ಈಶ್ವರಪ್ಪ-ಸಿದ್ದರಾಮಯ್ಯ ವಾಕ್ಸಮರಕ್ಕೆ ಸದನ ಅಕ್ಷರಸಃ ತಬ್ಬಿಬ್ಬು
ಬೆಂಗಳೂರು, ಅ 11: ಬರ ಪರಿಹಾರ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನಡುವೆ ಕಾವೇರಿದ ವಾಕ್ಸಮರಕ್ಕೆ ಸದನ ಸಾಕ್ಷಿಯಾಯಿತು.
'ಹತ್ತು ಸಾವಿರ ಕೊಟ್ಟಿಲ್ವಾ, ಅದೇ ಜಾಸ್ತಿ ಎಂದು ಈಶ್ವರಪ್ಪ ಹೇಳುತ್ತಾರೆ" ಎನ್ನುವ ಸಿದ್ದರಾಮಯ್ಯನವರ ಮಾತಿಗೆ ಈಶ್ವರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. 'ನೀವು ನನ್ನ ಹೆಸರನ್ನು ಹೇಳಿದ್ದೀರಾ, ಹಾಗಾಗಿ ಅದಕ್ಕೆ ನಾನು ಉತ್ತರ ಕೊಡಬೇಕು. ಕೂತ್ಕೊಳ್ರೀ ಒಂದು ನಿಮಿಷ" ಎಂದು ಈಶ್ವರಪ್ಪ ಮಾತಿಗಿಳಿದರು.
"ನಿಮ್ಮದೇನು ಪ್ರಜಾಪ್ರಭುತ್ವ ವ್ಯವಸ್ಥೆನಾ, ಮಾನವೀಯತೆನಾ, ಇದು ರಾಕ್ಷಸೀ ಪ್ರವೃತ್ತಿ" ಎಂದು ಈಶ್ವರಪ್ಪ ಕಿಡಿಕಾರಿದರು. "ಇದ್ಯಾವುದೂ ನಾನು ಹೇಳಿದ ಹೇಳಿಕೆಯಲ್ಲ. ಎಲ್ಲಾ ಪತ್ರಿಕೆಗಳಲ್ಲಿ ಬಂದಿದೆ" ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

"ಎರಡು ತಿಂಗಳಿನಿಂದ ಗುದ್ದಾಡಿ, ಸೋನಿಯಾ ಗಾಂಧಿ ಮನೆಬಾಗಿಲಿಗೂ ಬರಲು ಅವಕಾಶ ನೀಡದಿದ್ದಾಗ, ವಿರೋಧ ಪಕ್ಷದ ನಾಯಕರಾದವರು ನೀವು. ನಾಚಿಕೆಯಾಗಬೇಕು ನಿಮಗೆ" ಎಂದು ಈಶ್ವರಪ್ಪ ಲೇವಡಿ ಮಾಡಿದರು. ಈಶ್ವರಪ್ಪನವರ ಈ ಹೇಳಿಕೆ, ಸದನದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು.
"ಉಪಮುಖ್ಯಮಂತ್ರಿಯಾದವರು ನೀವು ಈಗ ಸಚಿವರಾಗಿದ್ದೀರಿ. ನಿಮ್ಮ ಮುಂದೆಯೇ ಬೇರೆ ಇಬ್ಬರು ಡಿಸಿಎಂ ಆದರು. ನಾಚಿಕೆ ನಿಮಗೆ ಆಗಬೇಕು. ನಾನಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿದ್ದೆ. ನನಗೆ ಹೇಳುವ ನಿಮಗೆ, ಮೋದಿ ಎದುರು ಹೋಗುವ ಧೈರ್ಯವಿದೆಯಾ" ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
"ನಿಮ್ಮ ನಾಯಕತ್ವದಲ್ಲಿ ಕಾಂಗ್ರೆಸ್ ಸರಕಾರ ಉರುಳಿತು. 78ಸ್ಥಾನಕ್ಕೆ ಪಕ್ಷವನ್ನು ಇಳಿಸಿದ್ರಿ. ಇನ್ನೇನು ಉಳಿದಿದೆ ನಿಮಗೆ, ಕೂತ್ಕೊಳ್ರೀ ಸುಮ್ಮನೆ" ಎಂದು ಈಶ್ವರಪ್ಪ ಸಿಟ್ಟಿನ ಮಾತನ್ನು ನುಡಿದರು.
ಇದಕ್ಕೆ ಮತ್ತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, " ಅದು ನಮ್ಮ ಪಕ್ಷದ ಸಮಸ್ಯೆ, ನಿಮಗ್ಯಾಕ್ರೀ ಅದು. ನಮ್ಮ ಪಕ್ಷದ ತೀರ್ಮಾನ, ನೀವ್ಯಾರು ಅದನ್ನು ಕೇಳೋಕೆ" ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. ಕೊನೆಗೆ, ಮಧ್ಯಪ್ರವೇಶಿಸಿದ ಸ್ಪೀಕರ್, ಭಾಷಣವನ್ನು ಮುಂದುವರಿಸಿ ಎಂದು ಸಿದ್ದರಾಮಯ್ಯನವರಿಗೆ ಸೂಚಿಸಿದರು.
-
ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ -
ವಿಶ್ವ ಆರೋಗ್ಯ ದಿನ 2026: ಸ್ವಸ್ಥ ಕರ್ನಾಟಕ ನಿರ್ಮಾಣಕ್ಕೆ ಸಿದ್ದರಾಮಯ್ಯ ನೀಡಿದ 'ಆರೋಗ್ಯ ಭಾಗ್ಯ'ಗಳ ಪಟ್ಟಿ ಇಲ್ಲಿದೆ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ












Click it and Unblock the Notifications