ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಷಿಪ್ರ ರಾಜಕೀಯ ಬೆಳವಣಿಗೆ: ಖರ್ಗೆ ಹೇಳುವುದೇನು?

|
Google Oneindia Kannada News

ಬೆಂಗಳೂರು, ಜುಲೈ 07: ಕರ್ನಾಟಕದ ರಾಜಕೀಯದಲ್ಲಿ ಕ್ಷಿಪ್ರ ಬದಲಾವಣೆಗಳು ಆಗುತ್ತಿವೆ. ಪರಿಸ್ಥಿತಿ ಹೇಗಿದೆಯೆಂದರೆ ಸಿಎಂ ಕುರ್ಚಿ ಯಾವಾಗ ಯಾರ ಪಾಲಾಗುತ್ತದೆಯೆಂದು ಹೇಳಲಾಗುತ್ತಿಲ್ಲ.

ಈ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಖರ್ಗೆ ಅವರ ಹೆಸರು ಕಡಿಮೆ ಅವಧಿಯಲ್ಲಿ ಮತ್ತೆ ಸಿಎಂ ಪಟ್ಟಕ್ಕೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಸ್ವತಃ ಖರ್ಗೆ ಅವರಿಗೆ ಮಾಧ್ಯಮದವರು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕ ಅಥವ ಮಹಾರಾಷ್ಟ್ರ ನಾಯಕರಿಗೆ ಎಐಸಿಸಿ ಅಧ್ಯಕ್ಷ ಹುದ್ದೆ?ಕರ್ನಾಟಕ ಅಥವ ಮಹಾರಾಷ್ಟ್ರ ನಾಯಕರಿಗೆ ಎಐಸಿಸಿ ಅಧ್ಯಕ್ಷ ಹುದ್ದೆ?

ಖರ್ಗೆ ಅವರು ಸಿಎಂ ಕುರ್ಚಿಯನ್ನು ನಿರಾಕರಿಸಿಲ್ಲ ಬದಲಿಗೆ ಆ ಬಗ್ಗೆ ಮಾಹಿತಿ ಇಲ್ಲವೆಂದಷ್ಟೆ ಹೇಳಿದ್ದಾರೆ. ಮುಂದುವರೆದು ಮೈತ್ರಿ ಸರ್ಕಾರ ಸುಗಮವಾಗಿ ನಡೆಯಲಿ ಎಂಬುದಷ್ಟೆ ನನ್ನ ಉದ್ದೇಶವೇ ಹೊರತು ಬೇರೇನು ಇಲ್ಲವೆಂದು ಹಿರಿಯ ರಾಜಕಾರಣಿಯಂತೆಯೇ ಉತ್ತರಿಸಿದ್ದಾರೆ.

we want that this should go on smoothly: Mallikarjun Kharge

ಕೆಲವು ಸುಳ್ಳು ಮಾಹಿತಿಗಳನ್ನು ಮಾಧ್ಯಮಗಳಿಗೆ ಉದ್ದೇಶಪೂರ್ವಕವಾಗಿಯೇ ಹರಿಬಿಡಲಾಗುತ್ತಿದೆ. ನಮ್ಮನ್ನು (ಕಾಂಗ್ರೆಸ್‌ ನಾಯಕರನ್ನು) ದೂರ ಮಾಡುವ ಉದ್ದೇಶದಿಂದಲೇ ಹೀಗೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಕರ್ನಾಟಕ ವಿಧಾನಸಭೆಯಲ್ಲಿ ನಂಬರ್ ಗೇಮ್, ಬಲಾಬಲ ಎಷ್ಟಿದೆ?ಕರ್ನಾಟಕ ವಿಧಾನಸಭೆಯಲ್ಲಿ ನಂಬರ್ ಗೇಮ್, ಬಲಾಬಲ ಎಷ್ಟಿದೆ?

ಅತೃಪ್ತರ ನಾಯಕತ್ವ ವಹಿಸಿರುವ ರಾಮಲಿಂಗಾ ರೆಡ್ಡಿ ಅವರ ಬಗ್ಗೆ ಮಾತನಾಡಿರುವ ಖರ್ಗೆ, ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್‌ನ ಹಿರಿಯರು, ಬೆಂಗಳೂರಿನ ಪ್ರಮುಖ ರಾಜಕೀಯ ಮುಖಂಡರು, ಅವರ ಕುಂದುಕೊರತೆಗಳು ಏನು? ಮತ್ತು ಅದಕ್ಕಾಗಿ ನಾವು ಏನು ಮಾಡಬೇಕು ಎಂದು ಕೇಳುತ್ತೇವೆ ಎಂದು ಖರ್ಗೆ ಹೇಳಿದರು.

English summary
We want that this should go on smoothly. These are all flimsy information being fed to the press just to divide us said senior congress leader Mallikarjun Kharge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X