ಟಿಪ್ಪು ಜಯಂತಿ ಆಚರಣೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು, ನವೆಂಬರ್ 02: ಕಾಂಗ್ರೆಸ್ ಸರ್ಕಾರದಲ್ಲಿ ಆರಂಭಗೊಂಡು ಭಾರಿ ವಿವಾದ ಸೃಷ್ಠಿಸಿದ್ದ ಟಿಪ್ಪು ಜಯಂತಿಯನ್ನು ಕುಮಾರಸ್ವಾಮಿ ಸರ್ಕಾರ ಕೈಬಿಡುವುದಿಲ್ಲವಂತೆ ಹಾಗೆಂದು ಮುಖ್ಯಮಂತ್ರಿ ಅವರೇ ಸ್ಪಷ್ಟಪಡಿಸಿದ್ದಾರೆ.
ಟಿಪ್ಪು ಜಯಂತಿ : ಸರ್ಕಾರಕ್ಕೆ 1 ಸಾವಿರ ರೂ. ದಂಡ ಹಾಕಿದ ಹೈಕೋರ್ಟ್!
ಹಿಂದಿನ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಯೋಜನೆಗಳು, ಕಾರ್ಯಕ್ರಮಗಳು ಮುಂದುವರೆಸಲು ಬದ್ಧನಾಗಿದ್ದೇನೆ ಅದರಂತೆ ಟಿಪ್ಪು ಜಯಂತಿ ಸಹ ಮುಂದುವರೆಯಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟ... ಕವಿತೆಯ ಸಾರ ಬಿಜೆಪಿಯ ಮುಖಂಡರಿಗೆ ತಿಳಿದಂತಿಲ್ಲ ಎಂದು ಹೇಳಿದ ಸಿಎಂ, ಟಿಪ್ಪು ಜಯಂತಿ ಆಚರಣೆ ಮಾಡದಂತೆ ಸಂಘ ಪರಿವಾರದ ಮುಖಂಡರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಆದರೆ ನಾವು ಅದನ್ನು ಕೈಬಿಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.
ಟಿಪ್ಪು ಸುಲ್ತಾನ ಜಯಂತಿ ಮುಂದುವರೆಸಲು ಮುಸ್ಲಿಂ ಲೀಗ್ ಒತ್ತಾಯ
ಟಿಪ್ಪು ಜಯಂತಿಯು ನವೆಂಬರ್ 9 ರಂದು ಇದ್ದು, ಅಂದು ಎಲ್ಲ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವತಿಯಿಂದಲೇ ಟಿಪ್ಪು ಜಯಂತಿ ಆಚರಣೆಗೊಳ್ಳಲಿದೆ.
ಟಿಪ್ಪು ಜಯಂತಿ ಗಲಭೆ : ವರ್ತಿಕಾ ಕಟಿಯಾರ್ ಆರೋಪ ಮುಕ್ತ
ಟಿಪ್ಪು ಜಯಂತಿ ಆಚರಣೆ ಪ್ರತಿ ವರ್ಷವೂ ವಿವಾದ ಸೃಷ್ಟಿಸುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಟಿಪ್ಪು ಜಯಂತಿಗೆ ಭಾರಿ ವಿರೋಧ ವ್ಯಕ್ತವಾಗುತ್ತಾ ಬಂದಿದೆ. ಬಿಜೆಪಿ ಮುಖಂಡರು ಸಹ ಟಿಪ್ಪು ಜಯಂತಿಗೆ ಭಾರಿ ವಿರೋಧ ವ್ಯಕ್ತವಾಗಿದೆ.