Get Updates
Get notified of breaking news, exclusive insights, and must-see stories!

ಅನರ್ಹ ಹದಿನೇಳು ಶಾಸಕರನ್ನು ದೇವರಂತೆ ನೋಡಿಕೊಳ್ಳಬೇಕಂತೆ !

ಬೆಂಗಳೂರು, ಆ 21: ಯಡಿಯೂರಪ್ಪ ಸರಕಾರದ ಮೊದಲ ಸಂಪುಟ ರಚನೆಯಲ್ಲಿ ಸ್ಥಾನ ಪಡೆಯದ ಬಾಲಚಂದ್ರ ಜಾರಕಿಹೊಳಿ, ಹೊರಗಿನಿಂದ ಬಂದವರಿಗೆ ಮೊದಲು ಮರ್ಯಾದೆ ಕೊಡಬೇಕು ಎನ್ನುವ ಅಭಿಪ್ರಾಯ ಮಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಬಾಲಚಂದ್ರ ಜಾರಕಿಹೊಳಿ, " ಅನರ್ಹಗೊಂಡ ಎಲ್ಲಾ ಹದಿನೇಳು ಶಾಸಕರನ್ನು ದೇವರಂತೆ ನೋಡಿಕೊಳ್ಲಬೇಕು" ಎಂದು ಹೇಳಿದರು.

Recommended Video

      ವಿ. ಎಸ್.‌ ಉಗ್ರಪ್ಪಗೆ ಸ್ಥಾನ-ಮಾನ ನೀಡಿದ ಎಐಸಿಸಿ | Oneindia Kannada

      ಬಿಜೆಪಿ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅರಭಾವಿ ಶಾಸಕ ಬಾಲಚಂದ್ರ, ಆಶ್ಚರ್ಯಕರ ರೀತಿಯಲ್ಲಿ ಸಂಪುಟದಲ್ಲಿ ಸ್ಥಾನ ಪಡೆದಿರಲಿಲ್ಲ.

      We Should Treat Disqualified MLAs Like God, BJP MLA Balachandra Jarkiholi Statement

      " ಅನರ್ಹಗೊಂಡ ಶಾಸಕರ ವಿಚಾರ ನ್ಯಾಯಾಲಯದಲ್ಲಿದೆ, ಅಲ್ಲಿನ ತೀರ್ಪು ಬಂದ ಕೂಡಲೇ ಇವರಿಗೆಲ್ಲಾ ನ್ಯಾಯ ಒದಗಿಸಬೇಕು. ಅವರನ್ನು ಸರಿಯಾಗಿ ನೋಡಿಕೊಂಡರೆ ಸರಕಾರ ಉಳಿಯಬಲ್ಲದು" ಎನ್ನುವ ಎಚ್ಚರಿಕೆ ಮಿಶ್ರಿತ ಮನವಿಯನ್ನು ಬಾಲಚಂದ್ರ ಜಾರಕಿಹೊಳಿ ಮಾಡಿದ್ದಾರೆ.

      "ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡದಿದ್ದರೆ ಸರ್ಕಾರವನ್ನೇ ಕೆಡವುತ್ತೇನೆ" ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತನ್ನದೇ ಸರಕಾರಕ್ಕೆ ನೀಡಿದ್ದ ಎಚ್ಚರಿಕೆ ಭಾರೀ ಚರ್ಚೆಗೆ ಗುರಿಯಾಗಿತ್ತು.

      ಒಂದು ಕುಟುಂಬಕ್ಕೆ ಒಂದು ಸ್ಥಾನ ಎನ್ನುವ ತೀರ್ಮಾನಕ್ಕೆ ಬಿಜೆಪಿ ವರಿಷ್ಠರು ಬಂದಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕಾಯ್ದಿರಿಸುವುದರಿಂದ, ಬಾಲಚಂದ್ರಗೆ ಸಚಿವ ಸ್ಥಾನ ತಪ್ಪಿದೆ ಎನ್ನುವ ಮಾತೂ ಚಾಲ್ತಿಯಲ್ಲಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+