ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಕ್ಕಲಿಗರ ಸಂಘದ ಚುನಾವಣೆ ರದ್ದು, ಯಾರಾಗಲಿದ್ದಾರೆ ಅಧ್ಯಕ್ಷರು?

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 06 : ಆಗಸ್ಟ್ 10ರಂದು ನಡೆಯಬೇಕಿದ್ದ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ರದ್ದುಗೊಂಡಿದೆ. ಸಂಘದ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ ಅವರನ್ನು ಕಳೆದ ವಾರದ ಪದಚ್ಯುತಿಗೊಳಿಸಲಾಗಿತ್ತು.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರು ಅಧ್ಯಕ್ಷರನ್ನು ಘೋಷಣೆ ಮಾಡಲಿದ್ದಾರೆ. ಆದ್ದರಿಂದ, ಅಧ್ಯಕ್ಷರ ಆಯ್ಕೆಗೆ ನಡೆಯಬೇಕಿದ್ದ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಪದಚ್ಯುತಿರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಪದಚ್ಯುತಿ

'ಎಚ್.ಡಿ.ದೇವೇಗೌಡ ಮತ್ತು ಡಿ.ಕೆ.ಶಿವಕುಮಾರ್ ಅವರು ಸಭೆ ನಡೆಸಿ ಅಧ್ಯಕ್ಷರನ್ನು ಘೋಷಣೆ ಮಾಡಲಿದ್ದಾರೆ. ಇದನ್ನು ನಾವು ಕೂಡಾ ಒಪ್ಪಿಕೊಂಡಿದ್ದೇವೆ' ಎಂದು ನಿಕಟಪೂರ್ವ ಅಧ್ಯಕ್ಷ ಡಾ.ಅಪ್ಪಾಜಿ ಗೌಡ ಹೇಳಿದ್ದಾರೆ.

Vokkaligara Sangha election cancelled

'ದೇವೇಗೌಡ ಮತ್ತು ಡಿ.ಕೆ.ಶಿವಕುಮಾರ್ ಚುನಾವಣೆ ಬೇಡ. ನಾವೇ ಅಧ್ಯಕ್ಷರನ್ನು ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಅವರು ನೀಡಿದ ಮಾತಿನಂತೆ ಅಧ್ಯಕ್ಷರ ಘೋಷಣೆಯಾಗಲಿದೆ' ಎಂದು ಅಪ್ಪಾಜಿ ಗೌಡ ತಿಳಿಸಿದರು.

'ಈಗ ಆಗಿರುವ ತಂಟೆ ತಕರಾರುಗಳು ಸಾಕು. ಇನ್ನು ಮುಂದೆ ಒಂದಾಗಿ ಕೆಲಸಗಳನ್ನು ಮಾಡಬೇಕಿದೆ. ನ್ಯಾಯಾಲಯದಲ್ಲಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆದುಕೊಂಡು ಅಧ್ಯಕ್ಷರನ್ನು ಆಯ್ಕೆ ಮಾಡೋಣ ಎಂಬ ನಿರ್ಧಾರಕ್ಕೆ ಬರಲಾಗಿದೆ' ಎಂದರು.

English summary
Vokkaligara Sangha election scheduled on August 10, 2018 cancelled. Dr. Appaji Rao president of sangha was removed from his post after a meeting of office bearers recently. H.D.Deve Gowda and D.K.Siva Kumar will elect new president soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X