ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಬಿಜೆಪಿ ಜೊತೆಗೆ ಕೆಲಸ ಮಾಡಬೇಕಾಗಿದೆ: ಸ್ಪೋಟಕ ಹೇಳಿಕೆ ನೀಡಿದ ಹೆಚ್‌ ಡಿ ಕುಮಾರಸ್ವಾಮಿ

ರಾಮನಗರ, ಡಿಸೆಂಬರ್‌ 02: ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನೇತೃತ್ವದ ಸರಕಾರವನ್ನು ಕೆಡವಲು ನಾವು ಬಿಜೆಪಿಗೆ ಸಹಕಾರ ಮಾಡಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಭಾನುವಾಎರ ಬಿಡದಿಯ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು ಮತ್ತು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರುಗಳ ಜತೆ ಸಭೆ ನಡೆಸಿದರು. ಈ ವೇಳೆ ಪಕ್ಷ ಬಲವರ್ಧನೆ ಮತ್ತು ಸಂಘಟನೆಯ ದೃಷ್ಟಿಯಿಂದ ರಾಜ್ಯಾದ್ಯಂತ ಮತ್ತೆ ಸದಸ್ಯತ್ವ ನೊಂದಣಿ ಪುನಾರಂಭವಾಗಬೇಕು ಎಂದು ಸಚಿವರು ಪಕ್ಷದ ಮುಖಂಡರುಗಳಿಗೆ ಸೂಚನೆ ನೀಡಿದರು.ಇದೇ ವೇಳೆ ಉಪಚುನಾವಣೆಯಲ್ಲಿ ತ್ಯಾಗಮಯವಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೂ ಶ್ಲಾಘನೆ ವ್ಯಕ್ತಪಡಿಸಿದರು.

We Must Work With BJP to Remove the Congress Government HD Kumaraswamy

ನೀವು ಪಟ್ಟ ಶ್ರಮದಿಂದ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಇದು ಮುಂದಿನ ಸವಾಲುಗಳಿಗೆ ತಯಾರಾಗಲು ಸೂಚನೆ ಎಂದರು. ಪ್ರತಿ ಬೂತ್‌ಗಳಲ್ಲಿ ಸದಸ್ಯತ್ವ ನೊಂದಣಿ ಚಾಲನೆ ಆಗಬೇಕು. ಇನ್ನು ಕೆಲವು ಜಿಲ್ಲೆಗಳಲ್ಲಿ ಸದಸ್ಯತ್ವ ಚಾಲನೆ ನಿಂತಿದೆ ಅದನ್ನು ಮತ್ತೆ ಆರಂಭಿಸಬೇಕು.ಉಪಚುನಾವಣೆ ಫಲಿತಾಂಶಗಳು ಪಕ್ಷದ ಭವಿಷ್ಯವನ್ನ ತೀರ್ಮಾನಿಸುವುದಿಲ್ಲ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ತಿಳಿಸಿದರು.

2018ರಲ್ಲಿ 2013ರಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ 75 ಸ್ಥಾನಗಳಿಗೆ ಕುಸಿಯಿತು. ಸಾಮಾನ್ಯ ಚುನಾವಣೆಯ ಚಿತ್ರವೇ ಬೇರೆ, ಸ್ವತಃ ಅವರ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.ಈ ಸರ್ಕಾರವನ್ನು ಕೆಡವಲು ನಾವು ಬಿಜೆಪಿಯೊಂದಿಗೆ ಸಹಕಾರ ಮಾಡಬೇಕಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ. ದೇವೇಗೌಡರು ಮುಖ್ಯಮಂತ್ರಿ ಆದರು, ನಂತರ ಪ್ರಧಾನಿ ಆದರು. ಈಗ 2023ರ ಚುನಾವಣೆಯಲ್ಲಿ ಕೇವಲ 18 ಸ್ಥಾನಗಳನ್ನು ಗೆದ್ದಿದ್ದರೂ ನಾನು ಕೇಂದ್ರ ಸಚಿವನಾಗಿದ್ದೇನೆ. ಪ್ರಧಾನಮಂತ್ರಿ ಮೋದಿ ಹೆಮ್ಮೆ ಪಡುವಂತೆ ಕೆಲಸ ಮಾಡಬೇಕು ಎಂದು ಅವರು ನನಗೆ ಮಾರ್ಗದರ್ಶನ ನೀಡಿದರು. ನಾನು ಆ ಜವಾಬ್ದಾರಿಯನ್ನು ಪರಿಶ್ರಮದಿಂದ ಪೂರೈಸುತ್ತಿದ್ದೇನೆ ಎಂದು ಹೇಳಿದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷನಾದ ನಿಖಿಲ್ ಕುಮಾರಸ್ವಾಮಿ ಕುರಿತು ಅವರು ವಿಶ್ವಾಸ ವ್ಯಕ್ತಪಡಿಸಿದರು. ನಿಖಿಲ್ ನನ್ನ ಮಗನಾಗಿರುವುದರಿಂದ ನಾನು ಮಾತನಾಡುತ್ತಿಲ್ಲ. ಅವರಿಗಿರುವ ಗುಣದ ಬಗ್ಗೆ ಮಾತಾಡುತ್ತೇನೆ. ಇಂದು ನಾನು ಅವರನ್ನು ಪಕ್ಷಕ್ಕೆ ಒಪ್ಪಿಸುತ್ತಿದ್ದೇನೆ. ಅವನನ್ನು ಮಾರ್ಗದರ್ಶನ ಮಾಡುವ ಜವಾಬ್ದಾರಿ ನಿಮಗೆ ಇದೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ಪಕ್ಷದ ಏಕತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು. ಪಕ್ಷದ ಅಸಮಾಧಾನಗಳಿದ್ದರೆ, ಅವನ್ನು ಬಗೆಹರಿಸಿಕೊಳ್ಳಿ. ಆದರೆ, ನಾವು ಏಕತೆಗೊಳಿಸಿದ ಮುಖವನ್ನೇ ಪ್ರದರ್ಶಿಸಿದ್ದೇವೆ ಎಂದು ನಂಬಿದ್ದೇನೆ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಗೆಲ್ಲುವ ದೃಷ್ಟಿಯಿಂದ ಮುಖ್ಯ ಎಂದು ತಿಳಿಸಿದರು.

ನಮ್ಮ ಪಕ್ಷವು ಕಾರ್ಯಕರ್ತರಿಗೋಸ್ಕರ ಇರುವ ಪಕ್ಷ. ಜಾತಿ ರಾಜಕಾರಣದಲ್ಲಿ ನಮಗೆ ನಂಬಿಕೆ ಇಲ್ಲ. ಎಲ್ಲ ಸಮುದಾಯಗಳನ್ನು ನಮ್ಮೊಂದಿಗೆ ಕೊಂಡೊಯ್ಯಲು ಬದ್ಧರಾಗಿದ್ದೇವೆ. ನಾವು ಒಗ್ಗಟ್ಟಿನಿಂದ ಇದ್ದರೆ, ನಮ್ಮ ಪಕ್ಷವನ್ನು ಯಾವುದೇ ಶಕ್ತಿಗಳು ಅಂತ್ಯಗೊಳಿಸಲಾರವು ಎಂದು ಹೆಚ್‌ ಡಿ ಕುಮಾರಸ್ವಾಮಿ ಖಚಿ ತಪಡಿಸಿದರು.

ಈ ಸಭೆಯಲ್ಲಿ ಬಂಡೆಪ್ಪ ಖಾಶೆಂಪುರ್, ಹೆಚ್‌.ಕೆ ಕುಮಾರಸ್ವಾಮಿ, ಸಾ. ರಾ ಮಹೇಶ್, ಸುರೇಶ ಬಾಬು, ಸಿಎಸ್ ಪುಟ್ಟರಾಜು, ಸಮೃದ್ಧಿ ಮಂಜುನಾಥ, ನಿಖಿಲ್ ಕುಮಾರಸ್ವಾಮಿ, ಬಾಲಕೃಷ್ಣ,,ಶಾರದಾ ಪೂರ್ಯ ನಾಯಕ್, ಲೀಲಾ ದೇವಿ ಪ್ರಸಾದ್, ಎಂಟಿ ಕೃಷ್ಣಪ್ಪ, ಜಿ.ಟಿ ಹರೀಶ್ ಗೌಡ, ಮಂಜೇಗೌಡ, ರಮೇಶ್ ಗೌಡ, ತಿಪ್ಪೇಸ್ವಾಮಿ ಮತ್ತು ನಾಗರಾಜಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+