ಕೊರೊನಾ ನಿಯಂತ್ರಿಸಲು ವೈದ್ಯಕೀಯ ಕಾಲೇಜುಗಳಲ್ಲಿ ವಾರ್ ರೂಂ
ಬೆಂಗಳೂರು, ಮಾರ್ಚ್ 16 : "ರಾಜ್ಯದ ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೊರೊನಾ ವಿರುದ್ಧ ಹೋರಾಟ ಮಾಡಲು ವಾರ್ ರೂಂ ರೀತಿ ತಯಾರಿ ಮಾಡಲಾಗುತ್ತದೆ" ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಸೋಮವಾರ ವಿಧಾನಸೌಧದಲ್ಲಿ ಸಚಿವರು ಪತ್ರಿಕಾಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ವೈದ್ಯಕೀಯ ಶಿಕ್ಷಣ ಸಚಿವರು ಅಧಿಕಾರಿಗಳ ಜೊತೆ ತುರ್ತು ಸಭೆಯನ್ನು ನಡೆಸಿದರು. ಸರ್ಕಾರಿ ವೈದ್ಯಕೀಯ ಕಾಲೇಜುಗಳ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯ ಬಳಿಕ ಮಾತನಾಡಿದ ಸಚಿವ ಡಾ. ಕೆ. ಸುಧಾಕರ್, "ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಕೋವಿಡ್-19 ವಿರುದ್ಧ ಹೋರಾಟ ಮಾಡುಲು ವಾರ್ ರೂಂ ರೀತಿ ತಯಾರಿ ಮಾಡಲಾಗುತ್ತದೆ" ಎಂದು ವಿವರಣೆ ನೀಡಿದರು.

"ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಲ್ಯಾಬ್, ಹೆಲ್ಪ್ ಡೆಸ್ಕ್ ಮಾಡಲಾಗುತ್ತದೆ. ಎರಡು, ಮೂರು ತಿಂಗಳ ಮಟ್ಟಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಮಾಹಿತಿಗಳನ್ನು ಪಡೆದುಕೊಳ್ಳುತ್ತೇನೆ" ಎಂದು ಸಚಿವರು ಹೇಳಿದರು.
"ಮುಂದುವರೆದ ದೇಶಗಳ ರೀತಿ ಕೊರೊನಾ ಸ್ಟೇಜ್ ಮೂರರ ಮಟ್ಟಕ್ಕೆ ತಲುಪಿದರೆ ಕಷ್ಟವಾಗುತ್ತದೆ. ಆ ನಿಟ್ಟಿನಲ್ಲೂ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದೇವೆ. ಸರ್ಕಾರಿ ಕಟ್ಟಡಗಳನ್ನು ಕೊರೊನಾ ತಡೆಗಟ್ಟಲು ಬಳಸಿಕೊಳ್ಳಲಾಗುತ್ತದೆ" ಎಂದು ಸಚಿವರು ವಿವರಿಸಿದರು.
"ಸಾಮಾನ್ಯ ನೆಗಡಿ, ಕೆಮ್ಮು, ಜ್ವರಕ್ಕೆ ಕೋವಿಡ್-19 ಅಂತಾ ಭಯ ಬೇಡ. ಯಾರು ವಿದೇಶದಿಂದ ಬಂದಿದ್ದಾರೆ, ಅವರ ಜೊತೆ ಯಾರು ಸಂಪರ್ಕದಲ್ಲಿದ್ದರೂ ಅವರು ಇಂತಹ ಲಕ್ಷಣಗಳು ಕಂಡು ಬಂದರೆ ಕೊರೊನಾ ಸೋಂಕಿನ ಬಗ್ಗೆ ಪರೀಕ್ಷೆ ಮಾಡಿಸಿಕೊಳ್ಳಬೇಕು" ಎಂದು ಸಚಿವರು ಕರೆ ನೀಡಿದರು.
"ಕೊರೊನಾ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಜನರು ಸಹಾಯವಾಣಿ ಸಂಖ್ಯೆ 104ಕ್ಕೆ ಕರೆ ಮಾಡಿ ಕೋವಿಡ್-19 ಬಗ್ಗೆ ಯಾವುದೇ ಗೊಂದಲಗಳಿದ್ದರೂ ಬಗೆಹರಿಸಿಕೊಳ್ಳಬಹುದು" ಎಂದು ಸಚಿವರು ಹೇಳಿದರು.
-
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Vastu Tips: ಮನೆಯಲ್ಲಿ ಎರಡು ಕನ್ನಡಿಗಳು ಎದುರುಬದರಿನಲ್ಲಿ ಇದೆಯಾ? ತಕ್ಷಣ ಬದಲಿಸಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ











Click it and Unblock the Notifications