ವೋಟಿಗಾಗಿ ನೋಟು: ಯಾರು, ಏನು ಹೇಳಿದರು?
ಬೆಂಗಳೂರು, ಜೂನ್ 03: ರಾಜ್ಯಸಭೆ ವೋಟಿಗಾಗಿ ನೋಟು ಪ್ರಕರಣಕ್ಕೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಯಾ ಟುಡೇ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯದ ಶಾಸಕರ ಮಾನ ಹರಾಜಾಗಿದ್ದು ರಾಜಕೀಯ ಪಕ್ಷಗಳು ಅವರದ್ದೇ ಆದ ದೃಷ್ಟಿಕೋನದಲ್ಲಿ ವಿವರಣೆ ನೀಡುತ್ತಿದ್ದಾರೆ.
ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ, ಬಸವಕಲ್ಯಾಣ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದವರು ಎಂಬ ಮಾಹಿತಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದು ಸಾವರ್ಜನಿಕರು ಸತ್ಯಾಸತ್ಯತೆ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ.[ಸ್ಟಿಂಗ್ ಆಪರೇಷನ್: ಮೂರು ಕಾಸಿಗೆ ಹರಾಜಾದ ರಾಜ್ಯ ಶಾಸಕರ ಮರ್ಯಾದೆ!]
ಪ್ರಕರಣ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸೇರಿದಂತೆ ಅನೇಕರು ನೀಡಿರುವ ಪ್ರತಿಕ್ರಿಯೆಯನ್ನು ಮುಂದಕ್ಕೆ ನೋಡಿ...

ಬಣ್ಣ ಬಯಲಾಗಲಿದೆ
ಕಾಂಗ್ರೆಸ್ ಪಕ್ಷದ ಬಣ್ಣ ಮತ್ತೊಮ್ಮೆ ಬಯಲಾಗಿದೆ. ಮುಂದಿನ ದಿನಗಳಲ್ಲಿ ಇದರ ನಿಜವಾದ ಸತ್ಯ ಹೊರಬೀಳಲಿದ್ದು ಮಾಧ್ಯಯಮಗಳ ಮೂಲಕ ಸುದ್ದಿ ನನಗೆ ಗೊತ್ತಾಯಿತು.-ಬಿ ಎಸ್ ಯಡಿಯೂರಪ್ಪ

ಜೆಡಿಎಸ್ ಮುಗಿಸುವ ಕುತಂತ್ರ
ಜೆಡಿಎಸ್ ಮುಗಿಸಲು ಈ ಬಗೆಯ ನಾಟಕವನ್ನು ಮಾಡಲಾಗಿದೆ. ನಾನು ಯಾವುದಕ್ಕೂ ಹೆದರುವುದಿಲ್ಲ. ಮತ್ತೆ ಬೀದಿಗಿಳಿದು ಹೋರಾಟ ಮಾಡುತ್ತೇನೆ. ಡಿಕೆ ಶಿವಕುಮಾರ್ ಅಂಥವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಬೇಕಂತಲೇ ಹೀಗೆ ಮಾಡಿದ್ದಾರೆ
ವರದಿಗಾರರು ಎಂದು ಹೇಳಿದ ಮೇಲೂ ಶಾಸಕರು ಹಣದ ಬಗ್ಗೆ ಮಾತನಾಡಿದ್ದಾರೆ ಎಂಬ ಹೇಳಿಕೆಗಳು ಬರುತ್ತಿವೆ. ಇದಕ್ಕೆ ಮೂಲ ಕಾರಣ ಯಾರೂ ಎಂಬುದನ್ನು ಬಹಿರಂಗವಾಗಿ ಹೇಳಬೇಕಿಲ್ಲ. ಕಾಂಗ್ರೆಸ್ ನಾಯಕರು ಮೊದಲು ಪ್ರಜಾಪ್ರಭುತ್ವವನ್ನು ಅರ್ಥ ಮಾಡಿಕೊಳ್ಳಬೇಕು- ಎಚ್ ಡಿ ಕುಮಾರಸ್ವಾಮಿ

ಗಾಂಧೀಜಿ ಇದ್ದರೂ ಹಣ ಹಂಚುತ್ತಿದ್ದರು!
ಮಹಾತ್ಮ ಗಾಂಧೀಜಿ ಇಂದು ಇದ್ದರೆ ಚುನಾವಣೆಯಲ್ಲಿ ಗೆಲ್ಲಲು ಹಣ ಹಂಚುತ್ತಿದ್ದರು. ರಾಜಕೀಯ ವಾತಾವರಣವೇ ಬದಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಎಸ್ ಆರ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾಖಲೆ ಇಲ್ಲ
ಕೇವಲ ಮಾಧ್ಯಮಗಳ ಮಾತನ್ನೇ ನಾವು ನಂಬಿ ನಡೆಯುತ್ತಿದ್ದೇವೆ. ಶಾಸಕರು ಅಕ್ರಮದಲ್ಲಿ ತೊಡಗಿಕೊಂಡಿರುವ ಬಗ್ಗೆ ಯಾವುದೇ ಸ್ಪಷ್ಟ ಸಾಕ್ಷಿ ಇಲ್ಲ. ಈ ಬಗ್ಗೆ ಮಾಹಿತಿ ಕಲೆ ಹಾಕಲು ತಿಳಿಸುತ್ತೇನೆ- ಕಾಗೋಡು ತಿಮ್ಮಪ್ಪ, ಸ್ಪೀಕರ್
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications