DK Shivakumar : ಬಡವರ ಜೇಬಿಗೆ 1 ಲಕ್ಷ ಕೋಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು, ಆಗಸ್ಟ್‌ 20: ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಎರಡು ವರ್ಷವಾಗಿದೆ. ನೀವು ಇದರ ಬಗ್ಗೆ ಜನರಿಗೆ ನೆನಪಿಸುತ್ತಿರಬೇಕು. ನಾವು ಈ ಯೋಜನೆ ಜಾರಿ ಮಾಡಿ ನಿಮ್ಮ ಕೈಗೆ ಅಸ್ತ್ರ ನೀಡಿದ್ದೇವೆ. ನೀವು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ರೈತರ ಉಚಿತ ವಿದ್ಯುತ್ ಗೆ 20 ಸಾವಿರ ಕೋಟಿ, ವಿವಿಧ ಪಿಂಚಣಿ ಯೋಜನೆಗೆ 10 ಸಾವಿರ ಕೋಟಿ, ಪಂಚ ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ, ಸಮಾಜ ಕಲ್ಯಾಣ ಯೋಜನೆಗಳಿಗೆ ಸೇರಿ 1 ಲಕ್ಷ ಕೋಟಿಯಷ್ಟು ಹಣವನ್ನು ನಮ್ಮ ಸರ್ಕಾರ ಬಡವರ ಜೇಬಿಗೆ ಹಾಕುತ್ತಿದೆ.

We Are Putting 1 Lakh Crores In The Pockets Of The Poor Through Congress schemes DK Shivakumar

ಈ 1 ಲಕ್ಷ ಕೋಟಿ ಹಣದಲ್ಲಿ ಬಿಜೆಪಿ ಅಥವಾ ದಳದವರ ಒಂದು ಕಾರ್ಯಕ್ರಮ ಇದೆಯೇ? ನಾನು ಶಾಸಕನಾಗಿದ್ದಾಗ ಜೆ.ಹೆಚ್ ಪಟೇಲರ ಕಾಲದಲ್ಲಿ ಪಂಚಾಯ್ತಿಗಳಿಗೆ 1 ಲಕ್ಷ ಅನುದಾನ ನೀಡಲಾಗುತ್ತಿತ್ತು. ಕೃಷ್ಣ ಅವರ ಕಾಲದಲ್ಲಿ ಅದನ್ನು 5 ಲಕ್ಷಕ್ಕೆ ಏರಿಕೆ ಮಾಡಿದೆವು. 27 ಇಲಾಖೆಯನ್ನು ಪಂಚಾಯ್ತಿಗೆ ಸೇರಿಸಿದೆವು. ಪಂಚಾಯ್ತಿಗೆ ಈ ರೀತಿ ಶಕ್ತಿ ತುಂಬಿದ್ದು ಕಾಂಗ್ರೆಸ್ ಪಕ್ಷ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಹೇಳಿದರು.

ಜೆಡಿಎಸ್ ವಿಚಾರಕ್ಕೆ ಬಂದರೆ, ದೊಡ್ಡ ಗೌಡರು, ಅವರ ಮಕ್ಕಳು, ಮೊಮ್ಮಕ್ಕಳು ಯಾವ ತ್ಯಾಗ ಮಾಡಿದ್ದಾರೆ? ಇನ್ನು ಬಿಜೆಪಿ ವಿಚಾರಕ್ಕೆ ಬಂದರೆ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಏನು? ಅಧಿಕಾರಕ್ಕೆ ಬಂದ ನಂತರ ಬಡವರಿಗೆ ಹೊಟ್ಟೆ ತುಂಬಿಸಿದ್ದಾರಾ? ಜಮೀನು ಕೊಟ್ಟಿದ್ದಾರಾ? ರೈತರಿಗೆ ಮೊದಲು ಉಚಿತ ವಿದ್ಯುತ್ ಕೊಟ್ಟಿದ್ದು ಬಂಗಾರಪ್ಪ, ನಾನು ಸಚಿವನಾದ ಸಚಿವನಾದಾಗ 6 ತಾಸು ಇದ್ದ ವಿದ್ಯುತ್ ಅನ್ನು 7 ತಾಸಿಗೆ ಏರಿಸಿದೆ. ಮೊದಲು ಪ್ರತಿ ವರ್ಷ ಇದಕ್ಕಾಗಿ 800 ಕೋಟಿ ನೀಡುತ್ತಿದ್ದೆವು. ಈಗ 20 ಸಾವಿರ ಕೋಟಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇಂದು ಯುವಕರಿಗೆ ಬಹಳ ಸ್ಫೂರ್ತಿಯಾದಂತಹ ದಿನ. ಇತ್ತೀಚೆಗೆ ನಮ್ಮ ಯುವ ಮುಖಂಡ ಬಿ.ವಿ ಶ್ರೀನಿವಾಸ್ ಅವರು ರನ್ ಫಾರ್ ರಾಜೀವ್ ಎಂಬ ಮ್ಯಾರಥಾನ್ ಆಯೋಜಿಸಿದ್ದರು. ಸುಮಾರು 15 ಸಾವಿರ ಜನ ಬೆಳಗ್ಗೆ 5.30ಕ್ಕೆ ಬಂದು ಸೇರಿದ್ದರು. ಇಲ್ಲಿ ಅನೇಕ ಜನಸಾಮಾನ್ಯರು ಭಾಗವಹಿಸಿದ್ದರು. ರಾಜೀವ್ ಗಾಂಧಿ ಅವರ ಕೊಡುಗೆಯನ್ನು ನಮ್ಮ ಜನ ಇಂದಿಗೂ ಸ್ಮರಿಸುತ್ತಿದ್ದಾರೆ. ನಾನು ವಿದ್ಯಾರ್ಥಿಯಾಗಿದ್ದಾಗ ನಾನು ಜೆನರಲ್ ಹಾಸ್ಟೆಲ್ ನಲ್ಲಿದ್ದೆ. ನಮ್ಮ ಊರಿನಲ್ಲಿ ಆಗ ದೂರವಾಣಿ ಸಂಪರ್ಕ ಇರಲಿಲ್ಲ. ಅದನ್ನು ಪಡೆಯಬೇಕಾದರೆ ಮೂರರಿಂದ ನಾಲ್ಕು ವರ್ಷ ಬೇಕಾಗುತ್ತದೆ. ಆದರೆ ಇಂದು ಪ್ರತಿಯೊಬ್ಬರು ಎರಡು ಮೂರು ಫೋನ್ ಇಟ್ಟುಕೊಂಡಿದ್ದಾರೆ. ಈ ದೇಶಕ್ಕೆ ಕಂಪ್ಯೂಟರ್ ಹಾಗೂ ದೂರವಾಣಿ ತಂತ್ರಜ್ಞಾನದ ಕ್ರಾಂತಿ ತಂದವರು ರಾಜೀವ್ ಗಾಂಧಿ ಎಂದು ತಿಳಿಸಿದರು.

ಸಂವಿಧಾನಕ್ಕೆ 74ನೇ ತಿದ್ದುಪಡಿ ತಂದು ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೂ ನಾಯಕರುವಂತೆ ನೋಡಿಕೊಂಡರು. ನಿನ್ನೆ ಸದನದಲ್ಲಿ ಬಿಜೆಪಿ ನಾಯಕರು 74ನೇ ತಿದ್ದುಪಡಿಗೆ ಧಕ್ಕೆಯಾಗುತ್ತದೆ ಎಂದು ಕುಣಿಯುತ್ತಿದ್ದರು. ನಾನು ಈ 74ನೇ ತಿದ್ದುಪಡಿಗೆ ಧಕ್ಕೆಯಾಗದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೊಳಿಸಿ ಐದು ಪಾಲಿಕೆ ರಚಿಸುತ್ತಿದ್ದೇವೆ. ನಾನು ಕೂಡ ಜಿಲ್ಲಾ ಪಂಚಾಯ್ತಿ ಸದಸ್ಯನಾಗಿ ಇಲ್ಲಿಯವರೆಗು ಬಂದಿದ್ದೇನೆ. ಸೆ.2ರವೆಳೆಗೆ ಹೊಸ ಪಾಲಿಕೆ ನಾಮಫಲಕ ಅಳವಡಿಸಲಾಗುವುದು. ನಂತರ ಕ್ಷೇತ್ರ ಮರುವಿಂಗಡಣೆ ಮಾಡಿ, ಮತದಾರರ ಪಟ್ಟಿ ಸಿದ್ಧಗೊಳಿಸಲು ಅವಕಾಶ ನೀಡಲಾಗಿದೆ. ಈ ಪ್ರಕ್ರಿಯೆ ಮುಗಿದ ನಂತರ ಪಾಲಿಕೆ ಚುನಾವಣೆ ನಡೆಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+