ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಗೆಲ್ಲುವ ಸ್ಥಾನಗಳೆಷ್ಟು? ಅಂಕಿ ಅಂಶಗಳನ್ನ ಬಿಚ್ಚಿಟ್ಟ ಕೇಸರಿ ಕಲಿ
ಬೆಂಗಳೂರು, ಮೇ 11: ರಾಜ್ಯದಲ್ಲಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಆಡಳಿತರೂಢ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಹಲವು ತಂತ್ರಗಾರಿಕೆ ನಡೆಸಿ ಚುನಾವಣೆಯನ್ನ ಎದುರಿಸಿವೆ.
ಗೆಲ್ಲುವ ಸ್ಥಾನಗಳ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ಮಾತನಾಡಿದ್ದು, ಒಟ್ಟಾರೆ ಜನಾಭಿಪ್ರಾಯ, ಜನರ ಸ್ಪಂದನ, 3 ಸುತ್ತಿನಲ್ಲಿ ಮನೆ ಮನೆ ಪ್ರಚಾರದ ಕಾರ್ಯದ ಆಧಾರದಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿ ನಾವಿದ್ದೇವೆ ಎಂದು ಹೇಳಿದ್ದಾರೆ.

ಕಡಿಮೆ ಅವಧಿಯಲ್ಲಿ ಹೆಚ್ಚು ಜನರನ್ನು ತಲುಪುವಂಥ ಪ್ರಯತ್ನ ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದರು. 3 ರೀತಿಯ ಸಾರ್ವಜನಿಕ ಸಂಪರ್ಕವನ್ನು ಯಶಸ್ವಿಯಾಗಿ ಮಾಡಿದ್ದೇವೆ. ದೊಡ್ಡ ದೊಡ್ಡ ಸಾರ್ವಜನಿಕ ಸಭೆ, ರೋಡ್ ಷೋ, ಮನೆಯಂಗಳದ ಸಭೆಗಳ ಮೂಲಕ ಸಾರ್ವಜನಿಕರನ್ನು ತಲುಪಿ ನಮ್ಮ ವಿಷಯವನ್ನು ತಿಳಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಜೀ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೇರಿದಂತೆ 14 ಜನ ರಾಷ್ಟ್ರೀಯ ಪ್ರಮುಖರು ಕರ್ನಾಟಕದಲ್ಲಿ 79 ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ.
39 ಕಡೆಗಳಲ್ಲಿ ರೋಡ್ ಷೋಗಳು ನಡೆದಿವೆ. ರಾಜ್ಯದ ಮುಖಂಡರಾದ ಯಡಿಯೂರಪ್ಪ, ವಿಜಯೇಂದ್ರ ಮತ್ತು ಅಶೋಕ್ ಅವರು ಸೇರಿದಂತೆ ಸುಮಾರು 30 ಜನ ರಾಜ್ಯದ ಪ್ರಮುಖರು 557 ಸಭೆಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. 139 ಕಡೆಗಳಲ್ಲಿ ರಾಜ್ಯ ನಾಯಕರು ರೋಡ್ ಷೋ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.
ಒಟ್ಟು 650ಕ್ಕೂ ಹೆಚ್ಚು ಸಾರ್ವಜನಿಕ ಸಭೆಗಳು, 180ಕ್ಕೂ ಹೆಚ್ಚು ರೋಡ್ ಷೋಗಳನ್ನು ಮಾಡಿದ್ದು, ಮತದಾರರನ್ನು ಸಂಪರ್ಕಿಸುವ ಯಶಸ್ವಿ ಪ್ರಯತ್ನ ಆಗಿದೆ ಎಂದು ತಿಳಿಸಿದರು. ಸಣ್ಣ ಸಭೆಗಳು, ಕಾಂಗ್ರೆಸ್ ಅಪಪ್ರಚಾರ, ಡೇಂಜರ್ ಕಾಂಗ್ರೆಸ್ ಎಂದು ತಿಳಿಸಲು 'ಮನೆಯಂಗಳದಲ್ಲಿ ಸಭೆ' ಎಂಬ ಕರೆ ಕೊಡಲಾಗಿದ್ದು, 50-75 ಜನರನ್ನು ಒಳಗೊಂಡ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣ ಸಣ್ಣ ಸಭೆಗಳು ಎಲ್ಲ ಬೂತ್ಗಳಲ್ಲಿ ಮಾಡಿರುವುದು ಈ ಚುನಾವಣೆಯ ವಿಶೇಷ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯ ಸಂಚಾಲಕರು, ಪ್ರಭಾರಿಗಳು, ನಮ್ಮೆಲ್ಲ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ಒಳಗೊಂಡ ಪ್ರಮುಖರ ಜೊತೆಗೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಅವಲೋಕನ ಸಭೆಯು ಇವತ್ತು ಬೆಂಗಳೂರಿನಲ್ಲಿ ನಡೆದಿದೆ. ಕಳೆದ 40 ದಿನಗಳ ಅವಧಿಯಲ್ಲಿ ಚುನಾವಣೆ ನಿಮಿತ್ತ ನಡೆದ ಹತ್ತಾರು ವಿಚಾರಗಳ ಅವಲೋಕನ ಮಾಡಿದ್ದೇವೆ ಎಂದು ವಿವರಿಸಿದರು.
ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿ ತಯಾರಿ ಪ್ರಕ್ರಿಯೆಗಳನ್ನು ಇವತ್ತು ಆರಂಭಿಸಲಿದ್ದೇವೆ. ವಿಧಾನಪರಿಷತ್ತಿನ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ. ಪದವೀಧರರು, ಶಿಕ್ಷಕರ ಕ್ಷೇತ್ರದಲ್ಲಿ ಈಗಾಗಲೇ ಮತದಾರರ ನೋಂದಣಿ ಪ್ರಕ್ರಿಯೆ ಮುಗಿದು ಸ್ಥಳೀಯ ಮಟ್ಟದಲ್ಲಿ ಮತದಾರರ ಸಂಪರ್ಕ ಕಾರ್ಯ ನಡೆಯುತ್ತಿದೆ. ನಾಳೆ ಬೆಳಿಗ್ಗೆಯೊಳಗೆ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಪ್ರಕಟಿಸಲಿದೆ ಎಂದು ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.
ಜೆಡಿಎಸ್ ಜೊತೆ ಹೊಂದಾಣಿಕೆ ಕೊರತೆ ಆಗಿಲ್ಲ. ಜೆಡಿಎಸ್ ಸ್ಪರ್ಧಿಸಿದ 3 ಕ್ಷೇತ್ರಗಳಲ್ಲಿ ಬಿಜೆಪಿಯಿಂದ ನಮ್ಮ ಕಾರ್ಯಕರ್ತರು ಚುನಾವಣಾ ಕಾರ್ಯಕ್ಕೆ ಧುಮುಕಿದ್ದಾರೆ. ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಸಹಕಾರ ನಮಗೆ ಸಹಕಾರ ಕೊಟ್ಟಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದರು.
ಕಾಂಗ್ರೆಸ್ ಸರಕಾರವು ಅವರದೇ ಭಾರದಲ್ಲಿ ಕುಸಿದು ಬೀಳಲಿದೆ. ನಾಯಕತ್ವಕ್ಕಾಗಿ 4 ರೀತಿಯ ಪೈಪೋಟಿ ಕಾಂಗ್ರೆಸ್ ಪಕ್ಷದಲ್ಲಿದೆ. ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಲ್ಲಿ ಮಾಡಿದ ಭಾಷಣ ಇದಕ್ಕೆ ಜ್ವಲಂತ ಉದಾಹರಣೆ. ಲೋಕಸಭಾ ಚುನಾವಣಾ ಫಲಿತಾಂಶದ ಮೂಲಕ ತಮ್ಮ ಕುರ್ಚಿ ಮೇಲೆ ಅಪಾಯ ಇದೆ ಎಂದು ಅವರು ತಿಳಿಸಿದ್ದಾರೆ. ಒಕ್ಕಲಿಗರು ಸಿಎಂ ಆಗುವುದಾಗಿ ಡಿ.ಕೆ.ಶಿವಕುಮಾರ್ ಅವರೂ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಾರಕಿಹೊಳಿಯವರು ಗುಪ್ತಗಾಮಿನಿ ರೂಪದಲ್ಲಿ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ. ಪರಮೇಶ್ವರ್ ಅವರು ಕೂಡ ಈ ನಿಟ್ಟಿನಲ್ಲಿ ಬೇರೆ ಬೇರೆ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಚುನಾವಣೆ ಘೋಷಣೆ ಆದ ದಿನದಿಂದ ಚುನಾವಣೆ ಮುಗಿಯುವ ತನಕ 152 ದೂರುಗಳನ್ನು ಚುನಾವಣಾ ಆಯೋಗಕ್ಕೆ ನಾವು ಕೊಟ್ಟಿದ್ದೇವೆ. ಆಡಳಿತ ಯಂತ್ರದ ಸಂಪೂರ್ಣ ದುರುಪಯೋಗವನ್ನು ಕಾಂಗ್ರೆಸ್ ಸಹಜವಾಗಿ ಕರ್ನಾಟಕದಲ್ಲಿ ಮಾಡಿದೆ. ಎಲ್ಲ ಜಿಲ್ಲೆ- ತಾಲ್ಲೂಕುಗಳಲ್ಲಿ ನಮ್ಮ ಕಾರ್ಯಕರ್ತರನ್ನು ಬೆದರಿಸುವ, ಹೆದರಿಸುವ ತಂತ್ರವನ್ನು ಮತ್ತು ಕಾರ್ಯಕರ್ತರ ವಿರುದ್ಧ ಮೊಕದ್ದಮೆ ಹಾಕುವ ವ್ಯಾಪಕ ದೌರ್ಜನ್ಯದ ಕಾರ್ಯವನ್ನು ಆಡಳಿತ ಪಕ್ಷ ಮಾಡಿದೆ. ಇವುಗಳ ವಿರುದ್ಧ ಸ್ಥಳೀಯವಾಗಿ ದೂರು ಕೊಡಲಾಗಿದೆ ಎಂದು ತಿಳಿಸಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications