ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರಗಳ ಕುರಿತು ಮಹತ್ವದ ಹೇಳಿಕೆ ನೀಡಿದ ವಿಜಯೇಂದ್ರ
ಬೆಂಗಳೂರು, ನವೆಂಬರ್20: ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲುವಿನ ಮೂಲಕ ನರೇಂದ್ರ ಮೋದಿಜಿ ಅವರ ಕೈಯನ್ನು ಬಲಪಡಿಸಬೇಕಾಗಿದೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದರು.
ಈ ಕುರಿತು ಮಾತನಾಡಿದ ಅವರು, ಹಿಂದೆ ಕರ್ನಾಟಕ ಎಂದರೆ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆ ಎಂದು ಮಾತನಾಡುತ್ತಿದ್ದರು. ಮುಂದಿನ ದಿನಗಳಲ್ಲಿ ಕರ್ನಾಟಕವು ಬಿಜೆಪಿಗೆ ದಕ್ಷಿಣ ಭಾರತದ ಭದ್ರಕೋಟೆಯಾಗಿ ಪರಿವರ್ತನೆ ಆಗಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಬೇಕಿದೆ ಎಂದು ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಗುರಿ ನಮ್ಮ ಮುಂದಿದೆ ಎಂದ ಅವರು, ನಾಡಿನ ರೈತರು, ಬಡವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಎಲ್ಲ ವರ್ಗದ ಜನರಿಗೆ ನ್ಯಾಯ ಕೊಡುವ ಕೆಲಸ ಬಿಜೆಪಿಯ ನೇತೃತ್ವದಲ್ಲಿ ಆಗಬೇಕಿದೆ. ಸಂಘಟನೆಗೆ ಬಲ ಕೊಟ್ಟು ಈ ಗುರಿ ತಲುಪಲು ಶ್ರಮಿಸಲಿದ್ದೇವೆ ಎಂದರು.
ಕೆ.ಆರ್.ಪೇಟೆಯ ಬೂಕನಕೆರೆ ಪೂಜ್ಯ ತಂದೆಯವರಿಗೆ ಜನ್ಮ ಕೊಟ್ಟ ಸ್ಥಳ. ತದನಂತರದಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ಒಂದು ಐತಿಹಾಸಿಕ ವಿಜಯವನ್ನು ಈ ಕ್ಷೇತ್ರವು ಬಿಜೆಪಿಗೆ ನೀಡಿದೆ. ಕಳೆದ ಚುನಾವಣೆಯಲ್ಲಿ ಸ್ವಲ್ಪ ಬದಲಾವಣೆಗಳು ಆಗಿದೆ. ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ನಾವು ಗೆಲ್ಲಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಸೋಲೇ ಗೆಲುವಿನ ಸೋಪಾನ. ಸೋಲನ್ನು ಮರೆತು ಮುನ್ನುಗ್ಗುತ್ತೇವೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಗೆ ಒತ್ತು ಕೊಡುತ್ತೇವೆ. ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯ ಮಾಡುತ್ತೇವೆ. ಆ ಮೂಲಕ ಯಶಸ್ಸನ್ನು ಸಾಧಿಸಲಿದ್ದೇವೆ ಎಂದು ವಿಜಯೇಂದ್ರ ಅವರು ತಿಳಿಸಿದರು.
ಸವಾಲಿದ್ದಾಗಲೇ ನಾಯಕನ ಪರೀಕ್ಷೆ ಆಗುತ್ತದೆ. ತಂದೆಯವರ ರಾಜಕೀಯ ಜೀವನದಲ್ಲಿ ಸವಾಲು, ಕಲ್ಲುಮುಳ್ಳಿನ ಹಾದಿ ಇದ್ದದನ್ನು ಹತ್ತಿರದಿಂದ ನೋಡಿದ್ದೇನೆ. ಏನೇ ಸಮಸ್ಯೆ ಬಂದರೂ ಅವನ್ನು ಸುಲಲಿತವಾಗಿ ಬಗೆಹರಿಸಿ, ಎಲ್ಲ ಹಿರಿಯರ ಆಶೀರ್ವಾದದಿಂದ, ಮಾರ್ಗದರ್ಶನದೊಂದಿಗೆ ಮುಂದೆ ಸಾಗುವೆ ಎಂದರು.
ಯಾರ ಸಾಮಥ್ರ್ಯ ಎಷ್ಟೆಂಬುದನ್ನು ಆಡಳಿತ ಪಕ್ಷ ತೀರ್ಮಾನ ಮಾಡುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಜನರು ಅದನ್ನು ತೀರ್ಮಾನ ಮಾಡುತ್ತಾರೆ. ಯತ್ನಾಳ್ ಅವರು ಹಿರಿಯ ನಾಯಕರು. ಅವರ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರರಿದ್ದಾರೆ. ಯತ್ನಾಳ್ ಅವರು ನೋವಿನಿಂದ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿರಬಹುದು. ಎಲ್ಲವನ್ನೂ ಕೇಂದ್ರದ ವರಿಷ್ಠರು, ಹಿರಿಯರು ಕುಳಿತು ಸಮಾಲೋಚನೆ ಮಾಡಿ ಉತ್ತರ ಕಂಡುಕೊಳ್ಳಲಿದ್ದೇವೆ. ಅವರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications