ವಕ್ಫ್ ಆಸ್ತಿ, ನೋಟಿಸ್ ವಿವಾದ: ರಾಜ್ಯ ಪ್ರಭಾವಿ ಸಚಿವರಿಂದಲೇ ಭಿನ್ನ ಹೇಳಿಕೆ!
waqf board controversy: ವಕ್ಫ್ ಬೋರ್ಡ್ನಿಂದ ನೋಟಿಸ್ ನೀಡಿರುವ ವಿಚಾರದಲ್ಲಿ ಕಾಂಗ್ರೆಸ್ನ ಪ್ರಭಾವಿ ಸಚಿವರೇ ಭಿನ್ನ ಹೇಳಿಕೆಗಳು ಕೊಡುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ. ವಕ್ಫ್ ಬೋರ್ಡ್ನಿಂದ ರೈತರಿಗೆ ನೋಟಿಸ್ ನೀಡಲಾಗಿದೆ ಎನ್ನುವ ವಿಷಯ ಇದೀಗ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಇದೀಗ ರಾಜ್ಯ ಕಾಂಗ್ರೆಸ್ ಸಚಿವರೇ ಈ ವಿಷಯದಲ್ಲಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ.
ವಕ್ಫ್ ಬೋರ್ಡ್ನಿಂದ ನೋಟಿಸ್ ನೀಡುರುವ ವಿಚಾರವಾಗಿ ಸಚಿವರಾದ ಸಂತೋಷ ಲಾಡ್ ಹಾಗೂ ಜಮೀರ್ ಅಹ್ಮದ್ ಖಾನ್ ಅವರು ವ್ಯತ್ಯರಿಕ್ತ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಈ ಇಬ್ಬರು ಸಚಿವರ ಹೇಳಿಕೆಗಳೇ ಇದೀಗ ಸಾಕಷ್ಟು ಗೊಂದಲವನ್ನು ಸೃಷ್ಟಿ ಮಾಡಿದೆ. ಈ ಬಗ್ಗೆ ಮಾತನಾಡಿರುವ ಸಂತೋಷ್ ಲಾಡ್ ಅವರು, ವಕ್ಫ್ ಗೊಂದಲ ವಿಚಾರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸುಮ್ಮನೆ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ವಕ್ಫ್ ಸಂಬಂಧ ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ ಎಂದಿದ್ದಾರೆ.

ನಮ್ಮ ಸರ್ಕಾರ ಬಂದಾಗಿನಿಂದ ನೋಟಿಸ್ ಕೊಟ್ಟಿಲ್ಲ ಹಿಂದಿನ ಸರ್ಕಾರದ ಅವಧಿಯಲ್ಲಿ ನೋಟಿಸ್ ಕೊಟ್ಟಿದ್ದು ಇದು ನಾವು ಬಂದಾಗಿನಿಂದ ನೋಟಿಸ್ ಹೋಗಿಲ್ಲ. ಈಗಾಗಲೇ ನೋಟಿಸ್ ಕೊಟ್ಟಿರುವುದು 2018ರಲ್ಲಿ. ಇದು ನಮ್ಮ ಗಮನಕ್ಕೆ ಇಲ್ಲಿವರೆಗೂ ಬಂದಿರಲಿಲ್ಲ
ಈಗ ಗಮನಕ್ಕೆ ಬಂದಿದೆ. ಸೋಮವಾರ ಈ ಸಂಬಂಧ ಸಭೆ ಮಾಡಲು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆ. ಇದರ ಜೊತೆಗೆ ಸಂಬಂಧಿಸಿದವರ ಜೊತೆ ಸಭೆ ಮಾಡಿ ವರದಿ ಕೊಡಲು ಹೇಳಿದ್ದೇನೆ ಎಂದರು.
