ಕರ್ನಾಟಕದಲ್ಲೂ ತಿರಂಗಾ ಯಾತ್ರೆ: ಬಿಜೆಪಿ ಹೈಕಮಾಂಡ್‌ ಸೂಚನೆ

ಶಿವಮೊಗ್ಗ 13: ಆಪರೇಷನ್ ಸಿಂದೂರದ ಬಳಿಕ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ.ನಡ್ಡಾ ಅವರು ಒಂದು ಕರೆ ನೀಡಿದ್ದಾರೆ. ಇಡೀ ದೇಶದ ಎಲ್ಲ ರಾಜ್ಯಗಳಲ್ಲಿ ತಿರಂಗಾ ಯಾತ್ರೆ ನಡೆಸಬೇಕು. 'ರಾಷ್ಟ್ರ ರಕ್ಷಣೆಗಾಗಿ ನಾಗರಿಕರು' ಅಡಿಯಲ್ಲಿ ಆಪರೇóಷನ್ ಸಿಂದೂರದ ಜೊತೆ ನಾವಿದ್ದೇವೆ; ಭಾರತದ ಸೇನೆ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸಂದೇಶ ನೀಡಬೇಕು ಎಂದಿದ್ದಾರೆ. ಕರ್ನಾಟಕದಲ್ಲೂ ತಿರಂಗಾ ಯಾತ್ರೆ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೇ 15ರಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಇದೆ. ನಿವೃತ್ತ ಯೋಧರು, ಅವರ ಕುಟುಂಬದ ಸದಸ್ಯರು, ರೈತರು, ವೈದ್ಯರು, ಎಂಜಿನಿಯರ್‍ಗಳು ಸೇರಿ ಎಲ್ಲ ವೃತ್ತಿನಿರತರು, ಎಲ್ಲ ವರ್ಗದ ಜನರು ಭಾಗವಹಿಸುತ್ತಾರೆ ಎಂದು ತಿಳಿಸಿದರು. ಮೇ 15ರಂದು ಮಂಗಳೂರು, ಬೆಳಗಾವಿ ಮತ್ತಿತರ ಪ್ರಮುಖ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಮೇ 16ರಂದು ಶಿವಮೊಗ್ಗ ಮತ್ತಿತರ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸುತ್ತೇವೆ ಎಂದು ಹೇಳಿದರು. ಮೇ 18ರಿಂದ 23ರವರೆಗೆ ತಾಲ್ಲೂಕು ಕೇಂದ್ರಗಳಲ್ಲಿ ತಿರಂಗಾ ಯಾತ್ರಾ ನಡೆಸಲಾಗುವುದು. ದೇಶದ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.

We will Also Do Tiranga Yatra In Karnataka Says BY Vijayendra

ಸ್ವಾತಂತ್ರ್ಯಾನಂತರ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ನಿರಂತರವಾಗಿತ್ತು. ಪೆಹಲ್ಗಾಂ ಘಟನೆ ನಂತರ ಉಗ್ರರನ್ನು ಮಟ್ಟ ಹಾಕಬೇಕೆಂಬ ಹಾಗೂ ಉಗ್ರಗಾಮಿಗಳಿಗೆ ಶಕ್ತಿ ಕೊಡುವ ಪಾಕಿಸ್ತಾನಕ್ಕೆ ದಿಟ್ಟ ಉತ್ತರವನ್ನು ಭಾರತ ನೀಡಬೇಕೆಂಬ ಅಭಿಪ್ರಾಯ ಇಡೀ ದೇಶದಲ್ಲಿ ವ್ಯಕ್ತವಾಗಿತ್ತು ಎಂದರು. ಮೋದಿಜೀ ಅವರು ದಿಟ್ಟ ನಿರ್ಧಾರ ಮಾಡಿ, ಉಗ್ರರನ್ನು ಬುಡಸಮೇತ ಕಿತ್ತು ಹಾಕಲು ಹಾಗೂ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾದರು. ಆಪರೇಷನ್ ಸಿಂದೂರ ಕೈಗೊಂಡರು ಎಂದು ವಿವರಿಸಿದರು. ಪಾಕಿಸ್ತಾನಕ್ಕೂ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು.
ಕದನವಿರಾಮ ಕುರಿತು ಕೂಡ ಅವರು ಮಾಹಿತಿ ಕೊಟ್ಟರು. ಪ್ರಧಾನಿಯವರ ನಿನ್ನೆಯ ಭಾಷಣದಲ್ಲಿ ಕದನವಿರಾಮ ಶಾಶ್ವತ ಅಲ್ಲ ಎಂದು ತಿಳಿಸಿದ್ದಾಗಿ ವಿವರಿಸಿದರು. ಮುಂದಿನ ದಿನಗಳಲ್ಲಿ ಪಾಕಿಸ್ತಾನದ ಕಡೆಯಿಂದ ಯಾವುದೇ ಭಯೋತ್ಪಾದನಾ ದಾಳಿ ನಡೆದರೂ ಅದನ್ನು ಯುದ್ಧವೆಂದೇ ಪರಿಗಣಿಸುವುದಾಗಿ ಮಾನ್ಯ ಪ್ರಧಾನಿಯವರು ತಿಳಿಸಿದ್ದಾರೆ ಎಂದು ಹೇಳಿದರು. ನೀರು ಮತ್ತು ರಕ್ತ ಇವೆರಡು ಸಹ ಒಟ್ಟಾಗಿ ಹರಿಯಲು ಸಾಧ್ಯವಿಲ್ಲ ಎಂಬ ಸಂದೇಶವನ್ನೂ ಪ್ರಧಾನಿಯವರು ನೀಡಿದ್ದಾರೆ. ಇದು ಪಾಕಿಸ್ತಾನ ಮತ್ತು ಜಗತ್ತಿಗೆ ನೀಡಿದ ಸಂದೇಶ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಜೀ ಅವರು ಕದನವಿರಾಮ ಘೋಷಿಸಿದ್ದರೆ ಅದು ಶಾಶ್ವತ ಅಲ್ಲ ಎಂದು ಪ್ರಧಾನಿಯವರೇ ಸ್ಪಷ್ಟಪಡಿಸಿದ್ದಾರೆ. ಇದನ್ನು ಕಾಂಗ್ರೆಸ್ಸಿನವರು ಅರ್ಥ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದರು. ಸಚಿವ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ಸಿನ ಇತರ ಮುಖಂಡರು ಆಪರೇಷನ್ ಸಿಂದೂರ ಕದನವಿರಾಮದ ಬಳಿಕ ಸ್ವಲ್ಪ ಹಗುರವಾಗಿ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಜೀ ಅವರು ಅಮೆರಿಕ ಅಧ್ಯಕ್ಷ ಟ್ರಂಪ್‍ಗೆ ಶರಣಾಗಿದ್ದಾರೆ ಎಂಬಂತೆ ಟೀಕಿಸಿದ್ದಾರೆ ಎಂದು ಆಕ್ಷೇಪಿಸಿದರು.

ಕದನವಿರಾಮ ಎಂಬುದು ಒಂದು ರಾಜನೀತಿ ಎಂದು ವಿವರಿಸಿದರು. ಪ್ರತಿಯೊಬ್ಬ ಭಾರತೀಯರೂ ಸೇನೆ ಜೊತೆ ಇರಬೇಕು ಎಂದು ನೆನಪಿಸಲು ಬಯಸುವುದಾಗಿ ಹೇಳಿದರು. ಪ್ರಧಾನಿಯವರು ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ನಮ್ಮ ದಾಳಿಗೆ ಬೆದರಿದ ಪಾಕಿಸ್ತಾನವು ಬೆದರಿ ಅಮೆರಿಕದ ಸಹಾಯ ಕೇಳಿದ್ದನ್ನು ಆಲೋಚಿಸಬೇಕು. ಇನ್ನೇನಾದರೂ ಅಹಿತಕರ ಘಟನೆ ಆದರೆ ಕಣ್ಮುಚ್ಚಿಕೊಂಡು ಕೂರುವ ಪ್ರಶ್ನೆ ಇಲ್ಲ ಎಂದು ಪ್ರಧಾನಿಯವರು ಹೇಳಿದ್ದಾರೆ ಎಂದು ವಿವರಿಸಿದರು. ಏನೇ ದುರ್ಘÀಟನೆ ಆದರೂ ಯುದ್ಧವೆಂದು ಪರಿಗಣಿಸಿ ಪ್ರತೀಕಾರ ತೀರಿಸುವುದಾಗಿ ಹೇಳಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+