ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನರ್ಹ ಹದಿನೇಳು ಶಾಸಕರನ್ನು ದೇವರಂತೆ ನೋಡಿಕೊಳ್ಳಬೇಕಂತೆ !

|
Google Oneindia Kannada News

ಬೆಂಗಳೂರು, ಆ 21: ಯಡಿಯೂರಪ್ಪ ಸರಕಾರದ ಮೊದಲ ಸಂಪುಟ ರಚನೆಯಲ್ಲಿ ಸ್ಥಾನ ಪಡೆಯದ ಬಾಲಚಂದ್ರ ಜಾರಕಿಹೊಳಿ, ಹೊರಗಿನಿಂದ ಬಂದವರಿಗೆ ಮೊದಲು ಮರ್ಯಾದೆ ಕೊಡಬೇಕು ಎನ್ನುವ ಅಭಿಪ್ರಾಯ ಮಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಬಾಲಚಂದ್ರ ಜಾರಕಿಹೊಳಿ, " ಅನರ್ಹಗೊಂಡ ಎಲ್ಲಾ ಹದಿನೇಳು ಶಾಸಕರನ್ನು ದೇವರಂತೆ ನೋಡಿಕೊಳ್ಲಬೇಕು" ಎಂದು ಹೇಳಿದರು.

Recommended Video

ವಿ. ಎಸ್.‌ ಉಗ್ರಪ್ಪಗೆ ಸ್ಥಾನ-ಮಾನ ನೀಡಿದ ಎಐಸಿಸಿ | Oneindia Kannada

"ಮನೆ ಕಟ್ಟಿಕೊಡದಿದ್ದರೆ ಈ ಸರ್ಕಾರವನ್ನೇ ಕೆಡವುತ್ತೇನೆ": ಬಾಲಚಂದ್ರ ಜಾರಕಿಹೊಳಿ

ಬಿಜೆಪಿ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅರಭಾವಿ ಶಾಸಕ ಬಾಲಚಂದ್ರ, ಆಶ್ಚರ್ಯಕರ ರೀತಿಯಲ್ಲಿ ಸಂಪುಟದಲ್ಲಿ ಸ್ಥಾನ ಪಡೆದಿರಲಿಲ್ಲ.

We Should Treat Disqualified MLAs Like God, BJP MLA Balachandra Jarkiholi Statement

" ಅನರ್ಹಗೊಂಡ ಶಾಸಕರ ವಿಚಾರ ನ್ಯಾಯಾಲಯದಲ್ಲಿದೆ, ಅಲ್ಲಿನ ತೀರ್ಪು ಬಂದ ಕೂಡಲೇ ಇವರಿಗೆಲ್ಲಾ ನ್ಯಾಯ ಒದಗಿಸಬೇಕು. ಅವರನ್ನು ಸರಿಯಾಗಿ ನೋಡಿಕೊಂಡರೆ ಸರಕಾರ ಉಳಿಯಬಲ್ಲದು" ಎನ್ನುವ ಎಚ್ಚರಿಕೆ ಮಿಶ್ರಿತ ಮನವಿಯನ್ನು ಬಾಲಚಂದ್ರ ಜಾರಕಿಹೊಳಿ ಮಾಡಿದ್ದಾರೆ.

"ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡದಿದ್ದರೆ ಸರ್ಕಾರವನ್ನೇ ಕೆಡವುತ್ತೇನೆ" ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತನ್ನದೇ ಸರಕಾರಕ್ಕೆ ನೀಡಿದ್ದ ಎಚ್ಚರಿಕೆ ಭಾರೀ ಚರ್ಚೆಗೆ ಗುರಿಯಾಗಿತ್ತು.

ಬಿಎಸ್ವೈ ಸಂಪುಟದಲ್ಲಿ, ಒಬ್ಬರು ಮಾಜಿ ಸಿಎಂ, ಇಬ್ಬರು ಮಾಜಿ ಡಿಸಿಎಂ ಬಿಎಸ್ವೈ ಸಂಪುಟದಲ್ಲಿ, ಒಬ್ಬರು ಮಾಜಿ ಸಿಎಂ, ಇಬ್ಬರು ಮಾಜಿ ಡಿಸಿಎಂ

ಒಂದು ಕುಟುಂಬಕ್ಕೆ ಒಂದು ಸ್ಥಾನ ಎನ್ನುವ ತೀರ್ಮಾನಕ್ಕೆ ಬಿಜೆಪಿ ವರಿಷ್ಠರು ಬಂದಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕಾಯ್ದಿರಿಸುವುದರಿಂದ, ಬಾಲಚಂದ್ರಗೆ ಸಚಿವ ಸ್ಥಾನ ತಪ್ಪಿದೆ ಎನ್ನುವ ಮಾತೂ ಚಾಲ್ತಿಯಲ್ಲಿದೆ.

English summary
We Should Treat Disqualified MLAs Like God, BJP MLA from Arabhavi Balachandra Jarkiholi Statement. He is not got cabinet birth in Yediyurappa government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X