ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಅರ್ಧಶತಕ ದಾಟಿದ ಕೊರೊನಾ ಕೇಸ್; ಆತಂಕ ಹೊರಹಾಕಿದ ಸಚಿವ

|
Google Oneindia Kannada News

ಬೆಂಗಳೂರು, ಮಾರ್ಚ್ 26; ಕಳೆದ ಮೂರು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಹರಡುವ ವೇಗ ಹೆಚ್ಚಾಗಿದೆ. ಈಗ ನಮಗೂ ಆತಂಕ ಶುರುವಾಗಿದೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿಕೆ ಆತಂಕ ಮೂಡಿಸಿದೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ವರ್ಷದ ಒಳಗಿನ ಮಕ್ಕಳು ಹಾಗೂ 60 ದಾಟಿದವರಲ್ಲಿ ಹೆಚ್ಚಿನ ಸೋಂಕು ಕಾಣುತ್ತಿದೆ. 60 ವರ್ಷ ಮೇಲ್ಪಟ್ಟ ಹಿರಿಯರು ಮನೆಯಿಂದ ಹೊರ ಬಾರದಂತೆ ನೋಡಿಕೊಳ್ಳಬೇಕಿದೆ. ಸೋಂಕಿನ ಪ್ರಮಾಣ ಇಂದು ಸಂಜೆಗೆ ಎಷ್ಟಾಗುತ್ತೋ ಎಂದು ಆತಂಕ ಹೊರ ಹಾಕಿದರು.

ರಾಜ್ಯದಲ್ಲಿ‌ ಕೊರೊನಾ ಸೊಂಕಿತರ ಸಂಖ್ಯೆ 52 ಕ್ಕೆ ಏರಿದೆ. ಇಬ್ಬರು ಮೃತರಾಗಿದ್ದಾರೆ. ಗೌರಿಬಿದನೂರಿನಲ್ಲಿ ಒಂದು ಸಾವು ಆಗಿದೆ, ಅದನ್ನ ನಾವು ಕೋವಿಡ್-19, ಅಂತಾನೇ ಭಾವಿಸಿದ್ದೇವೆ. ಅಂತಿಮ ರಿಪೋರ್ಟ್ ಬಾರದಿದ್ದರು ಕೆಲವು ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಅಂತ್ಯಕ್ರಿಯೆ ಮಾಡಲಾಗಿದೆ.

We Are Panic About Covid19 In Karnataka Said Minister K Sudhakar

ಕೊರೊನಾ ಹರಡುತ್ತಿರುವುದನ್ನು ನೋಡಿ ಇಟಲಿ ಸರ್ಕಾರ ಕೈ ಚೆಲ್ಲಿ ಕುಳಿತಿದೆ. ರಾಜ್ಯದಲ್ಲೂ ಏರಿಕೆಯಾಗುತ್ತಿದೆ. 1.25 ಲಕ್ಷದಷ್ಟು ಅಂತರರಾಷ್ಟ್ರೀಯ ವ್ಯಕ್ತಿಗಳನ್ನ ಕ್ವಾರಂಟೈನ್ ಮಾಡ್ತಿದ್ದೇವೆ. ಪತ್ತೆ, ಪರೀಕ್ಷೆ ಮತ್ತು ಚಿಕಿತ್ಸೆ ರೂಪದಲ್ಲಿ ಕಾರ್ಯ ಆರಂಭಿಸಿದ್ದೇವೆ ಎಂದರು.

English summary
We Are Panic About Covid19 In Karnataka Said Minister K Sudhakar At Press Conference In Bengaluru On Thursday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X