ಕನ್ನಡಿಗ ವೈಲ್ಡ್ ಲೈಫ್ 'ಆಸ್ಕರ್' ಗೆಲ್ಲಲು ವೋಟ್ ಮಾಡಿ
ಚಿಕ್ಕಮಗಳೂರು, ಆ.7: ಲಂಡನ್ನಿನ ವೈಲ್ಡ್ಲೈಫ್ ಫೋಟೋಗ್ರಾಫರ್ ಆಫ್ ದ ಇಯರ್ ಡಾಟ್ ಕಾಂ ನಡೆಸುವ 'ಪೀಪಲ್ಸ್ ಚಾಯ್ಸ್' ಪ್ರಶಸ್ತಿಯ ಅಂತಿಮ ಸುತ್ತಿಗೆ ಶೃಂಗೇರಿಯ ಎಸ್.ಎಸ್. ರವಿಪ್ರಕಾಶ್ ಅವರು ಆಯ್ಕೆಯಾಗಿದ್ದಾರೆ. ರವಿಪ್ರಕಾಶ್ ಅವರ 'ಪ್ಯೂರ್ ಮ್ಯಾಜಿಕ್' ಹೆಸರಿನ ಛಾಯಾಚಿತ್ರ ಅಂತಿಮ ಸುತ್ತು ಪ್ರವೇಶಿಸಿದ್ದು, ನಿಮ್ಮ ಅಮೂಲ್ಯ ಮತಗಳ ಮೂಲಕ ಅವರನ್ನು ಗೆಲ್ಲಿಸಬಹುದಾಗಿದೆ.
ಫೋಟೋಗ್ರಾಫರ್ ಆಫ್ ದ ಇಯರ್ ಪ್ರತಿಷ್ಠಿತ ಪ್ರಶಸ್ತಿಗೆ ಬಿಬಿಸಿ ಮತ್ತು ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಸಹಭಾಗಿತ್ವ ವಹಿಸಿವೆ. ವಿಶ್ವದ 96 ದೇಶದ ಸುಮಾರು 42 ಸಾವಿರಕ್ಕೂ ಹೆಚ್ಚು ಪ್ರವೇಶಗಳು ಬಂದಿದ್ದು, ರವಿಪ್ರಕಾಶ್ ಅವರು ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಭಾರತೀಯ ಎನಿಸಿದ್ದಾರೆ.
ಅಂತಿಮ ಸುತ್ತಿಗೆ ಆಯ್ಕೆಯಾದ 50 ಛಾಯಾಚಿತ್ರಗಳನ್ನು ಆನ್ಲೈನ್ ಮತದಾನದ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಸೆಪ್ಟೆಂಬರ್ 5 ರವರೆಗೆ ಆನ್ಲೈನ್ ಮತದಾನಕ್ಕೆ ಅವಕಾಶವಿದೆ. ವಿಜೇತರ ಹೆಸರನ್ನು ಅಕ್ಟೋಬರ್ 21ರಂದು ಪ್ರಕಟಿಸಲಾಗುತ್ತದೆ. ರವಿಪ್ರಕಾಶ್ ಅವರ ಜೇಡನ ಬಲೆಯ ಚಿತ್ರಕ್ಕೆ ವೋಟ್ ಮಾಡಲು [ಇಲ್ಲಿ ಕ್ಲಿಕ್ಕಿಸಿ]

ಮಲೆನಾಡಿನ ಪ್ರತಿಭೆ ರವಿಪ್ರಕಾಶ್
ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಹುಟ್ಟಿ, ಕೊಪ್ಪದಲ್ಲಿ ಬೆಳೆದು ಪ್ರಸ್ತುತ ಬೆಂಗಳೂರಿನ ಟಿಸಿಎಸ್ ಸಾಫ್ಟ್ ವೇರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರವಿಪ್ರಕಾಶ್ ಎಸ್ ಎಸ್ ವೃತ್ತಿಯಿಂದ ಸಾಫ್ಟ್ ವೇರ್ ಇಂಜಿನಿಯರ್.
ರವಿಪ್ರಕಾಶ್ ಅವರು ಹುಟ್ಟೂರಾದ ಶೃಂಗೇರಿಯಲ್ಲಿ ಕ್ಲಿಕ್ ಮಾಡಿದ 'ಪ್ಯೂರ್ ಮ್ಯಾಜಿಕ್' ಚಿತ್ರ ವಿಶ್ವದ 96 ದೇಶದ ಸುಮಾರು 42 ಸಾವಿರಕ್ಕೂ ಹೆಚ್ಚು ಚಿತ್ರಗಳನ್ನು ಹಿಂದಿಕ್ಕಿ ಕೊನೆ ಹಂತ ತಲುಪಿದೆ.

ಛಾಯಾಗ್ರಹಣ ಕ್ಷೇತ್ರದಲ್ಲಿ ಆಸ್ಕರ್
ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಹಾಗೂ ಬಿಬಿಸಿ ವರ್ಲ್ಡ್ ವೈಡ್ ಸಹಭಾಗಿತ್ವ ಪಡೆದುಕೊಂಡಿರುವ ಈ ಫೋಟೋಗ್ರಾಫರ್ ಆಫ್ ದ ಇಯರ್ ಪ್ರಶಸ್ತಿಯನ್ನು ವನ್ಯಜೀವಿ ಛಾಯಾಗ್ರಹಣ ಕ್ಷೇತ್ರದಲ್ಲಿ ಆಸ್ಕರ್ ಎಂದೇ ಕರೆಯಲಾಗುತ್ತದೆ.

ಮ್ಯಾಕ್ರೋ ಫೋಟೋಗ್ರಾಫಿ ಪರಿಣಿತ
ಮಲೆನಾಡಿನ ಪರಿಸರದಲ್ಲಿ ಹುಟ್ಟಿ ಬೆಳೆದ ರವಿಪ್ರಕಾಶ್ ಅವರಿಗೆ ವನ್ಯಜೀವಿ ಛಾಯಾಗ್ರಹಣದ ಜೊತೆ, ಚಿತ್ರದ ಅತಿ ಸೂಕ್ಷ್ಮಗಳನ್ನು ತೋರಿಸಬಲ್ಲ ಮ್ಯಾಕ್ರೋ ಫೋಟೋಗ್ರಾಫಿಯಲ್ಲಿ ಪರಿಣಿತಿ ಪಡೆದುಕೊಂಡಿದ್ದಾರೆ.
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಸಂಸ್ಥೆಯಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿ ಬೆಂಗಳೂರಿನಲ್ಲಿ ನೆಲೆಸಿರುವ ರವಿ ಅವರು ವಾರಾಂತ್ಯಗಳಲ್ಲಿ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶ ಅಥವಾ ಊರಿನ ಪರಿಸರದಲ್ಲಿ ಛಾಯಾಗ್ರಾಹಣ ನಡೆಸುತ್ತಾ ಬಂದಿದ್ದಾರೆ.

ಆನ್ ಲೈನ್ ನಲ್ಲಿ ಮತ ಹಾಕಬಹುದಾಗಿದೆ
ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಹಾಗೂ ಬಿಬಿಸಿ ವರ್ಲ್ಡ್ ವೈಡ್ ನಡೆಸುವ ವೈಲ್ಡ್ ಲೈಫ್ ಫೊಟೊಗ್ರಫರ್ ಆಫ್ ದಿ ಇಯರ್ ಸ್ಪರ್ಧೆಯನ್ನು ಕಳೆದ 50 ವರ್ಷಗಳಿಂದ ನಡೆಸುತ್ತಾ ಬಂದಿವೆ.
ಆದರೆ, ಪೀಪಲ್ಸ್ ಚಾಯ್ಸ್ ಪ್ರಶಸ್ತಿ ಈ ಬಾರಿಯ ವಿಶೇಷವಾಗಿದೆ. ತೀರ್ಪುಗಾರರು ಅಂತಿಮವಾಗಿ 50 ಛಾಯಾಚಿತ್ರಗಳನ್ನು ಆಯ್ಕೆ ಮಾಡಿದ ಮೇಲೆ ಜನರೇ ನೇರವಾಗಿ ಆನ್ ಲೈನ್ ನಲ್ಲಿ ಮತ ಹಾಕಬಹುದಾಗಿದೆ.ಚಿತ್ರದಲ್ಲಿ: ಟಿಸಿಎಸ್ 10ಕೆ ಮ್ಯಾರಾಥಾನ್ ಸಂದರ್ಭದಲ್ಲಿ ಪ್ರದರ್ಶನಗೊಂಡ ರವಿಪ್ರಕಾಶ್ ಅವರ ಚಿತ್ರಗಳು
ಹೆಚ್ಚಿನ ಮಾಹಿತಿ ರವಿಪ್ರಕಾಶ್ ಅವರ ವೆಬ್ ತಾಣ ವೀಕ್ಷಿಸಿ
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications