Karnataka Election: ರಾಜ್ಯದಲ್ಲಿಂದು ಬಿಜೆಪಿ ಪ್ರಭಾವಿ ನಾಯಕರ ಮತ ಸಂಚಾರ: ಎಲ್ಲಿ? ಯಾರು?
ಬೆಂಗಳೂರು ಏಪ್ರಿಲ್ 26: ಆಪರೇಷನ್ ಮೂಲಕ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ ಎಂಬ ಹಣೆಪಟ್ಟಿಯನ್ನು ಹೊಂದಿದ ಬಿಜೆಪಿ ಈ ಬಾರಿ ಶತಾಯಗತಾಯ ಬಹುಮತದೊಂದಿಗೆ ಗೆಲುವು ಸಾಧಿಸುವ ಮೂಲಕ ವಿಪಕ್ಷಗಳಿಗೆ ಠಕ್ಕರ್ ಕೊಡಲು ಪ್ರಯತ್ನಿಸುತ್ತಿದೆ. ಇದಕ್ಕಾಗಿ ಕೇಂದ್ರ ನಾಯಕರು, ಸಂಸದರು ಹಾಗೂ ಇತರ ರಾಜ್ಯಗಳ ಜನನಾಯಕರನ್ನು ರಾಜ್ಯಕ್ಕೆ ಕರೆಸುವ ಮೂಲಕ ಮತಭೇಟೆ ಶುರು ಮಾಡಿದೆ.
ಹೀಗಾಗಿ ಕಳೆದ ಕೆಲ ದಿನಗಳಿಂದ ಒಬ್ಬರಾದಂತೆ ಒಬ್ಬರು ಕಮಲ ನಾಯಕರು ನಿರಂತರವಾಗಿ ರಾಜ್ಯಕ್ಕೆ ಎಂಟ್ರಿ ಕೊಡುತ್ತಲೇ ಇದ್ದಾರೆ. 150 ಸ್ಟಾರ್ ಪ್ರಚಾರಕರ ಮೂಲಕ ಏಕಕಾಲಕ್ಕೆ ಮತಯಾಚನೆಗೆ ಮುಂದಾದ ಬಿಜೆಪಿ ಮಹಾಸಂಪರ್ಕ ಅಭಿಯಾನವನ್ನು ಶುರು ಮಾಡಿದೆ. ಇಂದು ಕೂಡ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಹಲವು ನಾಯಕರು ರಾಜ್ಯದ ವಿವಿದೆಡೆ ಚುನಾವಣಾ ರಣಕಣಕ್ಕೆ ಇಳಿಯಲಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಇತರರು ಇಂದು (ಏ.25) ರಾಜ್ಯದೆಲ್ಲೆಡೆ ಸಂಚಾರ ಮಾಡಲಿದ್ದಾರೆ.
ಕುಂದಾನಗರಿ ಬೆಳಗಾವಿ ಇಂದು ಕೇಸರಿ ಮಯವಾಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11ಕ್ಕೆ ಬೆಳಗಾವಿ ಜಿಲ್ಲೆಯ ಕಾಗವಾಡದ ಸಮಾವೇಶದಲ್ಲಿ ಭಾಗಿಯಾಗಿ ನಂತರ ಮಧ್ಯಾಹ್ನ 1.15ಕ್ಕೆ ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಬಳಿಕ ಸಂಜೆ 4 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆಯುವ ಸಮಾವೇಶದಲ್ಲಿ ಮತಬೇಟೆ ಮಾಡಲಿದ್ದಾರೆ.

ಮಹಾಸಂಪರ್ಕ ಅಭಿಯಾನ ಆರಂಭವಾಗಿದ್ದು, ಇಂದು ರಾಜ್ಯಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಚುನಾವಣಾ ಪ್ರಚಾರದ ಕಣಕ್ಕೆ ಇಳಿಯಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ 11 ಗಂಟೆಗೆ ಕಲಬುರಗಿಯಲ್ಲಿ ಪ್ರಬುದ್ಧರ ಜೊತೆ ಸಂವಾದ ನಡೆಸಲಿದ್ದಾರೆ. ಬಳಿಕ 3 ಗಂಟೆಗೆ ಅಳಂದದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಸಂಜೆ 4 ಗಂಟೆಗೆ ಕಲಬುರಗಿ ನಗರದಲ್ಲಿ ಮನೆ ಮನೆ ಸಂಪರ್ಕ ಮಾಡಲಿದ್ದಾರೆ ಎಂದು ಬಿಜೆಪಿ ಬಲ್ಲ ಮೂಲಗಳು ತಿಳಿಸಿವೆ.
ಇನ್ನೂ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕೂಡ ಇಂದು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ. ರಾಜ್ಯದಲ್ಲಿ ಕಮಲವನ್ನು ಬಹುಮತದೊಂದಿಗೆ ಅರಳಿಸಲು ಪಣತೊಟ್ಟಿರುವ ಕೈಗಳಿಗೆ ಶಿವರಾಜ್ ಸಿಂಗ್ ಚೌಹಾಣ್ ಸಾಥ್ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಹುಕ್ಕೇರಿಯಲ್ಲಿನ ಸಾರ್ವಜನಿಕ ಪ್ರಚಾರ ಸಭೆ ಬಳಿಕ ಮಧ್ಯಾಹ್ನ 2.30ಕ್ಕೆ ಗೋಕಾಕ್ನಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ, ಸಂಜೆ 4 ಗಂಟೆಗೆ ರಾಮದುರ್ಗದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಹಲವಾರು ಕಮಲ ನಾಯಕರು ಶಿವರಾಜ್ ಸಿಂಗ್ ಅವರೊಂದಿಗೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ವಿಜಯಪುರದಲ್ಲಿ ಜಯ ಸಾಧಿಸಲು ಬಿಜೆಪಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಪ್ರಚಾರಕ್ಕೆ ಮುಂದಾಗಿದೆ. ಪ್ರಚಾರಕ್ಕೂ ಮುನ್ನ ಸಿದ್ದೇಶ್ವರ ಆಶ್ರಮಕ್ಕೆ ಭೇಟಿ ನೀಡಲಿರುವ ದೇವೇಂದ್ರ ಫಡ್ನವಿಸ್ ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕನಮಡಿ ಧರಿದೇವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12.30ಕ್ಕೆ ಬಬಲೇಶ್ವರದಲ್ಲಿ ದೇವೇಂದ್ರ ಫಡ್ನವಿಸ್ ಪ್ರಚಾರ ಸಭೆ ನಡೆಸಲಿದ್ದಾರೆ.
ಇನ್ನೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಳಗಾವಿಯ ಅಥಣಿಯಲ್ಲಿ ರೋಡ್ ಶೋ, ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯನ್ನು ಬೆಳಗಾವಿಯ ಕುಡಚಿಯಲ್ಲಿ ನಡೆಸಲಿದ್ದಾರೆ. ಇನ್ನೂ ಸಂಜೆ 4.15ಕ್ಕೆ ಸೌದತ್ತಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದು, ಸಂಜೆ 6.30ಕ್ಕೆ ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಇನ್ನೂ ಆನೇಕಲ್ ವಿಧಾನಸಭಾ ಕ್ಷೇತ್ರಕ್ಕೆ ದೊಮ್ಮಸಂದ್ರದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿ ಗಳಾದ ಅರುಣ್ ಸಿಂಗ್ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಜೊತೆಗೆ ಬೆಳಗಾವಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಪ್ರಚಾರ ಮಾಡಲಿದ್ದಾರೆ. ಹುಕ್ಕೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿರುವ ಬೊಮ್ಮಾಯಿ, ಚಿಕ್ಕೋಡಿಯಲ್ಲಿ ರೋಡ್ ಶೋ ಮಾಡಲಿದ್ದಾರೆ. ಜೊತೆಗೆ ರಾಯಬಾಗ್ ಹಾಗೂ ಸವದತ್ತಿಯಲ್ಲೂ ರೋಡ್ ಶೋನಲ್ಲಿ ಮಾಡಲಿದ್ದಾರೆ.
ಇಲ್ಲಿಯವರೆಗೆ ಬಿಜೆಪಿಯ ಕೇಂದ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಗಮಿಸುತ್ತಿದ್ದರು. ಆದರೆ ಇಂದು ರಾಜ್ಯದ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದು ಮತದಾರರನ್ನು ಸೆಳೆಯಲಿದ್ದಾರೆ. ಇದು ಬಿಜೆಪಿಗೆ ಅದೆಷ್ಟು ಲಾಭ ತಂದು ಕೊಡುತ್ತದೆ ಎಂದು ಕಾದು ನೋಡಬೇಕಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications