BJP President: ಇವರು ಬಿಜೆಪಿ ರಾಜ್ಯಾಧ್ಯಕ್ಷ ಆದ್ರೆ ಯತ್ನಾಳ್ಗೆ ಸಮಸ್ಯೆ ಇಲ್ವಂತೆ! ಯಾರವರು?
ಕಲಬುರಗಿ, ಫೆಬ್ರವರಿ 04: ನಮ್ಮ ಬಣದಿಂದ ಯಾರು ಸ್ಪರ್ದೆ ಮಾಡ್ತಿವಿ ಅನ್ನೋದು ಚರ್ಚೆ ಮಾಡಿ ನಿರ್ಣಯ ತಗೋತಿವಿ. ಶ್ರೀ ರಾಮಲು ರಾಜ್ಯಾಧ್ಯಕ್ಷ ಆದರೆ ನಮ್ಮದೇನೂ ತಕರಾರಿಲ್ಲ. ಅವರೂ ನಮ್ಮ ಮನುಷ್ಯರೇ.. ಅವರಾದ್ರೆ ನಮ್ಮ ಬೆಂಬಲ ಇರುತ್ತದೆ ಎಂದು ಬಿಜೆಪಿ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಈ ಕುರಿತು ಇಂದು(ಮಂಗಳವಾರ) ಕಲಬುರಗಿಯ ಸೇಡಂನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೂ ಸಹ ಇಂದು ದೆಹಲಿಗೆ ಹೋಗುತ್ತಿದ್ದೇನೆ. ಒಬ್ಬರಲ್ಲಾ ನಮ್ಮ ಪಕ್ಣದ ಹಲವಾರು ರಾಷ್ಟ್ರೀಯ ಮುಖಂಡರನ್ನು ಭೇಟಿ ಮಾಡುತ್ತೇವೆ ರಾಜ್ಯಾಧ್ಯಕ್ಷರ ಆಯ್ಕೆ ಸಂಬಂಧ ನಾವು ವರಿಷ್ಠರೊಂದಿಗೆ ಚರ್ಚೆ ನಡೆಸುತ್ತೆವೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ.

ದೆಹಲಿ ಚುನಾವಣೆಯ ಬಹಿರಂಗ ಪ್ರಚಾರ ಮುಗಿದು ಹೋಗಿದೆ. ರಾಜಕೀಯ ಮುಖಂಡರು ಮಕ್ಕಳ ಜೊತೆ ಜಾಲಿ ಮೂಡನಲ್ಲಿದ್ದಾರೆ, ಶರಬತ್ ಕುಡಕೊಂತ ಕೂತಾರೆ, ಹೆಂಡತಿಗೆ ಮುತ್ತು ಕೊಡಕೊಂತ ಕೂತಾರೆ ಅಂತೆಲ್ಲಾ ನೀವೆ ಸುದ್ದಿ ಮಾಡ್ತಿದಿರಲ್ವಾ..? ನಮ್ಮ ನಾಯಕರು ನಮ್ಮ ಭೇಟಿಗೆ ಸಮಯ ಕೊಟ್ಟಿದ್ದಾರೆ. ನಾವು ಭೇಟಿ ಮಾಡುತ್ತೇವೆ ಎನ್ನುವ ಮೂಲಕ ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರೆಯುತ್ತೇನೆ ಎಂದ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಚುನಾವಣೆ ನಡೆದು ಅವರೇ ರಾಜ್ಯಾಧ್ಯಕ್ಷ ಮತ್ತೊಮ್ಮೆ ಆಗಲಿ.. ಬೇಡ ಅಂದವರಾರು.? ಅಲ್ಲಿವರೆಗೂ ನನಗೆ ಓಟ್ ಹಾಕಿ ನನಗೆ ಓಟ್ ಹಾಕಿ ಅಂತ ಕೈ ಮುಗಿದು ಅವರು ಓಡಾಡಬೇಕಲ್ವಾ.? ಕೆಲವರಿಗೆ ಕೈ ಮುಗಿಯೋದಾದ್ರೂ ನಾವು ಕಲಿಸದಂಗೆ ಆಗುತ್ತೆ ಎಂದು ವ್ಯಂಗ್ಯವಾಡಿದ ಅವರು, ನಮ್ಮ ಬಣದಿಂದ ಯಾರು ಸ್ಪರ್ದೆ ಮಾಡ್ತಿವಿ ಅನ್ನೋದು ಚರ್ಚೆ ಮಾಡಿ ನಿರ್ಣಯ ತಗೋತಿವಿ. ಹೈಕಮಾಂಡನ ಜಾತಿ ಲೆಕ್ಕಾಚಾರ ನೋಡಿಕೊಂಡು ಅದೇ ಜಾತಿಯವರನ್ನು ನಾವು ಕಣಕ್ಕೆ ಇಳಿಸುತ್ತೇವೆ.
ಶ್ರೀ ರಾಮಲು ರಾಜ್ಯಾಧ್ಯಕ್ಷ ಆದರೆ ನಮ್ಮದೇನೂ ತಕರಾರಿಲ್ಲ. ಅವರೂ ನಮ್ಮ ಮನುಷ್ಯರೇ.. ಅವರಾದ್ರೆ ನಮ್ಮ ಬೆಂಬಲ ಇದ್ದೆ ಇರುತ್ತದೆ. ರಾಜ್ಯದ ಎಲ್ಲಾ ಸಂಸದರು ನಮ್ಮ ಜೊತೆಗಿದ್ದಾರೆ. ವಿಜಯೇಂದ್ರ ಸಹೋದರ ಒಬ್ಬರನ್ನು ಬಿಟ್ಟು. ಬಸವನಗೌಡ ಪಾಟೀಲ್ ಯತ್ನಾಳ್ ರಾಜ್ಯಾಧ್ಯಕ್ಷ ಆಗಬೇಕು ಅನ್ನೋರೂ ಇದ್ದಾರೆ. ಏನಾಗುತ್ತೋ ನೋಡೋಣ. ನಾನೇನು ಇವತ್ತು ನಿನ್ನೆಯಿಂದ ರಾಜಕೀಯ ಮಾಡುತ್ತಿಲ್ಲ. ನಾನು ಯಡಿಯೂರಪ್ಪ ಸಮಕಾಲಿನವನು. ಒಂದು ವೇಳೆ ವಿಜಯೇಂದ್ರರನ್ನು ಮತ್ತೆ ರಾಜ್ಯಾಧ್ಯಕ್ಷ ಮಾಡಿದ್ರೆ ನಮ್ಮ ನಿರ್ಣಯ ತಿಳಿಸುತ್ತೇವೆ. ನಮ್ಮ ಹೋರಾಟವಂತೂ ಮುಂದುವರೆಯುತ್ತೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಅಸಮಾಧಾನವನ್ನು ವ್ಯಕ್ತಪಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications