Karnataka Rains Alert: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು-ನಾಳೆ ಧಾರಾಕಾರ ಮಳೆ, ಎಲ್ಲೆಲ್ಲಿ ಅಲರ್ಟ್
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿಮೀ ತಲುಪುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಚದುರಿದಂತೆ ಸಾಧಾರಣ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ.
ತಮಿಳುನಾಡು ಮತ್ತು ನೆರೆಹೊರೆಗಳಲ್ಲಿ ಮೇಲ್ಮಟ್ಟದಲ್ಲಿ ಚಂಡಮಾರುತದ ಪರಿಚಲನೆ ಇದ್ದು, ಸರಾಸರಿ ಸಮುದ್ರ ಮಟ್ಟಕ್ಕಿಂತ 1.5 ಕಿ.ಮೀವರೆಗೆ ವಿಸ್ತರಿಸಿದೆ. ದಕ್ಷಿಣ ಅಂಡಮಾನ್ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆ ಇದ್ದು, ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀವರೆಗೆ ವಿಸ್ತರಿಸಿದೆ. ಮತ್ತೊಂದೆಡೆ ಕರ್ನಾಟಕದ ದಕ್ಷಿಣ ಒಳನಾಡಿನಿಂದ ನೈಋತ್ಯ ಮಧ್ಯಪ್ರದೇಶದವರೆಗೆ ಮರಾಠವಾಡದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಇರುವ ಈಶಾನ್ಯ ದಿಕ್ಕಿನಲ್ಲಿರುವ ತಗ್ಗು ಕಡಿಮೆಯಾಗಿದೆ ಎಂದು ವಿವರಿಸಿದೆ.

ಹಾಗಾಗಿ ರಾಜ್ಯದಾದ್ಯಂತ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆ ವರದಿಯಾಗಿದೆ.
ಬೆಂಗಳೂರು ಭಾಗದಲ್ಲಿ ಸಾಮಾನ್ಯವಾಗಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ನಿಂದ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಭಾರಿ ಮಳೆ?
ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಹಾಗೂ ಚಿತ್ತಾಪುರದಲ್ಲಿ ಭಾರಿ ಮಳೆಯಾಗಿದೆ. ಕೊಪ್ಪ, ಚಿತ್ರದುರ್ಗ, ಶೃಂಗೇರಿ, ಭದ್ರಾವತಿ ಹುಮನಾಬಾದ್, ಬಂಡೀಪುರ, ತೊಂಡೇಭಾವಿ, ಜಯಪುರ, ತಿಪಟೂರು, ಗುಂಡ್ಲುಪೇಟೆ, ಭಾಗಮಂಡಲ, ಹಿಡಕಲ್ ಅಣೆಕಟ್ಟು, ಅಡಕಿ, ಬನವಾಸಿ, ಶಿಗ್ಗಾಂವ್, ಸೇಡಂ, ಇಂಡಿ, ಬೆಂಗಳೂರು, ಹುಣಸೂರು ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆ ವರದಿಯಾಗಿದೆ.
ಹಾಸನ ಜಿಲ್ಲೆಯಲ್ಲಿ ಏಪ್ರಿಲ್ 10ರವರೆಗೆ 5-20 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ವಿಜಯನಗರ, ಕೊಡಗು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ 5-10 ಮಿ.ಮೀ ಮಳೆಯಾಗಲಿದೆ. ಕೋಲಾರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ 1-10 ಮಿಮೀ ಮಳೆಯ ಮುನ್ಸೂಚನೆ ಇದೆ.
ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ. ಬೆಳಗಾವಿ ನಗರ, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ಗದಗದಲ್ಲಿ 32 ಡಿಗ್ರಿ ಸೆಲ್ಸಿಯಸ್ ಮತ್ತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ 33, ಬೀದರ್, ಉತ್ತರ ಆಂತರಿಕ ಕರ್ನಾಟಕದ ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಕಲಬುರ್ಗಿ, ಆಗುಂಬೆ, ಬೆಂಗಳೂರಿನಲ್ಲಿ 24ರಿಂದ 30, ಚಿಕ್ಕಮಗಳೂರು, ಚಿಂತಾಮಣಿ ಮತ್ತು ಮಡಿಕೇರಿ ಮತ್ತು ಚಾಮರಾಜನಗರ, ದಾವಣಗೆರೆ, ಹಾಸನದಲ್ಲಿ 31ರಿಂದ 33 ಡಿಗ್ರಿ ಸೆಲ್ಸಿಯಸ್ ಸೇರಿ ದಕ್ಷಿಣ ಒಳ ಕರ್ನಾಟಕದ ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಮತ್ತು ಮಂಡ್ಯ ಭಾಗದಲ್ಲಿ ತಾಪಮಾನ ಹೆಚ್ಚಾಗಿರಲಿದೆ.

ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಆಂತರಿಕ ಕರ್ನಾಟಕ ಮತ್ತು ಬೆಂಗಳೂರು (HAL) ವಿಮಾನ ನಿಲ್ದಾಣ, ಬೆಂಗಳೂರು ನಗರ, ಚಿಕ್ಕಮಗಳೂರು ಮತ್ತು ದಕ್ಷಿಣದ ಚಿಂತಾಮಣಿ, ಬೆಳಗಾವಿ, ಬೀದರ್, ವಿಜಯಪುರ, ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಲ್ಲೂ ತಾಪಮಾನ ಕಡಿಮೆಯಾಗಿದೆ. ಬೆಂಗಳೂರು (ಕೆಐಎಎಲ್) ವಿಮಾನ ನಿಲ್ದಾಣ, ದಾವಣಗೆರೆ, ಮಂಡ್ಯ, ದಕ್ಷಿಣದ ಶಿವಮೊಗ್ಗ ಬಾಗಲಕೋಟೆ ಮತ್ತು ಹಾಸನದಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಿದ್ದರೆ, ದಕ್ಷಿಣ ಒಳ ಕರ್ನಾಟಕದ ಮೈಸೂರು, ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ವರದಿಯಾಗಿದೆ.
ಎಲ್ಲೆಲ್ಲಿ ತಾಪಮಾನ ಕುಸಿತ?
ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಹಾವೇರಿಯಲ್ಲಿ ಸಾಮಾನ್ಯ ಮಟ್ಟಕ್ಕಿಂತ 7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನದಲ್ಲಿ ಕುಸಿದಿದೆ. ಗದಗದಲ್ಲಿ 4.9, ಕಾರವಾರ 2.8 ಡಿಗ್ರಿ ಸೆಲ್ಸಿಯಸ್, ಉತ್ತರ ಒಳನಾಡಿನ ಧಾರವಾಡದಲ್ಲಿ 3, ಕೊಪ್ಪಳದಲ್ಲಿ 2.9, ಬೆಂಗಳೂರು ನಗರ 3.9, ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣ 3.8, ಬೆಂಗಳೂರು ವಿಮಾನ ನಿಲ್ದಾಣ 3.6, ಚಿತ್ರದುರ್ಗ 2.1, ದಕ್ಷಿಣ ಒಳನಾಡಿನ ಹಾಸನ 3.3, ಮತ್ತು ಮಡಿಕೇರಿಯಲ್ಲಿ 2.6 ಗರಿಷ್ಠ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 2 ದಿನಗಳ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಬಳಿಕ ನಂತರದ 3 ದಿನಗಳಲ್ಲಿ ತಾಪಮಾನವು 2ರಿಂದ 4 ಡಿಗ್ರಿ ಸೆಲ್ಸಿಯಸ್ ಏರಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮೂರು ದಿನಗಳಲ್ಲಿ 2-3ರಷ್ಟು ತಾಪಮಾನ ಏರಿಕೆ ಕಾಣಲಿದೆ. ಉಳಿದಂತೆ ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ಮುಂದಿನ 5 ದಿನಗಳಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications