28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಗೆಲ್ಲುವ ಸ್ಥಾನಗಳೆಷ್ಟು? ಅಂಕಿ ಅಂಶಗಳನ್ನ ಬಿಚ್ಚಿಟ್ಟ ಬಿ ಎಸ್ ಯಡಿಯೂರಪ್ಪ
ಶಿವಮೊಗ್ಗ, ಮೇ 30: ಕರ್ನಾಟಕದ ಜನತೆ ಈಗಾಗಲೇ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಮಾಡಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನೂ ಫಲಿತಾಂಶಕ್ಕೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದ ಮೂರು ಪಕ್ಷಗಳಲ್ಲೂ ಸೋಲು - ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಇದರ ನಡುವೆ ಬಿ ಹಾಗೂ ಕಾಂಗ್ರೆಸ್ ನಾಯಕರ ಕೈಗೆ ಆಂತರಿಕ ವರದಿಯೊಂದು ಸಿಕ್ಕಿದ್ದು, ಕೆಲ ನಾಯಕರಿಗೆ ಸಿಹಿಯಾದ್ರೆ, ಇನ್ನು ಕೆಲ ನಾಯಕರು ಟೆನ್ಷನ್ ನಲ್ಲಿದ್ದಾರೆ.
ಇನ್ನೂ ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ರಾಜಕೀಯ ವಿಶ್ಲೇಷಕರು ಹಾಗೂ ರಾಜಕೀಯ ನಾಯಕರು ತಮ್ಮದೇ ಅಂಕಿಅಂಶಗಳ ಲೆಕ್ಕಾಚಾರವನ್ನು ಮುಂದಿಡುತ್ತಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರುಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆಲ್ಲುವ ಸ್ಥಾನಗಳ ಲೆಕ್ಕಾಚಾರವನ್ನ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಬಿ ಎಸ್ ಯಡಿಯೂರಪ್ಪ ಅವರು, ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರು 20 ರಿಂದ 22 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ಗೆ ಚುನಾವಣೆ ನಡೆಯುತ್ತಿದೆ. ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನ ವ್ಯಕ್ತಪಸಿದ ಬಿ ಎಸ್ ಯಡಿಯೂರಪ್ಪ ಅವರು, ನೈಋತ್ಯ ಪದವೀಧರ ಕ್ಷೇತ್ರದಲ್ಲಿ ವಾತಾವರಣ ಅನುಕೂಲಕರವಾಗಿದೆ. ಪರಿಷತ್ ನಲ್ಲಿ ಎಂಟು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅಹಿತಕರ ಘಟನೆ ಅದು ಆಗಬಾರದು. ಯಾರು ಯಾರದ್ದು ಹೆಸರು ಬರೆದಿದ್ದಾರೆ, ಹೆಸರು ಬರೆದಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೇ ರಾಜೀನಾಮೆ ಕೊಟ್ಟು ಅವರ ಗೌರವ ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.
ರಘುಪತಿ ಭಟ್ ಪಕ್ಷೇತರ ಸ್ಪರ್ಧೆ ವಿಚಾರವಾಗಿ ಮಾತನಾಡಿ, ರಘುಪತಿ ಭಟ್ ಅವರಿಗೆ ಒಳ್ಳೆಯ ಸ್ಥಾನ ಮಾನ ಕೊಟ್ಟಿದ್ದೇವು, ಆದರೂ ಸ್ವತಂತ್ರ ಸ್ಪರ್ಧೆ ಮಾಡಿದ್ದಾರೆ. ರಘುಪತಿ ಭಟ್ ಸ್ಪರ್ಧೆ ಏನು ಪರಿಣಾಮ ಬೀರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಬಿ ಎಸ್ ಯಡಿಯೂರಪ್ಪ ಅವರು ಹೇಳಿದರು.
ಕಾಂಗ್ರೆಸ್ ನಾಯಕರ ಲೆಕ್ಕಾಚಾರವೆಷ್ಟು?
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಕ್ಷೇತ್ರಗಳನ್ನ ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಇತ್ತ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದೇ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿತ್ತು. ಇದೀಗ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಪರವಾದ ಅಲೆ ಇದೆ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ನೀಡಿದೆ.
ಇತ್ತ ಕಾಂಗ್ರೆಸ್ ಹೈಕಮಾಂಡ್ ಕೊಟ್ಟ ಗುರಿ ತಲುಪಲು ಕೈ ನಾಯಕರು ಗ್ಯಾರಂಟಿ ಅಸ್ತ್ರಗಳ ಮೂಲಕ ಚುನಾವಣೆಯನ್ನ ಎದುರಿಸಿದ್ದು, 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಕ್ತಪಡಿಸಿದ್ದಾರೆ. ಇನ್ನೂ ಕಾಂಗ್ರೆಸ್ ನಾಯಕರು ಕೈ ಸೇರಿದ ಆಂತರಿಕ ವರದಿಯನ್ನ ಕಾಂಗ್ರೆಸ್ 13 ರಿಂದ 14 ಸ್ಥಾನಗಳಲ್ಲಿ ಆಡಳಿತರೂಢ ಕಾಂಗ್ರೆಸ್ ಗೆಲ್ಲಬಹುದು ಎಂದು ತಿಳಿಸಿದೆ.












Click it and Unblock the Notifications