ಕ್ಯಾರಿ ಓವರ್ ವ್ಯವಸ್ಥೆ ಬದಲಾಯಿಸಿದ ವಿಟಿಯು
ಬೆಂಗಳೂರು, ಸೆಪ್ಟೆಂಬರ್ 08: ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕ್ಯಾರಿ ಓವರ್ ಪದ್ಧತಿಯನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿದೆ.
ಹೀಗಾಗಿ, ಸಬ್ಜೆಕ್ಟ್ ಬ್ಯಾಕ್ ಇದ್ದರೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ತೆರಳಬಹುದಾಗಿದೆ. ಈ ಮುಂಚೆ ಕ್ಯಾರಿ ಓವರ್ ಪದ್ಧತಿಯನ್ನು ಚಾಯ್ಸ್ ಬೇಸ್ ಕ್ರೆಡಿಟ್ ಸಿಸ್ಟಂ (ಸಿಬಿಸಿಎಸ್) ವಿದ್ಯಾರ್ಥಿಗಳಿಗೆ ಲಭ್ಯವಿರಲಿಲ್ಲ.

ಕ್ಯಾರಿ ಓವರ್ ಪದ್ಧತಿ ರದ್ದಿಗೆ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಹುತೇಕ ವಿದ್ಯಾರ್ಥಿಗಳು ಪ್ರತಿಭಟನೆ ಸಹ ನಡೆಸಿದ್ದರು. ಈ ವಿಷಯ ಉನ್ನತ ಶಿಕ್ಷಣ ಸಚಿವರಿಗೂ ಮುಟ್ಟಿತ್ತು. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ವಿಟಿಯು ಕುಲಪತಿಗೆ ಸೂಚನೆ ನೀಡಿದ್ದರು.
ಕ್ಯಾರಿ ಓವರ್ ಲಭ್ಯವಿದ್ದೂ ನಾಲ್ಕಕ್ಕಿಂತ ಹೆಚ್ಚಿನ ವಿಷಯಗಳನ್ನು ಉಳಿಸಿಕೊಳ್ಳುವಂತಿಲ್ಲ. ಆದರೆ, ಕೊನೆ ವರ್ಷದ ಪರೀಕ್ಷೆ ತೆಗೆದುಕೊಳ್ಳುವಂಥ ಸಂದರ್ಭದಲ್ಲಿ ಮೊದಲ ವರ್ಷದ ಪರೀಕ್ಷೆಗಳನ್ನು ಕ್ಲಿಯರ್ ಮಾಡಿಕೊಂಡಿರಬೇಕು.
ಈ ಹೊಸ ನಿರ್ಣಯದಿಂದಾಗಿ ಅಂದಾಜು 7 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಿದ್ಯಾರ್ಥಿಗಳು ಮೊದಲ ವರ್ಷದಲ್ಲಿ ಅನುತ್ತೀರ್ಣರಾಗಿರುವ ಕಾರಣ ಅವರು ಮೂರನೇ ವರ್ಷಕ್ಕೆ ಪ್ರವೇಶ ಪಡೆದುಕೊಳ್ಳಲು ಅನರ್ಹರಾಗಲಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications