Waqf Property: ರೈತರಿಗೆ ಸರ್ಕಾರ ಗುಡ್ ನ್ಯೂಸ್, 11 ಎಕರೆ‌ ಮಾತ್ರವೇ ವಕ್ಫ್ ಆಸ್ತಿ

ಬೆಂಗಳೂರು, ಅಕ್ಟೋಬರ್ 28: ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಲಾಗುತ್ತಿದೆ. ದುರುದ್ದೇಶದಿಂದಲೇ ಇದೆಲ್ಲವನ್ನು ವಿವಾದ ಮಾಡುತ್ತಿದ್ದಾರೆ ಎಂದು ರಾಜ್ಯದ ಸರ್ಕಾರದ ಪರವಾಗಿ ಮೂವರು ಸಚಿವರು ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಈ ಸಂಬಂಧ ಉಂಟಾಗಿರುವ ಗೊಂದಲಗಳನ್ನು ಪರಿಹರಿಸಲು, ಆಗಿದ್ದೇನೆಂದು ವಿವರಿಸಲು ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ರೈತರ ಗೊಂದಲ ಬಗೆಹರಿಸುವ ಕೆಲಸ ಮಾಡಿದ್ದಾರೆ.

Waqf Land Controversy Only 11 Acre is Waqf Property Notice No issued to Farmers

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಒಂದು ಕಾಲಕ್ಕೆ 14,201.32 ಎಕರೆ ವಕ್ಫ್ ಮಂಡಳಿ ಆಸ್ತಿಯಾಗಿತ್ತು. ಈ ಪೈಕಿ ಭೂ ಸುಧಾರಣಾ ಕಾಯ್ದೆಯಡಿ 11,835.29 ಎಕರೆ ಮತ್ತು ಇನಾಂ ರದ್ದತಿ ಕಾಯ್ದೆಯಡಿ 1,459.26 ಎಕರೆಯನ್ನು ರೈತರಿಗೆ ಮಂಜೂರು ಮಾಡಲಾಗಿದೆ.

137 ಎಕರೆಯನ್ನು ವಿವಿಧ ಯೋಜನೆಗಳಿಗೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಉಳಿದ 773 ಎಕರೆ ಮಾತ್ರ ವಕ್ಫ್ ಸಂಸ್ಥೆಗಳ ಅಡಿಯಲ್ಲಿದೆ. ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ರೈತರಿಗೆ ವಕ್ಫ್ ಆಸ್ತಿಯೆಂದು ಯಾವುದೇ ನೊಟೀಸ್ ನೀಡಿಲ್ಲ ಎಂದರು. ಅದಕ್ಕೆ ಸಚಿವ ಎಂಬಿ ಪಾಟೀಲ್ ಧ್ವನಿಗೂಡಿಸಿದರು.

ಬಿಜೆಪಿ ನಾಯಕರ ತಿಕ್ಕಾಟದಿಂದ ರಾಜಕೀಯ ಬಣ್ಣ

ವಿಜಯಪುರದ ಮಹಾಲಬಾಗಾಯತದ ಪಕ್ಕದಲ್ಲಿ 1974ರ ಗೆಜೆಟ್ ಅಧಿಸೂಚನೆಯಲ್ಲಿ ಬ್ರ್ಯಾಕೆಟ್ ಒಳಗೆ ವಕ್ಫ್ ಆಸ್ತಿಯಡಿಯಲ್ಲಿ ಹೊನವಾಡ ಎಂದು ತಪ್ಪಾಗಿ ನಮೂದಿಸಲಾಗಿತ್ತು.1977ರಲ್ಲಿ ವಕ್ಫ್ ಮಂಡಳಿಯೇ ತನ್ನ ತಪ್ಪನ್ನು ಸರಿಪಡಿಸಿದೆ. ಇದು ವಿವಾದವೇ ಅಲ್ಲ. ಬಿಜೆಪಿಯಲ್ಲಿ ವಿಜಯೇಂದ್ರ ಮತ್ತು ಬಸವರಾಜ ಪಾಟೀಲ ಯತ್ನಾಳ್ ನಡುವೆ ನಡೆಯುತ್ತಿರುವ ತಿಕ್ಕಾಟದಿಂದ ಇದು ರಾಜಕೀಯ ಬಣ್ಣ ಪಡೆದುಕೊಂಡಿದೆ ಎಂದು ಅವರು ಹೇಳಿದರು.

ಇಂಡಿ ತಾಲ್ಲೂಕಿನಲ್ಲಿ ಮಾತ್ರ ಅಲ್ಲಿಯ ತಹಸೀಲ್ದಾರರು ಯಾವುದೇ ನೋಟೀಸ್ ನೀಡದೆ, 41 ಆಸ್ತಿಗಳನ್ನು ಇಂದೀಕರಣ ಮಾಡಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರೈತರು 1974ಕ್ಕಿಂತ ಮೊದಲಿನ ದಾಖಲೆ ಕೊಟ್ಟರೆ ಅಂತಹ ಆಸ್ತಿಗಳನ್ನು ವಕ್ಫ್ ಅಧಿಸೂಚನೆಯಿಂದ ಕೈಬಿಡಲಾಗುವುದು.

ಇನ್ನೂ ಬಾಧಿತ ರೈತರು ಉಪವಿಭಾಗಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರೆ, ಅವರು ಪರಿಶೀಲಿಸಿ, ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಆಸ್ತಿ ಕೇಸ್ ವಿಚಾರಣೆಗೆ ಟಾಸ್ಕ್ ಫೋರ್ಸ್ ರಚನೆ

ನಂತರ ಸಚಿವ ಎಂಬಿ ಪಾಟೀಲ ಅವರು ಮಾತನಾಡಿ, ವಕ್ಫ್ ಆಸ್ತಿ ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಜಿಲ್ಲಾಧಿಕಾರಿಗಳ ನೇತೃತ್ವದ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ವಿಜಯಪುರ ಪ್ರಕರಣದಲ್ಲಿ 1964ರಿಂದ 1973ರವರೆಗಿನ ಕಂದಾಯ ಮತ್ತು ವಕ್ಫ್ ದಾಖಲೆಗಳನ್ನು ತೌಲನಿಕವಾಗಿ ಪರಿಶೀಲಿಸಲು ಆದೇಶಿಸಲಾಗಿದೆ.

ಬಿಜೆಪಿ ಮುಖಂಡರು ಸದ್ಯ ಇರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡು ಜನರ ನಡುವೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಸತ್ಯ ಶೋಧನೆಗೆ ಬಿಜೆಪಿ ಸಮಿತಿ ಬಂದರೆ ಕಾಫಿ- ಟೀ ಕೊಟ್ಟು ಪೂರ್ಣ ಮಾಹಿತಿ ನೀಡಲು ಜಿಲ್ಲಾಡಳಿತಕ್ಕೂ ಸೂಚಿಸಲಾಗಿದೆ‌ ಎಂದು ಅವರು ಮಾಹಿತಿ ನೀಡಿದರು.

11 ಎಕರೆ ಮಾತ್ರ ವಕ್ಫ್ ಮಂಡಳಿಯದ್ದು: ಜಮೀರ್

ವಕ್ಫ್ ಸಚಿವ ಜಮೀರ್ ಅಹಮದ್ ಮಾತನಾಡಿ, ನಮಗೆ ರೈತರ ಯಾವ ಜಮೀನೂ ಬೇಡ. ನಾನೂ ರೈತನ ಮಗನೇ.‌ ಇಷ್ಟಕ್ಕೂ ಹೊನವಾಡದಲ್ಲಿ 11 ಎಕರೆ ಮಾತ್ರ ವಕ್ಫ್ ಮಂಡಳಿಯದೇ ವಿನಾ 1,200 ಎಕರೆ ಅಲ್ಲ. ಅದೆಲ್ಲ‌ ರೈತರದೇ ಆಗಿದೆ ಎಂದು ಅವರು ಈ ವೇಳೆ ಸ್ಪಷ್ಟಪಡಿಸಿ, ರೈತರ ಆತಂಕ ಕಡಿಮೆ ಮಾಡಿದರು.

ವಿಜಯಪುರದಲ್ಲಿ 1,345 ಎಕರೆ ವಕ್ಫ್ ಆಸ್ತಿ ಒತ್ತುವರಿಯಾಗಿದೆ. ಇದು ಯಾರಿಗೂ ಅಧಿಕೃತವಾಗಿ ಹಂಚಿಕೆ ಆಗಿಲ್ಲ. ಇದರಲ್ಲಿಯೂ ಸುಮಾರು 26 ಎಕರೆ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ಕೋರ್ಟ್ ನಲ್ಲಿದೆ. ಇದು ಬಿಟ್ಟರೂ 1,319 ಎಕರೆ ವಕ್ಪ್ ಆಸ್ತಿ ಅಕ್ರಮವಾಗಿ ಬೇರೆ ವ್ಯಕ್ತಿ/ಸಂಸ್ಥೆಗಳ ವಶದಲ್ಲಿ ಇದ್ದು ಅದನ್ನು ಸರಿ‌ ಮಾಡಿಕೊಡಲು ಕೇಳಲಾಗಿದೆ. ಇದು ಬಿಟ್ಟರೆ ನಮಗೆ ಬೇರೆ ಯಾರ ಆಸ್ತಿಯೂ‌ ಬೇಡ ಎಂದು ಅವರು ಸ್ಪಷ್ಟಪಡಿಸಿದರು.

ವಿಜಯಪುರದಲ್ಲಿ ವಕ್ಫ್ ಅದಾಲತ್ ನಡೆಸಿದಾಗ ಅಲ್ಲಿನ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರಿಗೂ ಆಹ್ವಾನ ನೀಡಲಾಗಿತ್ತು. ಅಂದು ಸಭೆಗೆ ಬಾರದ ಅವರು ಈಗ ಬೇಕೆಂದೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಟೀಕಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+