Waqf property dispute: ಒಂದಿಂಚು ಜಾಗವೂ ಸರ್ಕಾರದಲ್ಲ ಜಮೀರ್ ಹಿಂಗಂದಿದ್ಯಾಕೆ ?
Waqf Board Property: ವಖ್ಫ್ ಆಸ್ತಿಯ ಬಗ್ಗೆ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹ್ಮದ್ಖಾನ್ ಅವರು ಮತ್ತೆ ಗುಡುಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಖ್ಫ್ ಆಸ್ತಿಯ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಮುಸ್ಲಿಂ ಸಮುದಾಯದ ನಡುವೆ ಭಿನ್ನಾಭಿಪ್ರಾಯ ಮುಂದುವರಿದಿದೆ. ಇದೀಗ ಜಮೀರ್ ಅಹ್ಮದ್ ಅವರು ವಖ್ಫ್ ಆಸ್ತಿಯ ಬಗ್ಗೆ ಮಾತನಾಡಿದ್ದಾರೆ. ಅದೇ ರೀತಿ ವಖ್ಫ್ ಆಸ್ತಿ ಎನ್ನುವುದು ಆಸ್ತಿ ದೇವರ ಆಸ್ತಿ. ಇದರ ಸಂರಕ್ಷಣೆ ಎಲ್ಲರ ಕರ್ತವ್ಯ ಎಂದೂ ಪುನರುಚ್ಚರಿಸಿದ್ದಾರೆ.
ಒಂದೇ ಒಂದು ಇಂಚೂ ಸರ್ಕಾರದಲ್ಲ
ಇನ್ನು ಇದೇ ಸಂದರ್ಭದಲ್ಲಿ ವಖ್ಫ್ ಆಸ್ತಿ ಸರ್ಕಾರ ಕೊಟ್ಟಿದ್ದು, ಅದು ಸರ್ಕಾರಕ್ಕೆ ಸೇರಿದ್ದು ಎಂಬ ಭಾವನೆ ಕೆಲವರಲ್ಲಿ ಇದೆ. ಒಂದೇ ಒಂದು ಇಂಚೂ ವಖ್ಫ್ ಬೋರ್ಡ್ ಸರ್ಕಾರದಿಂದ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಮುಂದುವರಿದು ವಖ್ಫ್ ಆಸ್ತಿ ಸಮುದಾಯದ ಒಳಿತಿಗಾಗಿ ದಾನಿಗಳು ಕೊಟ್ಟಿರುವ ದಾನವಾಗಿದೆ. ನಮಗೆ ಕಬಾರಸ್ಥಾನವನ್ನು ಹೊರತುಪಡಿಸಿದರೆ ಸರ್ಕಾರದಿಂದ ನಮಗೆ (ವಖ್ಫ್ ಬೋರ್ಡ್ಗೆ) ಬೇರೆ ಯಾವುದೇ ಜಾಗ ಕೊಟ್ಟಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೇ ವಖ್ಫ್ ಆಸ್ತಿ ಸಂರಕ್ಷಣೆ ಕೇವಲ ಸಚಿವರು ಅಥವಾ ರಾಜ್ಯಾಧ್ಯಕ್ಷರ ಜವಾಬ್ದಾರಿ ಮಾತ್ರವಲ್ಲ. ಜಿಲ್ಲಾಧ್ಯಕ್ಷರು ಹಾಗೂ ಅಧಿಕಾರಿಗಳ ಹೊಣೆಗಾರಿಕೆಯೂ ಹೌದು ಎಂದರು.

15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು
ಇನ್ನು ರಾಜ್ಯದಲ್ಲಿ ವಖ್ಫ್ ಬೋರ್ಡ್ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಮೀರ್ ಹೇಳಿದರು. ಈ ಸಂಬಂಧ ಯೋಜನೆ ರೂಪಿಸಲಾಗಿದೆ. ಅದೇ ಮಾದರಿಯಲ್ಲಿ ತಾಲ್ಲೂಕು ಮತ್ತು ಜಿಲ್ಲೆಗಳಲ್ಲಿ ವಖ್ಫ್ ಬೋರ್ಡ್ ವತಿಯಿಂದ ಆಸ್ಪತ್ರೆ ನಿರ್ಮಾಣಕ್ಕೂ ಚಿಂತನೆ ಇದೆ ಎಂದರು. ಜಿಲ್ಲಾ ಮಟ್ಟದಲ್ಲಿ ವಖ್ಫ್ ಅದಾಲತ್ ನಡೆಸುತ್ತಿರುವುದರಿಂದ ಹಲವಾರು ಸಮಸ್ಯೆ ಬಗೆಹರಿದಿದೆ. ಕರ್ನಾಟಕದ ಪ್ರತಿ ಜಿಲ್ಲೆಯಲ್ಲೂ ಇದೇ ಮಾದರಿ ಅದಾಲತ್ ಅನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎನ್ನುವ ಭರವಸೆ ನೀಡಿದರು. ಇದೇ ವೇಳೆ ಒಂದು ವರ್ಷ ಪೂರೈಸಿದ ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಅವರನ್ನು ಸನ್ಮಾನಿಸಲಾಯಿತು.
ವಖ್ಫ್ ಆಸ್ತಿ ಖಾತಾಗೆ ಒಂದು ತಿಂಗಳ ಗಡುವು
ಇನ್ನು ಜಮೀರ್ ಅಹ್ಮದ್ ಅವರು ವಖ್ಫ್ ಆಸ್ತಿಗಳಿಗೆ ಸಂಬಂಧಿಸಿದ ಖಾತಾ ಮಾಡಿಸುವುದಕ್ಕೆ ಒಂದು ತಿಂಗಳ ಗಡುವು ನೀಡಿದ್ದಾರೆ. ಈ ಗುಡುವಿನೊಳಗೆ ಖಾತಾ ಮಾಡಿಸುವಂತೆ ಈಗಾಗಲೇ ಹುಬ್ಬಳ್ಳಿ - ಧಾರವಾಡ ಪಾಲಿಕೆ ಸೇರಿದಂತೆ ವಿವಿಧ ಪಾಲಿಕೆಗಳಿಗೆ ಸಚಿವ ಜಮೀರ್ ಅಹ್ಮದ್ ಅವರು ಸೂಚನೆ ನೀಡಿದ್ದಾರೆ. ಇನ್ನು ಈ ನಿರ್ದಿಷ್ಟ ಆಸ್ತಿಗಳಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಂದಾಯ,ನಗರಸಭೆ, ಜಿಲ್ಲಾ ಪಂಚಾಯಿತಿ ಹಾಗೂ ನಗರಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ನಿರಂತರ ಸಂವಹನ ನಡೆಸುತ್ತಿರಬೇಕು ಎಂದೂ ಅವರು ಸೂಚನೆ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications