ಬಿಎಸ್ವೈ ವಿಶ್ವಾಸಮತಕ್ಕೂ ಮುನ್ನ ಇದೇನು ಶೋಭಾ ಕರಂದ್ಲಾಜೆ ಹೇಳಿಕೆ
Recommended Video
ಬೆಂಗಳೂರು, ಜುಲೈ 27: ಆಷಾಢ ಕೊನೆಯ ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಯಡಿಯೂರಪ್ಪ, ಸೋಮವಾರ, ಜುಲೈ 29ರಂದು ಬಹುಮತ ಸಾಬೀತು ಪಡಿಸುವುದಾಗಿ ಹೇಳಿದ್ದಾರೆ.
ಈ ನಡುವೆ, ಜೆಡಿಎಸ್ ಪಕ್ಷದ ಕೆಲವು ಶಾಸಕರು, ಬಿಜೆಪಿಗೆ ಬಾಹ್ಯ ಬೆಂಬಲ ನೀಡೋಣ ಎಂದು ಒತ್ತಾಯಿಸಿದ್ದಾರೆ ಎನ್ನುವ ಸುದ್ದಿಯ ನಡುವೆ, ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
' ನಮ್ಮ ಪಕ್ಷ ಸುಲಭವಾಗಿ ಬಹುಮತ ಸಾಬೀತು ಪಡಿಸಲಿದೆ. ಸ್ವತಂತ್ರವಾಗಿ ಅಧಿಕಾರ ರಚಿಸುವುದು ನಮ್ಮ ಆದ್ಯತೆ. ನಮಗೆ ಜೆಡಿಎಸ್ ಬಾಹ್ಯ ಬೆಂಬಲ ಬೇಕಾಗಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ' ಎಂದು ಶೋಭಾ ಹೇಳಿದ್ದಾರೆ.

'ಅತೃಪ್ತ ಶಾಸಕರ ರಾಜೀನಾಮೆ ಆಂಗೀಕಾರವಾದರೆ, ಅವರನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಯಾವ ಸಮಯದಲ್ಲೂ ಚುನಾವಣೆ ನಡೆದರೆ, ಜನತೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎನ್ನುವ ವಿಶ್ವಾಸ ನಮಗಿದೆ' ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಬೇಕೆಂದು ಕೆಲವು ಶಾಸಕರು ಹೇಳಿದ್ದರೆ ಇನ್ನು ಕೆಲವರು ಬಾಹ್ಯ ಬೆಂಬಲವನ್ನು ನೀಡಿ ಸರ್ಕಾರ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳೋಣ ಎನ್ನುವ ಸಲಹೆಯನ್ನು ನೀಡಿದ್ದಾರೆ ಎನ್ನುವ ವಿಚಾರದಲ್ಲಿ ಶೋಭಾ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್ ಶಾಸಕಾಂಗ ಸಭೆಯ ನಂತರ, ಕೆಲವು ಶಾಸಕರು ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡೋಣ ಎಂದು, ಇನ್ನು ಕೆಲವರು ವಿರೋಧ ಪಕ್ಷದಲ್ಲಿ ಕೂತು, ಪಕ್ಷವನ್ನು ಗಟ್ಟಿಗೊಳಿಸಿಕೊಳ್ಳೋಣ ಎಂದು ಸಲಹೆ ನೀಡಿದ್ದಾರೆ.
ನಿರ್ಧಾರವು ಕುಮಾರಸ್ವಾಮಿ ಹಾಗೂ ದೇವೇಗೌಡ ಅವರಿಗೆ ಬಿಟ್ಟಿದ್ದಾಗಿದ್ದು, ಈ ಇಬ್ಬರೂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂದು ಕಾದು ನೋಡಬೇಕಿದೆ ಎಂದು ಜಿ ಟಿ ದೇವೇಗೌಡ್ರು ಹೇಳಿಕೆಯನ್ನು ನೀಡಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications