3-4 ತಲೆಮಾರಿಗೆ ಆಗುವಷ್ಟು ಸಂಪಾದಿಸಿದ್ದೇವೆ , ಈಗ ಋಣ ತೀರಿಸಬೇಕಿದೆ : ರಮೇಶ್ ಕುಮಾರ್
ಬೆಂಗಳೂರು ಜುಲೈ 21: "ಗಾಂಧಿ ಕುಟುಂಬವು ಸುಮಾರು ಏಳು ದಶಕ ಭಾರತವನ್ನು ಆಳಿದೆ. 3-4 ತಲೆಮಾರುಗಳಿಗೆ ಆಗುವಷ್ಟು ಹಣ, ಆಸ್ತಿ ಮಾಡಿಕೊಂಡಿರುವ ನಾವೆಲ್ಲರೂ ಈಗ ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ" ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನು ವಿರೋಧಿಸಿ ಗುರುವಾರ ಬೆಂಗಳೂರಿನಲ್ಲಿ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ರಮೇಶ್ ಕುಮಾರ್ ಮಾತನಾಡಿದರು.
"ಕಾಂಗ್ರೆಸ್ ಸುಮಾರು 70 ವರ್ಷ ದೇಶ ಆಳಿದೆ. ಕಾಂಗ್ರೆಸ್ನವರೇ ಆದ ನಾವೆಲ್ಲರೂ ಮುಂದಿನ ಮೂರ್ನಾಲ್ಕು ತಲೆಮಾರುಗಳಿಗೆ ಆಗುವಷ್ಟು ಆಸ್ತಿ, ಹಣ ಗಳಿಸಿದ್ದೇವೆ. ಅಧಿಕಾರ ಅನುಭವಿಸಿದ್ದೇವೆ. ಇದೀಗ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರತ್ರಿಕೆ ಖರೀದಿ ಅವ್ಯವಹಾರ ಮತ್ತು ಹಣ ವರ್ಗಾವಣೆ ಆರೋಪ ಮೇಲೆ ವಿಚಾರಣೆ ನಡೆಯುತ್ತಿದೆ. ದೇಶ ಉಳಿಯಲು, ಕಾಂಗ್ರೆಸ್ ಉಳಿಸಲು ನಾವೆಲ್ಲರೂ ಒಟ್ಟಾಗಿ ಸೋನಿಯಾ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಬೇಕು" ಎಂದು ಮನವಿ ಮಾಡಿದರು.
"ಗಾಂಧಿ ಕುಟುಂಬದ ಋಣ ತೀರಿಸದೇ ಹೋದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ. ಪಕ್ಷ ಕುಟುಂಬ ಇದ್ದಂತೆ, ಕುಟುಂಬ ಎಂದ ಮೇಲೆ ಸಣ್ಣ ಪುಟ್ಟ ಮನಸ್ತಾಪಗಳೆಲ್ಲವು ಸಹಜ. ಅವೆಲ್ಲವುಗಳನ್ನು ಬದಿಗೊತ್ತಿ ನಾವೆಲ್ಲರು ಒಂದಾಗಬೇಕು. ಸಂಕಷ್ಟದಲ್ಲಿರುವ ಸೋನಿಯಾ ಅವರೊಂದಿಗೆ ನಿಲ್ಲಬೇಕು. ಆಗ ಮಾತ್ರ ನಾವು ತಿನ್ನುವ ಎರಡು ಹೊತ್ತಿನ ಊಟಕ್ಕೆ ಸಾರ್ಥಕ ಬರುತ್ತದೆ" ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.

Recommended Video
ಸೋನಿಯಾ ಗಾಂಧಿಯ ಇಡಿ ವಿಚಾರಣೆ ವಿರೋಧಿಸಿ ಕರ್ನಾಟಕದ ಬೆಂಗಳೂರು, ಕೇರಳ, ದೆಹಲಿ ಸೇರಿದಂತೆ ವಿವಿಧೆಡೆ ಕಾಂಗ್ರೆಸ್ ನಾಯಕರು ಪ್ರತಿಭಟಿಸುತ್ತಿದ್ದಾರೆ. ಕೆಪಿಸಿಸಿ ಕರೆಯ ಮೇರೆಗೆ ಬೆಂಗಳೂರಿನಲ್ಲಿ ನಡೆದ ಪ್ರತಿಬಟನೆಯಲ್ಲಿಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications