ಪ್ರಾಣ ಕೊಡುತ್ತೇವೆ, ಮೀಸಲಾತಿ ಮುಟ್ಟಿದರೆ ಸಹಿಸಲ್ಲ: ಸಿದ್ದರಾಮಯ್ಯ ಸರ್ಕಾರಕ್ಕೆ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು, ಜೂನ್‌ 09: ಪ್ರಾಣ ಬೇಕಾದ್ರೂ ಕೊಡುತ್ತೇವೆ ಆದರೆ ಮೀಸಲಾತಿ ಮುಟ್ಟಿದರೇ ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೀಸಲಾತಿ ವಿಚಾರಕ್ಕೆ ಬಂದರೆ ಶಾಸಕರ ಮನೆಗಳಿಗೆ ನುಗ್ಗುವಂತಹ ಕೆಲಸ ಕೂಡ ಆಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

We Will Fight If Reservation

ಮೀಸಲಾತಿ ಮುಟ್ಟಿದರೆ ಜನರು ಮುಂದೆ ಬೀದಿಗಿಳಿಯುತ್ತಾರೆ. ಎಂತಹ ಪರಿಸ್ಥಿತಿಯಾದರೂ ಸರಿ ಜೀವ, ಪ್ರಾಣ ಬೇಕಾದರೆ ಕೊಡುತ್ತೇವೆ. ಆದರೆ ಮೀಸಲಾತಿ ಮುಟ್ಟುವವರನ್ನು, ತೆಗೆಯುವವರನ್ನು ಸಹಿಸಲ್ಲ ಎಂದು ಶ್ರೀರಾಮುಲು ಎಚ್ಚರಿಸಿದ್ದಾರೆ.

ಇನ್ನೂ ಜಾತಿ ಜನಗಣತಿ ಬಹಳ ಹಳೆಯದ್ದು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ಅದನ್ನು ಸ್ವೀಕಾರ ಮಾಡಲು ಒಪ್ಪಿರಲಿಲ್ಲ. ಅವರೇ ಮುಖ್ಯಮಂತ್ರಿ ಆಗಿದ್ದರು, ಅವರೇ ಯಾರನ್ನೋ ಚೇರ್ಮನ್ ಕೂಡಾ ಮಾಡಿಕೊಂಡಿದ್ದರು. ಅವರು ಕೊಟ್ಟ ವರದಿಯನ್ನೇ ಸ್ವೀಕಾರ ಮಾಡಲು ರೆಡಿ ಇರಲಿಲ್ಲ. ಇವತ್ತು ಜಾತಿ ಜನಗಣತಿ ಬಗ್ಗೆ ಮಾತಾಡಿದರೆ ಎಲ್ಲಿಗೆ ಹೋಗಿ ನಿಲ್ಲುತ್ತದೆ? ಎಂದು ಪ್ರಶ್ನಿಸಿದ ಅವರು, ಅಧಿಕಾರದಲ್ಲಿ ಇರುವಾಗ ಒಂದು ಮಾತು, ಅಧಿಕಾರದಲ್ಲಿ ಇಲ್ಲದೇ ಇರುವಾಗ ಒಂದು ಮಾತು ಎಂದು ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದರು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಕಾಂಗ್ರೆಸ್​ಗೆ ಕಷ್ಟ ಆಗುತ್ತಿದೆ. ಸರ್ಕಾರದ ಖಜಾನೆ ಖಾಲಿ ಆಗುತ್ತಿದೆ. ಉಚಿತ ಕರೆಂಟ್ ಸಿಗುತ್ತದೆ ಅಂತ ನಂಬಿದ ಬಡವರಿಗೆ ಮೋಸ ಮಾಡಿದ್ದಾರೆ. ಗ್ಯಾರಂಟಿಗಳಲ್ಲಿ ಷರತ್ತುಗಳನ್ನು ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+