ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ ಹತ್ಯೆಗೂ ನಮಗೂ ಸಂಬಂಧವಿಲ್ಲ: ಸನಾತನ ಸಂಸ್ಥೆ

By Manjunatha
|
Google Oneindia Kannada News

ನವ ದೆಹಲಿ, ಜೂನ್ 05: ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬರುವ ಹೊತ್ತಿಗೆ ಪತ್ರಿಕಾ ಪ್ರಕಟಣೆ ನೀಡಿರುವ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯು ಗೌರಿ ಹತ್ಯೆಗೂ ನಮಗೂ ಸಂಬಂಧವಿಲ್ಲ ಎಂದಿದೆ.

ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯು ಜಂಟಿಯಾಗಿ ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 'ಬೇಕೆಂದೇ ನಮ್ಮ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಲಾಗಿದ್ದು, ಅಮಾಯಕರಿಗೆ ಕಿರುಕುಳ ನೀಡಲಾಗುತ್ತಿದೆ' ಎಂದು ಪ್ರಕಟಣೆಯಲ್ಲಿ ಹೇಳಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ: ಎಸ್‌ಐಟಿಯಿಂದ 650 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ: ಎಸ್‌ಐಟಿಯಿಂದ 650 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಸನಾತನ ಸಂಸ್ಥೆಯ ಕಾರ್ಯಕರ್ತರು ಎನ್ನಲಾಗುತ್ತಿದ್ದು ಹಾಗಾಗಿ ಸನಾತನ ಸಂಸ್ಥೆಯು ಈ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

We have been soft target in Gauri Lankesh case: Sanatan Sanstha

ತಮ್ಮ ಸಂಘಟನೆಯನ್ನು ಬೇಕೆಂದೇ ಗುರಿ ಮಾಡಲಾಗಿದೆ ಎಂದು ಆರೋಪಿಸಿರುವ ಸನಾತನ ಸಂಸ್ಥೆ, ''ಜಾತ್ಯಾತೀತ' ಹೆಸರಿನಲ್ಲಿ ಹಿಂದೂ ಸಂಘಟನೆಗಳನ್ನು ಮುಗಿಸಲು ಹೂಡಿರುವ ಹುನ್ನಾರ' ಎಂದು ಅದು ಆರೋಪಿಸಿದೆ.

ಗೌರಿ ಹತ್ಯೆ ಚಾರ್ಜ್ ಶೀಟ್, ಭಗವಾನ್ ಹತ್ಯೆ ಸಂಚು ಹಾಗೂ ಬಂಧನ ಸುತ್ತ...ಗೌರಿ ಹತ್ಯೆ ಚಾರ್ಜ್ ಶೀಟ್, ಭಗವಾನ್ ಹತ್ಯೆ ಸಂಚು ಹಾಗೂ ಬಂಧನ ಸುತ್ತ...

ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5 ರಂದು ಅವರ ಮನೆಯ ಎದುರೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮೊದಲಿಗೆ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಎಂಬಾತನನ್ನು ಬಂಧಿಸಲಾಗಿತ್ತು ಆ ನಂತರ ಇತ್ತೀಚೆಗೆ ಮತ್ತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರು ಸನಾತನ ಸಂಸ್ಥೆಯ ಸದಸ್ಯರು ಎನ್ನಲಾಗಿದೆ.

English summary
Sanatan Sanstha & Hindu Janajagruti Samiti issued a press statement today saying that they have been made soft targets in Gauri Lankesh murder case. It says 'This is a conspiracy to finish devout Hindu orgs & their activists in the name of 'secularism'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X