ನೆ ಕೇಳಿದ್ದರು. ಶೀಘ್ರ ಸಮಸ್ಯೆಯನ್ನು ಸರಿಪಡಿಸುವ ಭರವಸೆಯನ್ನು ಕಂದಾಯ ಸಚಿವ ಅಶೋಕ್ ಅವರು ಸದನಕ್ಕೆ ನೀಡಿದರು. ಆಗ ಮಧ್ಯ ಪ್ರವೇಶ ಮಾಡಿದ ಸ್ಪೀಕರ್ ಕಾಗೇರಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ನಿಮ್ಮ ಅಧಿಕಾರಿಗಳು ಹೇಳಿದ್ದನ್ನು ತಂದು ಇಲ್ಲಿ ಓದಿದರೆ ಆಗಲ್ಲ. ನೀವು ಬಹಳಷ್ಟು ಅನುಭವ ಇರುವ ಸಚಿವರು. ಈ ಸಮಸ್ಯೆಯಿಂದಾಗಿ ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಖಾಸಗಿ ಎಜೆನ್ಸಿಯವರು ಸರ್ಕಾರದ ಮರ್ಯಾದೆ ಹಾಳು ಮಾಡಿ ಬಿಡುತ್ತಾರೆ ಎಂದು ಕಂದಾಯ ಸಚಿವ ಅಶೋಕ್ ಅವರ ಕಾರ್ಯವೈಖರಿ ಕುರಿತು ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು. ಸ್ಪೀಕರ್ ಜೊತೆಗೂಡಿ ಮಲೆನಾಡು ಭಾಗದ ಶಾಸಕರೂ ಅಶೋಕ್ ಅವರ ಮೇಲೆ ವಾಗ್ದಾಳಿ ನಡೆಸಿದರು. ಆ ಸಂದರ್ಭದಲ್ಲಿ ಸಚಿವ ಆರ್ ಅಶೋಕ್ ಅವರ ನೆರವಿಗೆ ಉಳಿದವರಾರೂ ಬರಲಿಲ್ಲ ಎಂಬುದು ವಿಶೇಷ.

ಇದನ್ನೇ ತಮ್ಮ ಫೇಸ್ಬುಕ್ ಖಾತೆಯಲ್ಲಿಯೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಂಚಿಕೊಂಡಿದ್ದಾರೆ. ಇಂದಿನಿಂದ ಪ್ರಾರಂಭವಾದ ಅಧಿವೇಶನದಲ್ಲಿ, ಪಹಣಿ ಪತ್ರಿಕೆಯಲ್ಲಿ ಬೆಳೆ ಮಾಹಿತಿ ಹಾಗೂ ಪಹಣಿ ಪತ್ರಿಕೆಯ ಕುರಿತಾಗಿ ಉಂಟಾಗುತ್ತಿರುವ ಇನ್ನಿತರ ಗೊಂದಲಗಳನ್ನು ಮಾನ್ಯ ಕಂದಾಯ ಸಚಿವರಾದ ಆರ್. ಅಶೋಕ ಅವರ ಗಮನಕ್ಕೆ ತಂದು, ರೈತರಿಗೆ ಉಂಟಾಗುತ್ತಿರುವ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದ್ದೇನೆ ಎಂದು ಹಂಚಿಕೊಂಡಿದ್ದಾರೆ.
Recommended Video
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications