Karnataka Rain:ರಾಜ್ಯದ ಈ ಜಿಲ್ಲೆಯಲ್ಲಿ ವರ್ಷದ ಮೊದಲ ಭರ್ಜರಿ ಮಳೆ! ಇಲ್ಲಿದೆ ಮಾಹಿತಿ
ದಾವಣಗೆರೆ, ಏಪ್ರಿಲ್ 04: ಬಿರು ಬಿಸಿಲ ತಾಪಮಾನದಿಂದ ತತ್ತರಿಸಿದ್ದ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ಧರೆಗೆ ಇಳಿದಿದೆ. ದಾವಣಗೆರೆ ತಾಲೂಕಿನ ಹೆಬ್ಬಾಳದಲ್ಲಿ ಬುಧವಾರ ಕೆಲ ಕಾಲ ಮಳೆಯಾಗಲಿದ್ದು, ಸೆಕೆಯಿಂದ ಬಳಲಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಹೌದು, ಕಾದ ಕಾವಲಿಯಂತಾಗಿದ್ದ ಭೂಮಿಗೆ ಸುರಿದ ವರುಣ ತಂಪೆರೆದಿದ್ದಾನೆ. ಇನ್ನೂ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ ವರ್ಷ ಮೊದಲ ಮಳೆಯಿಂದಾಗಿ ಜನರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಬಿಲಿನ ತೀವ್ರತೆಗೆ ಜನ-ಜಾನುವಾರು ಕುಡಿಯುವ ನೀರಿಲ್ಲ, ಒಣಗಿದ ಹಳ್ಳ-ಕೊಳ್ಳ, ನೀರಿಲ್ಲದೆ ಅಡಿಕೆ ತೋಟ ಬದುಕಿಸಿಕೊಳ್ಳಲು ಪರದಾಟ ನಡೆಸುತ್ತಿದ್ದ ರೈತರಿಗೆ ಜಿಲ್ಲೆಯ ವರ್ಷದ ಮಿದಲ ಮಳೆ ತುಸು ನೆಮ್ಮದಿ ನಿಟ್ಟುಸಿರು ಬಿಡುವಂತಾಯಿತು.

ಮಳೆಯಿಂದ ಹಲವು ಗ್ರಾಮದಲ್ಲಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದ್ದು, ಬರಗಾಲದಿಂದ ಬೆಂದಿರುವ ಜನರು ದೊಡ್ಡ ಮಳೆಯ ನಿರೀಕ್ಷೆಯಲ್ಲಿದ್ದಾರೆ. ದಾವಣಗೆರೆ ಜಿಲ್ಲೆಯ ಆನಗೋಡು, ಹೆಬ್ಬಾಳ್, ಮಾಯಕೊಂಡ, ಹುಚ್ಚವ್ವನಹಳ್ಳಿ ಸುತ್ತಮುತ್ತ ಸಂಜೆ ಇದ್ದಕ್ಕಿದ್ದಂತೆ ಜೋರು ಗಾಳಿ ಬೀಸಿ, ದಟ್ಟಮೋಡಗಳು ಆವರಿಸಿದವು. ಮಳೆಗೆ ಕಾಯುತ್ತಿದ್ದ ಜನ, ಮಳೆ ಕಂಡು ಪುಳಕಿತರಾಗಿದ್ದರು. ಸುಮಾರು 45-50 ನಿಮಿಷ ಕಾಲ ಜೋರು ಮಳೆಯಾಗಿದ್ದು, ವರ್ಷ ಮೊದಲ ಮಳೆಯಿಂದ ದಾವಣಗೆರೆ ಜನತೆ ಖುಷಿಯನ್ನ ವ್ಯಕ್ತಪಡಿಸಿದ್ದಾರೆ.
ಇನ್ನೂ ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ












Click it and Unblock the Notifications