'ರಾಮ ಮಂದಿರ ಪ್ರಾರಂಭ ಮಾಡಿದವರೇ ನಾವು ರೀ' : ಸಚಿವರು ಹೇಳಿದ್ದೇನು?
ಹುಬ್ಬಳ್ಳಿ, ಜನವರಿ 06: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾರಂಭ ಮಾಡಿದವರೇ ನಾವೇ. ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲ ಹಾಕಿದವರೇ ನಮ್ಮ ನಾಯಕರಾದ ರಾಜೀವ ಗಾಂಧಿ ಅಡಿಗಲ್ಲು ಹಾಕಿದವರು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಈ ಕುರಿತು ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಾವು ಕೂಡ ರಾಮ ಭಕ್ತರಿದ್ದೇವೆ ಅವರ ಅಷ್ಟೇ ಅಲ್ಲಾ ಎನ್ನುವ ಮೂಲಕ ಭಾರತೀಯ ಜನತಾ ವಿರುದ್ಧ ವಾಗ್ದಾಳಿ ನಡೆಸಿದರು.

ಶ್ರೀಕಾಂತ ಪೂಜಾರಿ ಬಂಧನ ಎಂಪಿ ಚುನಾವಣೆ ಬಿಜೆಪಿ ಅಜೆಂಡ ವಿಚಾರವಾಗಿ ಮಾತನಾಡಿ, ಬಿಜೆಪಿ ಅವರಿಗೆ ಅಂತಹದ್ದನ್ನ ಬಿಟ್ರೆ ಏನು ಅಜೆಂಡ ಮಾಡ್ಕೋತಾರೆ? 36 ಜನರಲ್ಲಿ ಇವರೋಬ್ರೇನಾ ಹಿಂದು ಇರೋದು. ಇನ್ನು 20 ಕೇಸ್ ಗಳಿವೆ ಕಾನೂನು ರೀತಿಯಾಗಿ ಕ್ರಮ ಕೈಗೊಳ್ಳಬೇಕು. ಅವಾಗ ಆಗಿರುವ ಘಟನೆಗೆ ಪ್ರಕರಣ ಇರ್ತಾವೆ. ಅವರಿಗೂ ಕೂಡ ಈ ಪ್ರಶ್ನೆ ಕೇಳಿ ನೀವು, ರಾಮ ಮಂದಿರ ಪ್ರಾರಂಭ ಮಾಡಿದವರೇ ನಾವು ರೀ. ಕಳೆದ 40 ವರ್ಷದಿಂದ ಇಟ್ಟಂಗಿ ಕೊಟ್ಟವಲ್ಲ ಎಲ್ಲಿವೆ? ಎಂದು ಪ್ರಶ್ನಿಸಿದರು.
ನಾವು ಕೂಡ ರಾಮ ಭಕ್ತರಿದ್ದೇವೆ. ಎಲ್ಲರಿಗೂ ಸಮ ಬಾಳು, ಎಲ್ಲರಿಗೂ ಸಮ ಪಾಲು ಅಂತಾ ಬದುಕ್ತಾ ಇದ್ದಿವಿ, ಅವರು ಹಿಂದುಗಳ ಬಗ್ಗೆ ಮಾತನಾಡ್ತಾರೆ. ಕಳೆದ 10 ವರ್ಷದಿಂದ ಹಿಂದುಗಳಿಗೆ ಏನು ಅನುಕೂಲ ಆಗಿದೆ. ನಾನು ಹಿಂದು, ನೀವು ಕೂಡ ಹಿಂದು ತಾನೇ ನಿಮಗೆ ಏನು ಅನುಕೂಲ ಆಗಿದೆ, ಬಿಜೆಪಿ ಪಕ್ಷದವರಿಗೆ, ಕೆಲವು ಉದ್ಯಮಿದಾರರಿಗೆ ಅನುಕೂಲ ಆಗಿದೆ. ಅದನ್ನು ಬಿಟ್ರೆ ಯಾರಿಗೂ ಅನುಕೂಲ ಆಗಿಲ್ಲ. ಹಿಂದು ರಾಷ್ಟ್ರ ಮಾಡ್ತೇವೆ ಅಂತಾರಲ್ಲ, ಯಾವ ಹಿಂದುಗಳಿಗೆ ಅನುಕೂಲ ಆಗಿದೆ ಹೇಳಿ ಎಂದು ಸಚಿವ ಸಂತೋಷ್ ಲಾಡ್ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
-
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ












Click it and Unblock the Notifications