ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಆಯ್ಕೆ ಬದಲು, ಕಾಗೇರಿ ಅಂತಿಮ ಆಯ್ಕೆ
ಬೆಂಗಳೂರು, ಜುಲೈ 30: ಸ್ಪೀಕರ್ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರು ತಳೆದಿದ್ದ ನಿಲವು ಹಠಾತ್ತನೆ ಬದಲಾಗಿದ್ದು, ಅಚ್ಚರಿ ರೀತಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಜಗದೀಶ್ ಶೆಟ್ಟರ್ ಅವರು ಸ್ಪೀಕರ್ ಆಗಲು ನಿರಾಕರಿಸಿದ ಕಾರಣ, ವಿವಾದಗಳಿದ್ದರೂ ಸಹ ಬೋಪಯ್ಯ ಅವರನ್ನೇ ಸ್ಪೀಕರ್ ಅನ್ನು ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಆಯ್ಕೆ ಬದಲಾಗಿದೆ.
ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಬಿಜೆಪಿಯ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಸೂಚಿಸಿದ್ದು, ನಾಳೆ ಅವರೇ ಸ್ಪೀಕರ್ ಆಗಿ ಆಯ್ಕೆ ಆಗುವುದು ಬಹುತೇಕ ಖಚಿತ.

ಇಂದು ಸಿಎಂ ಯಡಿಯೂರಪ್ಪ, ಅರವಿಂದ ಲಿಂಬಾವಳಿ, ಜಗದೀಶ್ ಶೆಟ್ಟರ್ ಅವರುಗಳು ಒಟ್ಟಾಗಿ ಬಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಸೂಚಿಸಿ ವಿಧಾನಸಭೆ ಕಾರ್ಯದರ್ಶಿ ಅವರಿಗೆ ಪತ್ರ ನೀಡಿದರು.
ಕಾಂಗ್ರೆಸ್-ಜೆಡಿಎಸ್ನಿಂದ ಯಾರೂ ಸ್ಪೀಕರ್ ಅಭ್ಯರ್ಥಿಗೆ ಸೂಚಿಸಿಲ್ಲವಾದ್ದರಿಂದ ಕಾಗೇರಿ ಅವರೇ ಸ್ಪೀಕರ್ ಆಗಲಿದ್ದು, ನಾಳೆ ಬೆಳಿಗ್ಗೆ ನಡೆಯುವ ಕಲಾಪದಲ್ಲಿ ಅಧಿಕೃತ ಘೋಷಣೆ ಆಗಲಿದೆ.
ಕಾಗೇರಿ ಅವರು ಹಿರಿಯ ಶಾಸಕರಾಗಿದ್ದು, ಈ ಹಿಂದೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸದನದ ಸುದೀರ್ಘ ಅನುಭವ ಇರುವ ಅವರು, ಕಲಾಪವನ್ನು ನಿಷ್ಪಕ್ಷಪಾತವಾಗಿ ನಡೆಸಿಕೊಂಡು ಹೋಗುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications