ಪರಭಾಷೆ ಮಾತನಾಡುವವರಿಗೆ ಕನ್ನಡ ಕಲಿಸಿ: ಪಿ.ಸಿ.ಮೋಹನ್
ಬೆಂಗಳೂರು, ನವೆಂಬರ್ 01: ಹೊರರಾಜ್ಯ, ಹೊರದೇಶಗಳಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷೆ ಮಾತನಾಡುವವರಿಗೆ ನಾವು ಕನ್ನಡ ಕಲಿಸಬೇಕು ಎಂದು ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ಹೇಳಿದ್ದಾರೆ.
ಬುಧವಾರ ಬೆಂಗಳೂರಿನಗ ಬಿಜೆಪಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ"ದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದ ಅವರು, ದಿನದಿನವೂ ನಾವು ಕನ್ನಡದ ಒಂದಷ್ಟು ಪದಗಳನ್ನು ಕಳಕೊಳ್ಳುವ ಪರಿಸ್ಥಿತಿ ಇದೆ. ಬೆಂಗಳೂರಿನ ಕನ್ನಡಿಗರು ವಿಶಾಲ ಹೃದಯಿಗಳು. ಯಾರಾದರೂ ಕನ್ನಡ ಅಲ್ಪಸ್ವಲ್ಪ ಕಲಿತು ಮಾತನಾಡುತ್ತಿದ್ದರೂ ಅವರು ಕನ್ನಡದಲ್ಲಿ ಮಾತನಾಡಲು ಅವಕಾಶ ಕೊಡದೆ ಅವರ ಭಾಷೆಯಲ್ಲೇ ಮಾತನಾಡುತ್ತೇವೆ. ಅದನ್ನು ನಿಲ್ಲಿಸಿ ಕನ್ನಡದಲ್ಲೇ ಮಾತನಾಡಿ ಎಂದು ಮನವಿ ಮಾಡಿದರು.

ಕಳೆದ ವರ್ಷ ಯಥೇಚ್ಛವಾಗಿ ಮಳೆ ಬಂದಿತ್ತು. ಈ ವರ್ಷ ಮಳೆಯ ಕೊರತೆ ಆಗಿದೆ. ಕೊರತೆಯ ಸಂದರ್ಭದಲ್ಲೂ ಕಾವೇರಿ ನದಿಯಲ್ಲಿ ನೀರಿಲ್ಲ. ನೀರಿನ ಪ್ರಮಾಣ ಅರ್ಧಕ್ಕೂ ಕಡಿಮೆಯಾಗಿದೆ. ಈ ನಡುವೆ ಸುಪ್ರೀಂ ಕೋರ್ಟಿನ ಸೂಚನೆಯಂತೆ ನಾವು 2600 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಸರಕಾರ ಕಾವೇರಿ ನೀರು, ಕುಡಿಯುವ ನೀರಿನ ಕಡೆ ಹೆಚ್ಚಿನ ಗಮನ ಕೊಡಬೇಕು ಎಂದು ಅವರು ತಿಳಿಸಿದರು. ನಾಡಿನ ಜನತೆಗೆ 68ನೇ ವರ್ಷದ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ ಅವರು, ಕರ್ನಾಟಕ ಎಂದು ನಾಮಕರಣ ಮಾಡಿ ಇವತ್ತಿಗೆ 50 ವರ್ಷಗಳಾಗಿವೆ. ಇದು ಸಂತಸದ ವಿಚಾರ ಎಂದರು.

ಕರ್ನಾಟಕದ ನೆಲ, ಜಲ, ಭಾಷೆ ವಿಚಾರ ಬಂದಾಗ ನಾವೆಲ್ಲರೂ ಕೂಡ ಹೋಗಿ ಕೇಂದ್ರಕ್ಕೆ ಮನವಿ ಮಾಡುತ್ತೇವೆ. ಬಿಜೆಪಿ ಸಂಸದರು ಈ ಸಂಬಂಧ ಈಗಾಗಲೇ ಪ್ರಲ್ಹಾದ್ ಜೋಷಿಯವರ ಬಳಿ ಮಾತನಾಡಿದ್ದೇವೆ. ಸೂಕ್ತ ಸಮಯದಲ್ಲಿ ಕೇಂದ್ರ ಸರಕಾರದ ಪ್ರಮುಖರನ್ನು ಭೇಟಿ ಮಾಡಲಿದ್ದೇವೆ ಎಂದು ಹೇಳಿದರು.
ಎಂ.ಎಲ್.ಎ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಹೆಗಡೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಜಿ.ಮಂಜುನಾಥ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications