DCM DK Shivakumar : ಅನ್ನಭಾಗ್ಯ ಕಾನೂನು ತಂದದ್ದು ಕಾಂಗ್ರೆಸ್; ಬೊಮ್ಮಾಯಿ ವಿರುದ್ದ ಡಿ ಕೆ ಶಿವಕುಮಾರ್ ವಾಗ್ದಾಳಿ
ಬೆಂಗಳೂರು, ಜೂನ್ 26: ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಕಾಳಗ ಏರ್ಪಟ್ಟಿದೆ. ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ದ್ವೇಷ ರಾಜಕೀಯನ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ಆರೋಪಿಸಿದ್ದು, ಇದೀಗ ಬಿಜೆಪಿ ನಾಯಕರ ವಿರುದ್ದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಅನ್ನ ಭಾಗ್ಯ ಕಾನೂನು ತಂದಿದ್ದು ಕಾಂಗ್ರೆಸ್ ಎಂದು ಬಿಜೆಪಿ ನಾಯಕರ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭದಲ್ಲಿ ನಾವು ಕೊಟ್ಟ ಮಾತುಗಳನ್ನ ಉಳಿಸಿಕೊಂಡು ಹೋಗುತ್ತೇವೆ. ಐದು ಯೋಜನೆಗಳನ್ನ ಜಾರಿಗೆ ತರುತ್ತವೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಬಿಜೆಪಿಯವರಿಗೆ ಸೋಲನ್ನು ವಿಮರ್ಶೆ ಮಾಡಿ ಒಪ್ಪಿಕೊಳ್ಳುವುದಕ್ಕೆ ಆಗುತ್ತಿಲ್ಲ.

ಬಿಜೆಪಿಯವರು ಒಂದು ಕಾಳು ಕಡಿಮೆಯಾದರೂ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಬಿಜೆಪಿಯವರು ವರ್ಷದ 365 ದಿನವೂ ಪ್ರತಿಭಟನೆ ಮಾಡಲಿ, ಅವರು ಹೋರಾಟ ಮಾಡುತ್ತಿರಬೇಕು ವಿರೋಧ ಮಾಡುತ್ತಿರಬೇಕು,ಬಿಜೆಪಿಯವರು ವಿಪಕ್ಷದಲ್ಲಿ ಕೂತಿರಬೇಕು. ನಾವು ಆಡಳಿತದಲ್ಲಿ ಜನರ ಸೇವೆ ಮಾಡುತ್ತಿರಬೇಕು ಎಂದು ಹೇಳಿದರು.
ಭತ್ತ ಅಕ್ಕಿ ಒಂದೇ ದಿನದಲ್ಲಿ ಬೆಳೆಯೋಕೆ ಆಗುತ್ತಾ!? ಎಂದು ಪ್ರಶ್ನಿಸಿದ ಅವರು, ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನ ಕೇಳ್ತಿದ್ದೇವೆ,ಅವ್ರು ಕೊಡ್ತಿಲ್ಲ, ಅಕ್ಕಿ ಮೋದಿ ಕೊಟ್ಟಿದ್ದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಸೋನಿಯಾ ಗಾಂಧಿ ನೇತೃತ್ವದ ಯುಪಿಎನಲ್ಲಿ ಮನಮೋಹನ್ ಸಿಂಗ್ ಅಕ್ಕಿ ಕಾನೂನು ತಂದಿದ್ದು, ಇದು ಕಾಂಗ್ರೆಸ್ ಸರ್ಕಾರದ ಯೋಜನೆ. ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದರು.
ಅನ್ನ ಭಾಗ್ಯ ಕಾನೂನು ತಂದಿದ್ದು ಕಾಂಗ್ರೆಸ್. 5 ಕೆಜಿ ಯಿಂದ 10 ಕೆಜಿಗೆ ಅಂತ ತಂದಿದ್ದೇವೆ ಅದನ್ನು ಕೊಡಲಿದೆ. ಇನ್ನೂ ಕೆಲವು ಕಡೆ ರಾಗಿ,ಗೋಧಿ ಕೊಡಿ ಎಂದು ಕೇಳಿದ್ದಾರೆ, ಕೇಂದ್ರ ಸರ್ಕಾರ ಅಕ್ಕಿ ಕೊಡದೇ ಇದ್ದಾಗ ವಿಧಿ ಇಲ್ಲದೇ ಬೇರೆ ಕಡೆ ಖರೀದಿ ಮಾಡಿ ಕೊಡುತ್ತೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications