ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ಕೂಡ ಅಧಿಕಾರಕ್ಕೆ ತರುತ್ತೇವೆ: ಕೋಟ ಶ್ರೀನಿವಾಸ್ ಪೂಜಾರಿ
ಬೆಂಗಳೂರು, ಡಿಸೆಂಬರ್ 8: ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿದೆ. ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ಕೂಡ ಅಧಿಕಾರಕ್ಕೆ ತರುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರತು ಗುರುವಾರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿದೆ. ಹಿಮಾಚಲಪ್ರದೇಶದಲ್ಲಿ ಕೂಡ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಗೆಲುವಿಗೆ ಕಾರಣರಾದ ಮತದಾರರಿಗೆ ಧನ್ಯವಾದಗಳು ತಿಳಿಸುತ್ತೇನೆ. ಗುಜರಾತಿನ ಶ್ರಮದ ಸಾರ್ಥಕತೆ ಇಲ್ಲಿ ಕೂಡ ಮಾಡ್ತೀವಿ ಎಂದರು.

ಇನ್ನೂ ಕರ್ನಾಟಕದಲ್ಲಿ ಹಿರಿಯರಿಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ ಮಾತನಾಡಿ, ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎಂದು ಪಕ್ಷ ನಿರ್ಧಾರ ಮಾಡಲಿದೆ. ರಾಜ್ಯದಲ್ಲಿ ಗೆಲ್ಲುವ ವಾತವಾರಣವಿದೆ, ನಾವು ಗೆದ್ದೆ ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗುಜರಾತ್ ವಿಧಾನಸಭೆ ಮತೆಎಣಿಕೆ ಬೆನ್ನಲ್ಲೇ ಭಾರಿ ಜಯದತ್ತ ಮುನ್ನುಗ್ಗುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿಯ ಮುಂದೆ ಸಂಭ್ರಮಾಚರಣೆ ಆರಂಭಿಸಿದ್ದು, ಈಗಾಗಲೇ ಸಿಹಿ ತಿಂಡಿ ಹಂಚಿ ಬಿಜೆಪಿ ಬಾವುಟ ಹಿಡಿದು ತಮಟೆಗೆ ಸದ್ದಿಗೆ ಬಿಜೆಪಿ ಕಾರ್ಯಕರ್ತರು ಹೆಜ್ಜೆ ಹಾಕಿದರು.












Click it and Unblock the Notifications