ಇನ್ನು ಮುಸ್ಲಿಂ ರೈತರ ಪಹಣಿಯಲ್ಲಿಯೂ ವಕ್ಫ್ ಪ್ರಸ್ತಾಪ ವಿಚಾರವಾಗಿ ಸಹ ಮಾತನಾಡಿದ ಅವರು ವಕ್ಫ್ ಮಾತ್ರವಲ್ಲ, ಮುಜರಾಯಿ ಇಲಾಖೆಯ ಜಾಗವೂ ಕಬಳಿಕೆ ಆಗಿದೆ. ಕಂದಾಯ ಇಲಾಖೆ, ಬಿಡಿಎ ಸೈಟ್ಗಳೂ ಕಬಳಿಕೆ ಆಗಿವೆ. ಹೀಗಾಗಿ, ನೋಟಿಸ್ಗಳನ್ನು ಕೊಡ್ತಾ ಇದ್ದಾರೆ. ಇದಕ್ಕಾಗಿಯೇ ಟ್ರಿಬ್ಯುನಲ್ ಇದೆ. ಆ ಮೂಲಕ ಎಲ್ಲವೂ ನಡೆಯುತ್ತದೆ ಎಂದರು. ಉಪಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರನಲ್ಲಿ ಚೆನ್ನಾಗಿ ಪ್ರಚಾರ ನಡೆದಿದ್ದು ಸಂಪೂರ್ಣ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.
ನೋಟಿಸ್ ಕೊಟ್ಟಿದ್ದರೆ ವಾಪಸ್ ತಗೋತೀವಿ
ಇನ್ನು ಈ ನಡುವೆ ವಕ್ಫ್ ಬೋರ್ಡ್ನಿಂದ ಯಾವುದೇ ರೈತರಿಗೂ ನೋಟಿಸ್ ಜಾರಿ ಮಾಡಿಲ್ಲ. ಒಂದೊಮ್ಮೆ ನೋಟಿಸ್ ನೀಡಿದ್ದರೆ ಅದನ್ನು ವಾಪಸ್ ತಗೋತೀವಿ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ವಕ್ಫ್ ಆಸ್ತಿ ಯಾರಿಗೂ ಸೇರಿದ್ದಲ್ಲ. ಸರ್ಕಾರದ್ದೂ ಅಲ್ಲ. ಸರ್ಕಾರದಿಂದ ಒಂದೇ ಒಂದು ಇಂಚು ಆಸ್ತಿಯನ್ನೂ ಸಹ ಪಡೆದಿಲ್ಲ. ಆದರೆ, ಯಾವುದೇ ರೈತರಿಗೆ ನೋಟಿಸ್ ಜಾರಿ ಮಾಡಿದ್ದರೆ ನಾವು ಹಿಂಪಡೆಯಲಿದ್ದೇವೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಯಾವುದೇ ರೈತರ ಆಸ್ತಿಗೆ ನೋಟಿಸ್ ಕೊಡ್ಬೇಡಿ ಅಂತ ಹೇಳಿದ್ದಾರೆ. ಬಿಜೆಪಿ ಅವರು ರಾಜಕೀಯ ಮಾಡಲಿ. ಆದರೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು ಎಂದಿದ್ದಾರೆ.
ಈ ರೀತಿ ರಾಜ್ಯ ಸರ್ಕಾರದ ಪ್ರಮುಖ ಸಚಿವರೇ ಒಂದೊಂದು ಹೇಳಿಕೆ ಕೊಡುತ್ತಿರುವುದು ಸದ್ಯ ಜನರಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ. ಇನ್ನು ಉಪ ಚುನಾವಣೆ ದಿನಾಂಕವೂ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ವಕ್ಫ್ ಬೋರ್ಡ್ ವಿವಾದ ಸೃಷ್ಟಿಯಾಗಿರುವುದು ಸರ್ಕಾರಕ್ಕೆ ಭಾರೀ ಮುಜುಗರವನ್ನು ತಂದೊಡ್ಡಿದೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications