ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಂದ್ ಮಾಡಲು ಬಿಡೆವು: ಡಿಕೆ ಶಿವಕುಮಾರ್

By Manjunatha
|
Google Oneindia Kannada News

ಬೆಂಗಳೂರು, ಮೇ 25: ಬಿಜೆಪಿಯು ಕರ್ನಾಟಕ ಬಂದ್ ಮಾಡಲು ನಾವು ಬಿಡುವುದಿಲ್ಲ, ಅದು ಅಸಾಂವಿಧಾನಿಕ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನಸಭೆ ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬಂದ್ ಮಾಡುವ ಮೂಲಕ ಸಾರ್ವಜನಿಕ ಹಣವನ್ನು ಪೋಲು ಮಾಡಲು ಸಾಧ್ಯವಿಲ್ಲ, ಇದಕ್ಕೆ ಸರ್ಕಾರ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಸಾಲಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್: ಯಡಿಯೂರಪ್ಪಸಾಲಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್: ಯಡಿಯೂರಪ್ಪ

ಬಿಜೆಪಿಯ ಬಂದ್‌ನಿಂದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾದರೆ ಅದಕ್ಕೆ ಅವರೇ ಕಾರಣಕರ್ತರಾಗುತ್ತಾರೆ. ಅವರು ಹೀಗೆ ಸರ್ಕಾರದ ಮೇಲೆ ಒತ್ತಡ ಅಥವಾ ಹೆದರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

We wont let BJP to do Karnataka bandh: D.K.Shivakumar

ಬಿಜೆಪಿಯ ಬಂದ್ ಬೆದರಿಕೆಗೆಲ್ಲ ಬಗ್ಗಲ್ಲ: ಕುಮಾರಸ್ವಾಮಿಬಿಜೆಪಿಯ ಬಂದ್ ಬೆದರಿಕೆಗೆಲ್ಲ ಬಗ್ಗಲ್ಲ: ಕುಮಾರಸ್ವಾಮಿ

ನಮ್ಮದು ಜವಾಬ್ದಾರಿಯುತ ಸರ್ಕಾರ, ವಿವೇಚನೆಯಿಂದ ನಾವು ಯೋಜನೆಗಳನ್ನು ಜಾರಿ ಮಾಡುತ್ತೇವೆ. ಬಿಜೆಪಿಯವರ ಹೇಳಿದ ತಾಳಕ್ಕೆ ಕುಣಿಯಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

English summary
DK Shivakumar reacts to BJP's Karnataka bandh he said, 'They cannot waste public money, if a law & order problem in created it'll be because of them. They cannot force & blackmail us'
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X