ಮತದಾರರ ಗುರುತಿನ ಚೀಟಿ ಬದಲು ಪರಿಗಣಿಸುವ 12 ದಾಖಲೆಗಳು?
ಬೆಂಗಳೂರು, ಏಪ್ರಿಲ್ 28: ಮೇ.12ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಮತದಾನ ಚೀಟಿ ಬದಲು 12 ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆಗಳಿದ್ದರೂ ಮತದಾನ ಮಾಡಬಹುದು. ಇದಕ್ಕೆ ಚುನಾವಣಾ ಆಯೋಗ ಸಮ್ಮತಿ ಸೂಚಿಸಿದೆ
1) ಪಾಸ್ಪೋರ್ಟ್, 2) ಚಾಲನಾ ಪರವಾನಗಿ, 3) ಕೇಂದ್ರ/ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಪಿಎಸ್ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳು ತಮ್ಮ ಸಿಬ್ಬಂದಿಗೆ ನೀಡಿರುವ ಫೋಟೋ ಗುರುತಿನ ಚೀಟಿ, 4) ಬ್ಯಾಂಕ್ / ಪೋಸ್ಟ್ ಆಫೀಸ್ ಫೋಟೋವುಳ್ಳ ಪಾಸ್ ಬುಕ್, 5) PAN ಹೊಂದಿರುವ ಕಾರ್ಡ್, 6) ಎನ್ಪಿಆರ್ ಅಡಿ ಅರ್ಜಿ ನೀಡಿರುವ ಸ್ಮಾರ್ಟ್ ಕಾರ್ಡ್, 7) ಎಂನರೇಗಾ ಜಾಬ್ ಕಾರ್ಡ್, 8) ಕಾರ್ಮಿಕರ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, 9) ಫೋಟೋವುಳ್ಳ ಪಿಂಚಣಿ ದಾಖಲೆ, 10) ಚುನಾವಣಾ ಆಯೋಗದ ವತಿಯಿಂದ ನೀಡುವ ದೃಢೀಕೃತ ಫೋಟೋ ವೋಟರ್ ಸ್ಲಿಪ್ಸ್, 11) ಸಂಸದರು/ವಿಧಾನಸಭಾ/ವಿಧಾನ ಪರಿಷತ್ತಿನ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, 12) ಆಧಾರ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಗುರುತಿನ ಚೀಟಿ ಬಳಸಿ ಮತದಾನ ಮಾಡಬಹುದು.
ಮತದಾನದ ದಿನದಂದು ಮತ ಚಲಾಯಿಸಲು ಮತಗಟ್ಟೆ ಪ್ರವೇಶಿಸುವ ಮತದಾರರು ಮತಗಟ್ಟೆ ಅಧಿಕಾರಿಗೆ ತಮ್ಮ ಗುರುತನ್ನು ಖಾತ್ರಿ ಪಡಿಸಲು ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ಯನ್ನು ತೋರಿಸಬೇಕು.

ಭಾವಚಿತ್ರ ಹೊಂದಿರುವ ಈ ಎಪಿಕ್ ಕಾರ್ಡ್ನಲ್ಲಿ ದೋಷಗಳಿದ್ದರೆ, ಇಲ್ಲವೆ ಎಪಿಕ್ ಕಾರ್ಡ್ ಅನ್ನು ತರದಿದ್ದ ಸಂದರ್ಭದಲ್ಲಿ ಭಾರತ ಆಯೋಗ ಪರಿಗಣಿಸಿರುವ 12 ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು.
ಒಂದು ಪಕ್ಷ ಎಪಿಕ್ ಕಾರ್ಡ್ ನಲ್ಲಿ ದೋಷವಿದ್ದರೆ, ಇಲ್ಲವೆ ಎಪಿಕ್ ಕಾರ್ಡ್ ನಲ್ಲಿರುವ ವ್ಯಕ್ತಿಯ ಭಾವಚಿತ್ರ ಹೊಂದಾಣಿಕೆ ಆಗದಿದ್ದ ಪಕ್ಷದಲ್ಲೂ 12 ದಾಖಲಾತಿಗಳ ಪೈಕಿ ಒಂದನ್ನು ತೋರಿಸಿ ಮತ ಚಲಾಯಿಸಬಹುದು. ಮತದಾರರ ಪಟ್ಟಿಯಲ್ಲಿ ಹೆಸರಿರುವ ವ್ಯಕ್ತಿ ಬೇರೆ ವಿಧಾನಸಭಾ ಕ್ಷೇತ್ರದ ಎಪಿಕ್ ಕಾರ್ಡ್ ತೋರಿಸಿದರೂ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
ಮತದಾರರ ಪಟ್ಟಿಯಲ್ಲಿ ಹೆಸರಿರುವ ಸಾಗರೋತ್ತರ ಮತದಾರರು (Overseas Electors) ತಮ್ಮ ಗುರುತಿಗೆ ಮತಗಟ್ಟೆಯಲ್ಲಿ ಪಾಸ್ ಪೋರ್ಟ್ ಮೂಲ ಪ್ರತಿಯನ್ನು ಮಾತ್ರ ಹಾಜರುಪಡಿಸಬೇಕು. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಗುರುತಿನ ದಾಖಲೆಗಳನ್ನು ಪರಿಗಣಿಸುವುದಿಲ್ಲ ಎಂದು ಆಯೋಗದ ಪ್ರಕಟಣೆಯಲ್ಲಿ ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications