ಡಿ.28ರ ಹವಾಮಾನ ವರದಿ: ಸದ್ಯ ಕಾರವಾರ ಕರ್ನಾಟಕದ ಕಾಶ್ಮೀರ
ಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಮಂದಿ ಕೊರೆಯುವ ಚಳಿಗೆ ಹೈರಾಣಾಗಿದ್ದಾರೆ. ಇನ್ನೊಂದೆಡೆ ನೆರೆಯ ರಾಜ್ಯಗಳಲ್ಲಿ ಚಳಿಯ ಜೊತೆಗೆ ಮಳೆಯೂ ಮುಂದುವರೆದಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಂದಿನಂತೆ ಇಂದು ಸಹ ಹವಾಮಾನ ಮುಂದುವರಿಯಲಿದೆ. ಮಧ್ಯಾಹ್ನದ ವೇಳೆ ಶುಷ್ಕ ಹವಾಮಾನ ಇರಲಿದ್ದು, ಬೆಳಗ್ಗೆ ಹಾಗೂ ಸಂಜೆ ಚಳಿಯ ವಾತಾವರಣ ಇರಲಿದೆ. ಮುಂದಿನ ನಾಲ್ಕೈದು ದಿನ ಚಳಿಯ ಪ್ರಮಾಣ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ವರದಿ
ಬೆಂಗಳೂರು ನಗರದಲ್ಲಿ 27-16, ಮೈಸೂರು 29-16, ಚಾಮರಾಜನಗರ 29-16, ರಾಮನಗರ 28-17, ಮಂಡ್ಯ 29-16, ಬೆಂಗಳೂರು ಗ್ರಾಮಾಂತರ 27-16, ಚಿಕ್ಕಬಳ್ಳಾಪುರ 26-14, ಕೋಲಾರ 27-16, ಹಾಸನ 28-14, ಚಿಕ್ಕಮಗಳೂರು 28-14, ದಾವಣಗೆರೆ 31-16, ಶಿವಮೊಗ್ಗ 32-17, ಕೊಡಗು 29-14, ತುಮಕೂರು 28-16, ಉಡುಪಿ 31-22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಗಳೂರು 31-22, ಉತ್ತರ ಕನ್ನಡ 32-17, ಧಾರವಾಡ 30-16, ಹಾವೇರಿ 31-16, ಹುಬ್ಬಳ್ಳಿ 31-17, ಬೆಳಗಾವಿ 29-16, ಗದಗ 31-16, ಕೊಪ್ಪಳ 31-17. ವಿಜಯಪುರ 31-17, ಬಾಗಲಕೋಟ 32-17, ಕಲಬುರಗಿ 30-17, ಬೀದರ್ 29-16, ಯಾದಗಿರಿ 30-16, ರಾಯಚೂರ 31-17, ಬಳ್ಳಾರಿ 31-17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ರಾಜ್ಯಗಳಲ್ಲಿ ಹಿಮಪಾತ
ಭಾರತೀಯ ಹವಾಮಾನ ಇಲಾಖೆ (IMD) ಭಾರತದ ಉತ್ತರದ ಕೆಲವು ರಾಜ್ಯಗಳಲ್ಲಿ ಬುಧವಾರದವರೆಗೆ (ಡಿಸೆಂಬರ್ 29) ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತದ ಮುನ್ಸೂಚನೆ ನೀಡಿದೆ. ಇಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಮೇಲೆ ಮಳೆ ಮತ್ತು ಹಿಮಪಾತದ ಸಾಧ್ಯತೆ ಹೆಚ್ಚಾಗಿದೆ. ಉತ್ತರಾಖಂಡದಲ್ಲಿ ಇಂದಿನಿಂದ ಬುಧವಾರದವರೆಗೆ ಇದೇ ರೀತಿಯ ಹವಾಮಾನವಿರಲಿದೆ.

ಕೇಂದ್ರ ಹವಾಮಾನ ಮುನ್ಸೂಚನೆ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ, ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶದಲ್ಲಿ ಇಂದಿನಿಂದ ಬುಧವಾರದವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಂದು ಪೂರ್ವ ಮತ್ತು ಪಕ್ಕದ ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನದಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಈ ರಾಜ್ಯಗಳಲ್ಲಿ ಮಳೆಯಾಗಲಿದೆ
ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್ಗಢದಲ್ಲಿ ಇನ್ನೆರಡು ದಿನ ಮಳೆ ಬೀಳಲಿದೆ. ಆದರೆ ಪೂರ್ವ ಭಾಗದಲ್ಲಿ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಇಂದಿನಿಂದ ಡಿಸೆಂಬರ್ 30ರ ಅವಧಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ಮತ್ತು ನಾಳೆ ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್ಗಢದಲ್ಲಿ ಹಾಗೂ ಇಂದು ಪಶ್ಚಿಮ ಮಧ್ಯಪ್ರದೇಶ, ಬಿಹಾರ ಮತ್ತು ಜಾರ್ಖಂಡ್ನಲ್ಲಿ ಮಳೆಯಾಗಲಿದೆ.

ಬಿಹಾರದಲ್ಲಿ ಬುಧವಾರ ಮತ್ತು ಗುರುವಾರ ಶೀತ ಗಾಳಿಯ ಮುನ್ಸೂಚನೆಯಿದೆ. ಆದರೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಡಿಸೆಂಬರ್ 31ರಂದು ಇದೇ ರೀತಿಯ ಪರಿಸ್ಥಿತಿ ಇರಲಿದೆ. "ಡಿಸೆಂಬರ್ 31ರಂದು ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಶೀತ ಗಾಳಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ" ಎಂದು IMD ತಿಳಿಸಿದೆ.
ಇವುಗಳಲ್ಲದೆ, ಮುಂದಿನ 3 ದಿನಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ರಾಜಸ್ಥಾನದಲ್ಲಿ ಮತ್ತು ಇಂದು ಉತ್ತರ ಪ್ರದೇಶ, ಸೌರಾಷ್ಟ್ರ ಮತ್ತು ಕಚ್ನಲ್ಲಿ ದಟ್ಟವಾದ ಮಂಜು ಇರುತ್ತದೆ. ಪೂರ್ವ ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ವಿದರ್ಭದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಸಿಡಿಲು ಮತ್ತು ಆಲಿಕಲ್ಲು ಸಹಿತ ಮಳೆಯಾಗಬಹುದು.
ಮಂಗಳವಾರ ವಿದರ್ಭ, ಛತ್ತೀಸ್ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ಬಿಹಾರ, ಇಂದೋರ್ ಮತ್ತು ಬಿಲಾಸ್ಪುರದಂತಹ ಸ್ಥಳಗಳಲ್ಲಿ ಬುಧವಾರದವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಡಿಸೆಂಬರ್ 29ರವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ. ಇಂದು ಈ ಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.












Click it and Unblock the Notifications