ನಟ ಉಪೇಂದ್ರ ಅವರನ್ನು ರಾಜಕೀಯಕ್ಕೆ ಸ್ವಾಗತಿಸಿದ ಡಿಕೆಶಿ
ರಾಯಚೂರು, ಆಗಸ್ಟ್ 12: ನಟ ಉಪೇಂದ್ರ ಅವರು ರಾಜಕೀಯಕ್ಕೆ ಬರುವುದಾದರೆ ನಾವು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಆಗಸ್ಟ್ 12 ರಂದು ಕರ್ನಾಟಕ ಕಾಂಗ್ರೆಸ್ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿರುವ ಡಿಕೆಶಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಉಪೇಂದ್ರ ಅವರು ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿಯ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅವರು ರಾಜಕೀಯಕ್ಕೆ ಬರುವುದಾದರೆ ನಾವು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದರು.
ರಾಜಕೀಯ ಎಂಟ್ರಿಗೆ ಸಂಬಂಧಿಸಿದಂತೆ ಇಂದು(ಆಗಸ್ಟ್ 12) ಸುದ್ದಿಗೋಷ್ಠಿ ಏರ್ಪಡಿಸಿರುವ ಉಪೇಂದ್ರ ಅವರು ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಲಿದ್ದಾರೆ.












Click it and Unblock the Notifications