Breaking; ಸಿಎಂಗೆ ಧಮ್, ತಾಕತ್ ಇಲ್ಲವೇ?; ಕಾಂಗ್ರೆಸ್ ಟ್ವೀಟ್
ಬೆಂಗಳೂರು, ನವೆಂಬರ್ 28; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ಧಮ್, ತಾಕತ್ ಬಗ್ಗೆ ಆಗಾಗ ಮಾತನಾಡುತ್ತಾರೆ. ಈಗ ಮತದಾರರ ಮಾಹಿತಿ ಕಳವು ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳನ್ನು ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸೋಮವಾರ ಸರಣಿ ಟ್ವೀಟ್ ಮಾಡಿದೆ. ಬೆಂಗಳೂರು ನಗರದ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆದ ಮತದಾರರ ಮಾಹಿತಿ ಕಳವು ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಚಿಲುಮೆ ಸಂಸ್ಥೆಯಲ್ಲಿ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರವಾಗಿ ಸಚಿವ @drashwathcn ಅವರ ವಿಚಾರಣೆ ಮಾಡುವ ದಮ್ಮು, ತಾಕತ್ತು ಇಲ್ಲವೇ @BSBommai ಅವರೇ?
— Karnataka Congress (@INCKarnataka) November 28, 2022
ಸಚಿವರಿಗೂ ಚಿಲುಮೆಗೂ ಏನು ಸಂಬಂಧ?
ಬೇರೆಲ್ಲವನ್ನೂ ಪುಂಖಾನುಪುಂಖವಾಗಿ ಮಾತಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯದಿರುವುದೇಕೆ?
ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ?
ಕಾಂಗ್ರೆಸ್ ತನ್ನ ಟ್ವೀಟ್ನಲ್ಲಿ, 'ಚಿಲುಮೆ ಸಂಸ್ಥೆಯಲ್ಲಿ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರವಾಗಿ ಸಚಿವ ಡಾ. ಅಶ್ವಥ ನಾರಾಯಣ್ ಅವರ ವಿಚಾರಣೆ ಮಾಡುವ ದಮ್ಮು, ತಾಕತ್ತು ಇಲ್ಲವೇ ಬಸವರಾಜ ಬೊಮ್ಮಾಯಿ ಅವರೇ?. ಸಚಿವರಿಗೂ ಚಿಲುಮೆಗೂ ಏನು ಸಂಬಂಧ?' ಎಂದು ಹೇಳಿದೆ.

'ಬೇರೆಲ್ಲವನ್ನೂ ಪುಂಖಾನುಪುಂಖವಾಗಿ ಮಾತಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯದಿರುವುದೇಕೆ?. ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ?' ಎಂದು ಟ್ವೀಟ್ನಲ್ಲಿ ಪ್ರಶ್ನಿಸಿದೆ.
ಸಿಎಂ ಉತ್ತರಿಸಬೇಕು?; 'ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ. ಒತ್ತಡ ಹಾಕಿದ ರಾಜಕೀಯದವರು ಯಾರು?. ಅವರ ಹಿತಾಸಕ್ತಿ ಏನಿತ್ತು?. ಚಿಲುಮೆ ಸಂಸ್ಥೆಯ ಹಣದ ಮೂಲ ಯಾವುದು?. ಚೆಕ್, ಲೆಟರ್ ಹೆಡ್ ಸಿಕ್ಕಿರುವ ಸಂಗತಿಯನ್ನು ಬಚ್ಚಿಡುತ್ತಿರುವುದೇಕೆ?. ಅಕ್ರಮಗಳ ಮಹಾಪೋಷಕ ಬಸವರಾಜ ಬೊಮ್ಮಾಯಿ ಅವರು ಜನತೆಗೆ ಉತ್ತರಿಸಬೇಕು' ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಬೆಂಗಳೂರು ನಗರದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. ಮತದಾರರ ಮಾಹಿತಿಯನ್ನು ಅಕ್ರವಾಗಿ ಸಂಗ್ರಹ ಮಾಡಲಾಗಿದೆ ಎಂಬುದು ಆರೋಪ. ಈ ಕುರಿತು ಕರ್ನಾಟಕ ಕಾಂಗ್ರೆಸ್ ರಾಜ್ಯ, ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಿದೆ.
ಈ ಅಕ್ರಮದ ಕುರಿತು ಬಿಬಿಎಂಪಿ ಹಲಸೂರು ಗೇಟ್ ಠಾಣೆಗೆ ದೂರು ನೀಡಿದೆ. ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಮತ್ತೊಂದು ಕಡೆ ಚುನಾವಣಾ ಆಯೋಗ ಈ ಕುರಿತು ತನಿಖೆ ಆರಂಭಿಸಿದೆ. ಈ ಹಗರಣದ ವಿಚಾರ ರಾಜಕೀಯ ಜಟಾಪಟಿಗೆ ಸಹ ಕಾರಣವಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications