ದೀಪದ ಕೆಳಗೆ ಕತ್ತಲೆ: ಚಿಕ್ಕಮಗಳೂರಲ್ಲಿ ಜಲ ಅಭಾವ
ಚಿಕ್ಕಮಗಳೂರು, ಜು.21: 'ದೀಪದ ಕೆಳಗೆ ಕತ್ತಲೆ' ಎಂಬ ಮಾತಿನಂತೆ ಚಿಕ್ಕಮಗಳೂರು ಜಿಲ್ಲೆಯ ಅರೆ ಮಲೆನಾಡು ಹಾಗೂ ಬಯಲು ಸೀಮೆ ಪ್ರಾಂತ್ಯಗಳಲ್ಲಿ ಕುಡಿಯುವ ನೀರಿನ ಅಭಾವ, ಶೌಚಾಲಯ ಕೊರತೆ ಸಮಸ್ಯೆ ಮತ್ತೆ ಭುಗಿಲೆದ್ದಿದೆ. ಆದರೆ, ಶಾಶ್ವತ ಪರಿಹಾರ ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕಾ ಮೆರಿ ಫ್ರಾನ್ಸಿಸ್ ಹೇಳಿದ್ದಾರೆ.
ಜಿಲ್ಲೆಯ ಒಂದೆಡೆ ಪುನರ್ವಸು ಮಳೆಗೆ ನದಿಗಳು ತುಂಬಿ ತುಳುಕುತ್ತಿವೆ. ಜಿಲ್ಲೆಯಲ್ಲಿ ಸರಿ ಸುಮಾರು ಐದಾರು ನದಿಗಳು ಹುಟ್ಟಿದರೂ ಪಕ್ಕದ ಜಿಲ್ಲೆಯ ರೈತರ ಮನೆ ಬೆಳಗುತ್ತಿವೆ ಹೊರತೂ ಕಡೂರು, ತರೀಕೆರೆ ತಾಲೂಕಿಗೆ ಕೊಂಚಿತ್ತೂ ಪ್ರಯೋಜನವಾಗುತ್ತಿಲ್ಲ.
ಶಾಶ್ವತ ಪರಿಹಾರ ಸಾಧ್ಯ: ಜಿಲ್ಲೆಯಲ್ಲಿ ಅಪೂರ್ಣಗೊಂಡಿರುವ ಕುಡಿಯುವ ನೀರಿನ ಯೋಜನೆಗಳ ಸ್ಥಿತಿ ಗತಿ ಅಧ್ಯಯನ ಮಾಡಿ ಪೂರ್ಣ ಗೊಳಿಸಲಾಗುವುದು. ಬಯಲು ಶೌಚಕ್ಕೆ ಸಂಪೂರ್ಣವಾಗಿ ಪೂರ್ಣ ವಿರಾಮ ಹಾಕಲಾಗುತ್ತದೆ. ಪ್ರತಿ ಮನೆಗೊಂದು ಶೌಚಾಲಯ ನಿರ್ಮಿಸಲಾಗುತ್ತದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
ಆರ್ಟ್ ಆಫ್ ಲಿವಿಂಗ್ ನೆರವು: ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿರುವ ಸ್ವಸಹಾಯ ಸಂಘಗಳು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆ, ನೆಹರು ಯುವಕ ಕೇಂದ್ರ ನೆರವು ಬಳಸಿಕೊಂಡು ಶೌಚಾಲಯ ನಿರ್ಮಿಸಲಾಗುವುದು ಎಂದು ಹೇಳಿದರು.
ಸರ್ಕಾರ ಈ ವರ್ಷ ಒಟ್ಟು 27 ಸಾವಿರ ವೈಯಕ್ತಿಕ ಶೌಚಾಲಯ ನಿರ್ಮಾಣದ ಗುರಿ ನೀಡಿದೆ. ಜತೆಗೆ 70ಕ್ಕೂ ಅಧಿಕ ಶಾಲೆ ಮತ್ತು ಅಂಗನವಾಡಿಗಳಿಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕಿದೆ. ನಿರ್ಮಲ್ ಭಾರತ್ ಯೋಜನೆಯಡಿ ನಿರ್ಮಾಣಕ್ಕೆ ನೆರವಾಗುವ ಕಾರ್ಯಕರ್ತರಿಗೆ 150 ರು ಗೌರವ ಧನ ಸಿಗಲಿದೆ ಎಂದರು.
ಗ್ರಾಮ ಪುರಸ್ಕಾರಕ್ಕಾಗಿ ಅರ್ಜಿ : ಜಿಲ್ಲೆಯಲ್ಲಿ 65 ಗ್ರಾಮ ಪಂಚಾಯಿತಿಗಳು ನಿರ್ಮಲ ಗ್ರಾಮಪಂಚಾಯಿತಿಗಳೆಂಬ ಪುರಸ್ಕಾರಕ್ಕೆ ಒಳಗಾಗಿದೆ. ಈ ಹಣಕಾಸು ವರ್ಷದಲ್ಲಿ 18 ಹೊಸ ಗ್ರಾಮ ಪಂಚಾಯಿತಿಗಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿವೆ ಎಂದರು.
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ವಿಶೇಷವಾಗಿ ಬಯಲುಸೀಮೆ ಭಾಗದಲ್ಲಿ ಬಿತ್ತನೆ ಕುಂಠಿತಗೊಂಡಿದೆ. ಈ ವರ್ಷ ಈ ದಿನದವರೆಗೂ ಶೇ 25.7 ರಷ್ಟು ಮಾತ್ರ ಬಿತ್ತನೆ ಪೂರ್ಣಗೊಂಡಿದ್ದರೆ, ಕಳೆದ ವರ್ಷ ಈ ಪ್ರಮಾಣ ಶೇ 36ರಷ್ಟಿತ್ತು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ













Click it and Unblock the Notifications