ಮೇ 9,10ರಂದು ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಮೇ 07: ಉತ್ತರ ಕರ್ನಾಟಕ ಭಾಗಗಳಾದ ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ತಲೆಂಗಾಣ ಮತ್ತು ವಿದರ್ಭ ಪ್ರದೇಶದಲ್ಲಿ ಮೇ 7-8 ಎಂದು ಹೀಟ್ವೇವ್ ಎಚ್ಚರಿಕೆ ನೀಡಲಾಗಿದೆ. ಈ ಪ್ರಭಾವ ಉತ್ತರ ಕರ್ನಾಟಕದ ಮೇಲೂ ಉಂಟಾಗಲಿದೆ.
ಮುಂದಿನ ಒಂದು ವಾರ ಗರಿಷ್ಠ ತಾಪಮಾನ 40-41 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬರಿಗೈನಲ್ಲಿ ಚರಂಡಿ ಸ್ವಚ್ಛಮಾಡಿದ ಪೊಲೀಸ್: ಟ್ವಿಟರ್ನಲ್ಲಿ ಮೆಚ್ಚುಗೆ
ರಾಜ್ಯದ ಶೇ.73 ಭೌಗೋಳಿಕ ಪ್ರದೇಶದಲ್ಲಿ ಗರಿಷ್ಠ ತಾಪಮಾನ 34ರಿಂದ 38 ಡಿಗ್ರಿ ಸೆಲಸಿಯಸ್ ದಾಟಿದೆ. ಗದಗ, ಚಿತ್ರದುರ್ಗ, ಕೊಪ್ಪಳ, ದಾವಣಗೆರೆ, ಬಾಗಲಕೋಟೆ, ಬಳ್ಳಾರಿ, ರಾಯಚೂರು ಮತ್ತು ವಿಜಯಪುರ ಪ್ರದೇಶದಲ್ಲಿ ಗರಿಷ್ಠ ತಾಪಮಾನ 41ರಿಂದ 43 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ.
ದಕ್ಷಿಣ ಒಳನಾಡಿನಲ್ಲಿ ಒಂದು ವಾರದಿಂದ ಆಗಾಗ ಮಳೆಯಾಗುತ್ತಿರುವ ಕಾರಣದಿಂದ ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದೆ.ಬೆಂಗಳೂರು ನಗರದಲ್ಲಿ 35 ಡಿಗ್ರಿ ಸೆಲ್ಸಿಯಸ್ ತಲುಪಿದ್ದ ಗರಿಷ್ಠ ತಾಪಮಾನ ಪ್ರಸ್ತುತ 32 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ. ಇದೇ ರೀತಿ ಚಿಕ್ಕಮಗಳೂರು, ಮಂಡ್ಯ, ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲೂ ಬಿಸಿಲ ಝಳ ಕಡಿಮೆಯಾಗಿದೆ.
ಮೇ 7-8ರಂದು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮೇ 9-10ರಂದು ದಕ್ಷಿಣ ಒಳನಾಡಿನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.