ಉಡುಪಿಯ ಕೃಷ್ಣ ಕನಕರ ಭಕ್ತಿಗೆ ಪಶ್ಚಿಮಕ್ಕೆ ತಿರುಗಿದ್ದು ಹೌದೆ?
Recommended Video

ಕನಕ ದಾಸರ ಭಕ್ತಿಗೆ ಒಲಿದು ಉಡುಪಿಯಲ್ಲಿನ ಕೃಷ್ಣ ಪಶ್ಚಿಮಕ್ಕೆ ತಿರುಗಿದ್ದು ಸತ್ಯ ಎಂದು ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥರು ಉಡುಪಿಯಲ್ಲಿ ಸೋಮವಾರ ಕನಕ ಜಯಂತಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಅದೇ ವೇಳೆ ಈ ಮಾತನ್ನು ಪ್ರಗತಿಪರರೂ ಒಪ್ಪುವುದಿಲ್ಲ ಹಾಗೂ ಸನಾತನಿಗಳು ಸಹ ಮಾನ್ಯ ಮಾಡುವುದಿಲ್ಲ ಎಂದು ಕೂಡ ಹೇಳಿದ್ದಾರೆ.
ಕನಕದಾಸರ ಭಕ್ತಿಗೆ ಒಲಿದ ಕೃಷ್ಣ ಪೂರ್ವ ದಿಕ್ಕಿಗೆ ಮುಖ ಮಾಡಿದ್ದವನು ಪಶ್ಚಿಮಕ್ಕೆ ತಿರುಗಿದ ಎಂಬ ಬಗ್ಗೆಯೇ ಹಲವು ವಾದ- ಪ್ರತಿ ವಾದಗಳಿವೆ. ಉಡುಪಿಯ ಕೃಷ್ಣ ವಿಗ್ರಹ ಇದ್ದದ್ದೇ ಪಶ್ಚಿಮ ದಿಕ್ಕಿಗೆ. ಅದರಲ್ಲಿ ತಿರುಗುವ ಮಾತೇ ಇಲ್ಲ ಎಂದು ವಾದಿಸುವವರು ಕೂಡ ಇದ್ದಾರೆ. ಒಟ್ಟಾರೆ ಕೃಷ್ಣ ವಿಗ್ರಹ ಪಶ್ಚಿಮಕ್ಕೆ ತಿರುಗಿದ ವಿಚಾರವೇ ಚರ್ಚಾ ವಸ್ತು.
ಹೀಗಿರುವಾಗ ಸೋಮವಾರ ಪೇಜಾವರ ಶ್ರೀಗಳು ನೀಡಿದ ಹೇಳಿಕೆ ಮತ್ತೆ ಚರ್ಚೆಗೆ ಕಾರಣವಾಗಿದೆ. ಅದಕ್ಕಾಗಿ ಅವರು ಯತಿಗಳಾದ ವಾದಿರಾಜರ ಹಾಡೊಂದು ಸಾಕ್ಷಿಯಾಗಿದೆ ಅಂತಲೂ ಹೇಳಿದ್ದು, ಇನ್ನು ಮುಂದೆ ಈ ಬಗ್ಗೆ ಯಾವುದೇ ವಾದ- ವಿವಾದ ಬೇಡ ಅಂತಲೂ ಸೇರಿಸಿದ್ದಾರೆ. ಆದರೆ ಈ ಬಗ್ಗೆ ಧಾರ್ಮಿಕ ಚಿಂತಕರಲ್ಲೇ ಭಿನ್ನವಾದ ಅಭಿಪ್ರಾಯ ಕೇಳಿಬಂದಿದೆ.
ಆ ಅಭಿಪ್ರಾಯಗಳನ್ನು ತಿಳಿಯಲು ಮುಂದೆ ಓದಿ.

ಭಕ್ತ ಕನಕ ದಾಸ ಸಿನಿಮಾ ಬಿಡುಗಡೆ ನಂತರದ ವಾದ
ಉಡುಪಿಯ ಶ್ರೀಕೃಷ್ಣ ಪಶ್ಚಿಮಕ್ಕೆ ತಿರುಗಿದ ಎಂಬ ವಿಚಾರ ಆರಂಭವಾಗಿದ್ದೇ ರಾಜಕುಮಾರ್ ನಟಿಸಿದ್ದ ಭಕ್ತ ಕನಕ ದಾಸ ಸಿನಿಮಾ ಬಿಡುಗಡೆ ಆದ ಮೇಲೆ. ಮಧ್ವಾಚಾರ್ಯರ ತಂತ್ರಸಾರ ಸಂಗ್ರಹದಲ್ಲಿ ದೇವಾಲಯ ವಾಸ್ತುಗಳ ಬಗ್ಗೆ ಪ್ರಸ್ತಾಪವಾಗಿದ್ದು, ಆ ಪ್ರಕಾರ ವಿಗ್ರಹ ಇದ್ದಿದೇ ಪಶ್ಚಿಮಾಭಿಮುಖವಾಗಿ ಎಂಬುದು ಸತ್ಯ ಎನ್ನುತ್ತಾರೆ ಸಂಸ್ಕೃತ ವಿದ್ವಾಂಸರು ಹಾಗೂ ಧಾರ್ಮಿಕ ಚಿಂತಕರಾದ ಭೀಮಸೇನಾಚಾರ್ ಅತನೂರು.

ಮೇಲುಕೋಟೆಯಲ್ಲಿದ್ದರೆ ಕನಕ ದಾಸರು?
ಇನ್ನೂ ಕೆಲವರು ವಾದ ಮಾಡುವ ಪ್ರಕಾರ ಕನಕ ದಾಸರು ಇದ್ದದ್ದು ಮೇಲುಕೋಟೆಯಲ್ಲಿ. ಅವರ ಕೀರ್ತನೆಗಳು ರಚನೆಯಾದದ್ದು ಮೇಲುಕೋಟೆ ಚೆಲುವನಾರಾಯಣನ ಬಗ್ಗೆಯೇ. ಉಡುಪಿಯ ದೇವಾಲಯ ಹಾಗೂ ಕೃಷ್ಣನ ವಿಚಾರವನ್ನು ಎಳೆದು ತರಲಾಗಿದೆ ಎಂಬ ವಾದವನ್ನು ಶ್ರೀವೈಷ್ಣವರು ಮುಂದಿಡುತ್ತಾರೆ.

ಷಣ್ಮುಖ ದೇವಾಲಯ ಎಂಬ ವಾದ
ಈ ಹಿಂದೆ ಉಡುಪಿಯದು ಕೃಷ್ಣ ಮಠವೇ ಅಲ್ಲ, ಅದೊಂದು ಷಣ್ಮುಖ ದೇವಸ್ಥಾನ. ದೇವಾಲಯದ ವಾಸ್ತು ಹಾಗೂ ವಿಗ್ರಹದ ಪ್ರಮಾಣ ಎಲ್ಲವನ್ನೂ ಗಮನಿಸಿದರೆ ಷಣ್ಮುಖ ದೇವಾಲಯ ಎಂದು ತಿಳಿದುಬರುತ್ತದೆ ಎಂದು ದೇವಾಲಯ ವಾಸ್ತುಶಾಸ್ತ್ರಜ್ಞರು ಕೆಲವರು ವಾದ ಮಂಡಿಸಿದ್ದರು.

ಐತಿಹಾಸಿಕ ದಾಖಲೆ ಇದ್ದಲ್ಲಿ ಬಯಲಾಗಲಿ
ಕನಕ ದಾಸರ ಕಾಲಘಟ್ಟದಲ್ಲೇ ಇದ್ದ ಪುರಂದರ ದಾಸರಿಗೆ ಮಾನ್ಯತೆ ಸಿಕ್ಕಿತು. ಮತ್ತು ಅವರ ಪವಾಡಗಳನ್ನು ಒಪ್ಪಿಕೊಂಡಂತೆ ಕನಕರನ್ನು ಒಪ್ಪಲು ಹಿಂದೆ ಮುಂದೆ ಯೋಚಿಸುತ್ತಾರೆ ಎಂದು ಪೇಜಾವರ ಶ್ರೀಗಳೇ ಹೇಳಿದ್ದಾರೆ. ಕನಕರ ಭಕ್ತಿಗೆ ಮೆಚ್ಚಿ ಕೃಷ್ಣ ವಿಗ್ರಹ ಪಶ್ಚಿಮಕ್ಕೆ ತಿರುಗಿದ್ದು ಹೌದಾ ಎಂಬ ಬಗ್ಗೆ ಐತಿಹಾಸಿಕ ದಾಖಲೆಗಳು ಇದ್ದಲ್ಲಿ ಅದು ಬಹಿರಂಗ ಆಗಬೇಕಿದೆ. ಈ ವಿಚಾರದಲ್ಲಿ ಇನ್ನಷ್ಟು ಚರ್ಚೆಗಳು ನಡೆಯಬೇಕಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications