ಭಾಗಮಂಡಲದ ಭುವನೇಂದ್ರ ವೃಕ್ಷ ವಾಟಿಕೆಗೊಮ್ಮೆ ಭೇಟಿ ಕೊಡಿ
ಮಂಗಳೂರು, ಜೂ 20: ಕಾಶೀಮಠ ಸಂಸ್ಥಾನದ ಆರಾಧ್ಯ ದೇವರುಗಳಾದ ವ್ಯಾಸ ರಘುಪತಿ ನರಸಿಂಹ ದೇವರ ಸಿಂಹಾಸನಾರೋಹಣ ಕಾರ್ಯಕ್ರಮ ನಡೆದು ಐದು ವರ್ಷ ಸಂದ ಸಂದರ್ಭದಲ್ಲಿ ಕಾಶೀಮಠ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಭಾಗಮಂಡಲದಲ್ಲಿರುವ ಭುವನೇಂದ್ರ ವೃಕ್ಷ ವಾಟಿಕೆಯಲ್ಲಿ ಸುಮಾರು 400ಕ್ಕೂ ಅಧಿಕ ವಿವಿಧ ಅಳಿವಿನಂಚಿರುವ ಔಷಧಿಯ ಗಿಡ ಮರಗಳನ್ನು ನೆಡುವ ಮೂಲಕ ಕಾಶೀಮಠ ಗಿಡಮರಗಳ ಮಹತ್ವ ಸಾರುವ ಕೆಲಸವನ್ನು ಮಾಡಿದೆ.

ಸುಧೀಂದ್ರ ತೀರ್ಥ ಸ್ವಾಮೀಜಿಯವರ ಬಹು ಕಾಲದ ಕನಸಾಗಿದ್ದ ಈ ಯೋಜನೆಯನ್ನು, ಕೊಡಗಿನ ಪ್ರಕೃತಿ ರಮಣೀಯ ತಾಣ, ಕರ್ನಾಟಕದ ಜೀವನದಿ ಕಾವೇರಿ ಉಗಮಿಸುವ ಭಾಗಮಂಡಲದಲ್ಲಿ ಆಯೋಜಿಸಲಾಗಿತ್ತು.
ಹಾಲೀ ಮಠದ ಪೀಠಾಧಿಪತಿಗಳಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ತಮ್ಮ ಗುರುಗಳು, ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಸ್ವರೂಪೂದ್ದಾರಕರಾದ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಬಹು ಕಾಲದ ಕನಸು 'ಶ್ರೀ ಭುವನೇಂದ್ರ ಆಯುರ್ವೇದ ವೃಕ್ಷ ವಾಟಿಕ' ಯೋಜನೆ ಸಾಕಾರ ಮಾಡುವತ್ತ ಸುಂದರ ಹಾಗೂ ಕ್ರಮಬದ್ಧವಾದ ಯೋಜನೆಯನ್ನು ಈ ಮೂಲಕ ಕಾರ್ಯಗತಗೊಳಿಸಿದ್ದಾರೆ.
ಈ ಯೋಜನೆಯ ಸಂಪೂರ್ಣ ಉಸ್ತುವಾರಿಯನ್ನು ಹಾಲೀ ಮಠಾಧೀಶರು ವಹಿಸಿಕೊಂಡಿದ್ದಾರೆ. ಈ ವೃಕ್ಷ ವಾಟಿಕದಲ್ಲಿ 400ಕ್ಕೂ ಅಧಿಕ ವಿವಿಧ ಅಳಿವಿನಂಚಿರುವ ಔಷಧಿಯ ಗಿಡ ಮರ ಹಾಗೂ ಆಯುರ್ವೇದದಲ್ಲಿ ಉಲ್ಲೇಖಗೊಂಡಿರುವ ಔಷಧೀಯ ಗುಣಗಳನ್ನು ಹೊಂದಿರುವ ಅನೇಕ ಸಸ್ಯಗಳನ್ನು ನೆಟ್ಟು ಶ್ರೀ ಸಂಸ್ಥಾನದ ವತಿಯಿಂದ ಸಂರಕ್ಷಣೆಯನ್ನು ಮಾಡಲಾಗುತ್ತಿದೆ.
ಭವಿಷ್ಯದಲ್ಲಿ ಈ ಸುಂದರ ಆಯುರ್ವೇದ ವೃಕ್ಷ ವಾಟಿಕೆಯು ಭಾರತದ ಅತೀ ದೊಡ್ಡ ಧಾರ್ಮಿಕ, ಅಮೂಲ್ಯ ಹಾಗೂ ಅತೀ ಸುಂದರವಾದ ಆಯುರ್ವೇದ ಸಸ್ಯಕಾಶಿಯಾಗಿ ನಿರ್ಮಾಣಗೊಂಡು ಈ ಸಸ್ಯ ಸೇವೆಯಿಂದ ಪ್ರಸನ್ನಗೊಂಡು ಆಯುರ್ವೇದದ ಅಭಿಮಾನಿ ರೂಪ ಶ್ರೀ ವೇದವ್ಯಾಸ ಅಭಿನ್ನ ಶ್ರೀ ಧನ್ವಂತರಿ ದೇವರು ಪೂರ್ಣ ಪ್ರಮಾಣದಲ್ಲಿ ನೆಲಸುವ ಬಗ್ಗೆ ಯಾವುದೇ ಸಂಶಯವಿಲ್ಲ ಎನ್ನುವುದು ಮಠದ ವಿಶ್ವಾಸದ ಮಾತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications