ಕಲಾಪದಲ್ಲಿ ವಕ್ಫ್ ಆಸ್ತಿ ವಿವಾದ, ವರದಿ ಕೇಳಿದ ರಾಜ್ಯಪಾಲರು
ಬೆಂಗಳೂರು, ಮಾರ್ಚ್ 29 : ವಿಧಾನಪರಿಷತ್ ಕಲಾಪದ ವರದಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಸೂಚಿಸಿದ್ದಾರೆ. ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ಅವರು ಸಲ್ಲಿಸಿರುವ ವರದಿ ಮಂಡನೆ ಕುರಿತು ಪರಿಷತ್ನಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ.
ಅನ್ವರ್ ಮಾಣಿಪ್ಪಾಡಿ ಅವರು ಸಲ್ಲಿಸಿರುವ ವರದಿ ಮಂಡನೆ ವಿಚಾರದಲ್ಲಿ ವಿಧಾನಪರಿಷತ್ನಲ್ಲಿ ಸೋಮವಾರವೂ ಗದ್ದಲ ನಡೆಯಿತು. ವರದಿ ತಿರಸ್ಕರಿಸಿರುವುದರಿಂದ ಮಂಡಿಸುವ ಪ್ರಶ್ನೆ ಇಲ್ಲ ಎಂದು ಸರ್ಕಾರ ಹೇಳಿದ್ದರೆ, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವರದಿ ಮಂಡನೆಗೆ ಪಟ್ಟು ಹಿಡಿದಿವೆ. [ರಾಜಭವನ ತಲುಪಿದ ವಕ್ಫ್ ಮಂಡಳಿ ಆಸ್ತಿ ವಿವಾದ]

ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವರದಿ ಮಂಡನೆಗೆ ಪಟ್ಟು ಹಿಡಿದು ಘೋಷಣೆಗಳನ್ನು ಕೂಗಿದರು. ಇದರಿಂದ ಕಲಾಪವನ್ನು ಮುಂದೂಡಲಾಯಿತು. ಮಧ್ಯಾಹ್ನ 3 ಗಂಟೆಗೆ ಕಲಾಪ ಆರಂಭವಾದಾಗಲೂ ಗದ್ದಲ ಮುಂದುವರೆಯಿತು. [ಭೂ ಹಗರಣ : ಸಚಿವ ಖಮರುಲ್ ಇಸ್ಲಾಂ ವಿರುದ್ಧ ತನಿಖೆ]
ಕಲಾಪದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು, 'ವರದಿ ಮಂಡಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸ್ಪೀಕರ್ ರೂಲಿಂಗ್ ನೀಡಿದ್ದಾರೆ. ಕಲಾಪ ಸಲಹಾ ಸಮಿತಿ ಸಭೆಯಲ್ಲಿಯೂ ಸರ್ಕಾರ ಒಪ್ಪಿದೆ. ಆದರೂ ವರದಿ ಏಕೆ ಮಂಡಿಸುತ್ತಿಲ್ಲ?' ಎಂದು ಪ್ರಶ್ನಿಸಿದರು. [ವಕ್ಫ್ ಆಸ್ತಿ 2.5 ಲಕ್ಷ ಕೋಟಿ ಹಂಚಲು ಆಗ್ರಹ]
ರಾಜ್ಯಪಾಲರ ಭೇಟಿ : ಜೆಡಿಎಸ್ ಮತ್ತು ಬಿಜೆಪಿ ಸದಸ್ಯರನ್ನು ಸಮಾಧಾನ ಪಡಿಸಿದ ಡಿ.ಎಚ್.ಶಂಕರಮೂರ್ತಿ ಅವರು, 'ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ವರದಿ ಮಂಡನೆ ಮಾಡುವಂತೆ ನೀಡಿದ ರೂಲಿಂಗ್ ಅನ್ನು ಸರ್ಕಾರ ಪಾಲಿಸುತ್ತಿಲ್ಲ. ಈ ಬಿಕ್ಕಟ್ಟು ಬಗೆಹರಿಯುತ್ತಿಲ್ಲ. ಆದ್ದರಿಂದ ರಾಜ್ಯಪಾಲರನ್ನು ಭೇಟಿ ಮಾಡಿ ವರದಿ ನೀಡುವೆ' ಎಂದು ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.
ಕಲಾಪದ ನಂತರ ಡಿ.ಎಚ್.ಶಂಕರಮೂರ್ತಿ ಮತ್ತು ಉಪ ಸಭಾಪತಿ ಮರಿತಿಬ್ಬೇಗೌಡ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಕಲಾಪದ ಬಗ್ಗೆ ವಿವರಣೆ ನೀಡಿದರು. ವಿರವರಣೆ ಪಡೆದ ಬಳಿಕ ಕಲಾಪದ ಕುರಿತು ವರದಿ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.
ಏನಿದು ವರದಿ? : ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಅನ್ವರ್ ಮಾಣಿಪ್ಪಾಡಿ ಅವರು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಗೆ ಸೇರಿದ ಆಸ್ತಿ ಒತ್ತುವರಿಯಾಗಿದೆ ಎಂದು 2012ರ ಮಾರ್ಚ್ 26ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.
ಸುಮಾರು 2 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಒತ್ತುವರಿಯಾಗಿದೆ. ಇದರಲ್ಲಿ ಪ್ರಭಾವಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು. ಕಾಂಗ್ರೆಸ್ ನಾಯಕರಾದ ಸಿ.ಕೆ.ಜಾಫರ್ ಷರೀಫ್, ರೋಷನ್ ಬೇಗ್, ಸಿ.ಎಂ.ಇಬ್ರಾಹಿಂ ಮುಂತಾದವರು ಹೆಸರು ಆಸ್ತಿ ಒತ್ತುವರಿ ಮಾಡಿಕೊಂಡವರ ಪಟ್ಟಿಯಲ್ಲಿತ್ತು.
ಆದರೆ, ಕಾಂಗ್ರೆಸ್ ಬಿಜೆಪಿ ಸರ್ಕಾರ ದುರುದ್ದೇಶದಿಂದ ಈ ವರದಿ ತಯಾರಿಸಿದೆ ಎಂದು ಹೇಳಿತ್ತು. ಕಾಂಗ್ರೆಸ್ ನಾಯಕರ ವಿರುದ್ಧ ಮಾಡಿರುವ ಆರೋಪಗಳಿಗೆ ದಾಖಲೆಗಳಿಲ್ಲ ಎಂದು ಹೇಳಿತ್ತು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬಿಜೆಪಿ ವರದಿಯನ್ನು ಸದನದಲ್ಲಿ ಮಂಡನೆ ಮಾಡಬೇಕು ಎಂದು ಒತ್ತಾಯಿಸುತ್ತಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications